ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ನಿಮ್ಹಾನ್ಸ್ನ ಡಾ. ಸಿ.ಆರ್. ಚಂದ್ರಶೇಖರ್ಗೆ ಕಾರಂತ ಪ್ರಶಸ್ತಿ
ಮೂಡಬಿದಿರೆ : ಪ್ರಸಿದ್ಧ ಮನೋವೈದ್ಯ, ವಿಜ್ಞಾನ ಲೇಖಕ ಡಾ. ಸಿ. ಆರ್. ಚಂದ್ರಶೇಖರ್ ಅವರು ಈ ಬಾರಿಯ ಶಿವರಾಮ ಕಾರಂತ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕಡಲ ತೀರದ ಭಾರ್ಗವ ಎಂದೇ ಕರೆಸಿಕೊಂಡಿದ್ದ ಕನ್ನಡ ಸಾಹಿತ್ಯ ಲೋಕದ ದಿಗ್ಗಡ ಡಾ. ಶಿವರಾಮ ಕಾರಂತರ ಹೆಸರಿನಲಿ ್ಲ ಸ್ಥಾಪಿಸಲಾಗಿರುವ ಶಿವರಾಮ ಕಾರಂತ ಪ್ರತಿಷ್ಠಾನವು ಕಳೆದ ಹತ್ತು ವರ್ಷಗಳಿಂದ ಕನ್ನಡಕ್ಕಾಗಿ ವಿಶೇಷ ಸೇವೆ ಸಲ್ಲಿಸಿರುವ ಹಿರಿಯರಿಗೆ ಈ ಪುರಸ್ಕಾರವನ್ನು ನೀಡುತ್ತಾ ಬಂದಿದೆ.
ಡಾ. ಸಿ. ಆರ್. ಚಂದ್ರಶೇಖರ್ ಕಳೆದ ಮೂವತ್ತು ವರ್ಷಗಳಿಂದ ವೈದ್ಯಕೀಯ ಹಾಗೂ ಮನೋವೈದ್ಯಕೀಯ ಕ್ಷೇತ್ರದಲ್ಲಿ ದುಡಿದವರು. ಹಾಗೂ ಮನೋ ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿದ ಅನೇಕ ಪುಸ್ತಕಗಳನ್ನು, ಲೇಖನಗಳನ್ನು ಬರೆದು ಕನ್ನಡ ಸಾಹಿತ್ಯ ಲೋಕಕ್ಕೆ ವಿಶೇಷ ಕೊಡುಗೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಕಾರಂತ ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದೆ ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.
(ಇನ್ಫೋ ವಾರ್ತೆ)
Comments
Story first published: Tuesday, September 17, 2002, 5:30 [IST]