ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತುಮಕೂರಲ್ಲಿ ಸಾಹಿತ್ಯ ಸಮ್ಮೇಳನ:ಕಸಾಪ ಕಾರ್ಯಕಾರಿ ಮಂಡಳಿ ಅಸ್ತು

By Staff
|
Google Oneindia Kannada News

ಬೆಂಗಳೂರು : 69 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ತುಮಕೂರಿನಲ್ಲಿ ನಡೆಸಲು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಮಂಡಳಿ ಭಾನುವಾರ ನಿರ್ಧರಿಸಿದೆ.

ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಹರಿಕೃಷ್ಣ ಪುನರೂರು ಆಯ್ಕೆಯಾದ ನಂತರ ಇದೇ ಮೊದಲ ಬಾರಿಗೆ ಜರುಗಿದ ಕಸಾಪ ಕಾರ್ಯಕಾರಿ ಮಂಡಳಿ ಸಭೆ ತುಮಕೂರಿನಲ್ಲಿ ಸಾಹಿತ್ಯ ಸಮ್ಮೇಳನವನ್ನು ನಡೆಸುವ ಬಗೆಗೆ ಸರ್ವಾನುಮತದ ನಿರ್ಣಯ ಕೈಗೊಂಡಿತು. ಸಮ್ಮೆಳನ ನಡೆಸಲು ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧವಿರುವುದಾಗಿ ತುಮಕೂರು ಜಿಲ್ಲಾ ಉಸ್ತುವಾರಿ ಮಂತ್ರಿ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.

ಈ ಮುನ್ನ ತುಮಕೂರಿನಲ್ಲಿ ನಡೆಯಬೇಕಿದ್ದ ಸಾಹಿತ್ಯ ಸಮ್ಮೇಳನ ರದ್ದಾಗಿದ್ದ ಸಂದರ್ಭದಲ್ಲಿ ಆ ಸಮ್ಮೇಳನವನ್ನು ಬೆಂಗಳೂರಿನಲ್ಲಿಯೇ ನಡೆಸಲು ಆಗಿನ ಕಸಾಪ ಅಧ್ಯಕ್ಷ ಎನ್‌.ಬಸವಾರಾಧ್ಯ ಒಲವು ತೋರಿಸಿದ್ದರು. ಆದರೆ, ಸಂಪನ್ಮೂಲಗಳ ಕೊರತೆ ಹಾಗೂ ಸಮ್ಮೇಳನ ನಡೆಸಲು ಯಾರೂ ಮುಂದಾಗದೆ ಇದ್ದುದರಿಂದ ಸಮ್ಮೇಳನ ಸ್ಥಗಿತಗೊಂಡಿತ್ತು .

(ಇನ್ಫೋ ವಾರ್ತೆ)

ವಾರ್ತಾ ಸಂಚಯ
ಮುಖಪುಟ / ಸಾಹಿತ್ಯ ಸೊಗಡು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X