ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಾ. ವಿವೇಕ್‌ ರೈ ಮಡಿಲಿಗೆ ಪೊಳಲಿ ಶೀನಪ್ಪ ಹೆಗ್ಗಡೆ ಪುರಸ್ಕಾರ

By Staff
|
Google Oneindia Kannada News

ಉಡುಪಿ : ಇಲ್ಲಿನ ರಾಷ್ಟ್ರೀಯ ಗೋವಿಂದ ಪೈ ಸಂಶೋಧನಾ ಕೇಂದ್ರವು ಪ್ರತಿ ವರ್ಷ ನೀಡುತ್ತಿರುವ ಪೊಳಲಿ ಶೀನಪ್ಪ ಹೆಗ್ಗಡೆ ಪ್ರಶಸ್ತಿ ಈ ಬಾರಿ ಖ್ಯಾತ ಕನ್ನಡ ಹಾಗೂ ತುಳು ಭಾಷಾ ವಿದ್ವಾಂಸ, ಸಂಶೋಧಕ ಡಾ. ಬಿ. ಎ. ವಿವೇಕ ರೈ ಅವರಿಗೆ ದೊರೆತಿದೆ.

ತುಳು ನಾಡು ನುಡಿ ಹಾಗೂ ಸಂಸ್ಕೃತಿ ಕ್ಷೇತ್ರದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದವರಿಗೆ ಈ ಪ್ರಶಸ್ತಿಯನ್ನು ನೀಡುತ್ತಿದ್ದು, ತುಳು ಸಾಹಿತ್ಯ ಕ್ಷೇತ್ರಕ್ಕೆ ವಿವೇಕ ರೈ ಅವರು ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಈ ಪುರಸ್ಕಾರ ನೀಡಲು ನಿರ್ಧರಿಸಲಾಗಿದೆ.

ತುಳು ಅಕಾಡೆಮಿ ಸ್ಥಾಪನೆ ಕಾರ್ಯದಲ್ಲಿ ಮಹತ್ವದ ಪಾತ್ರ ವಹಿಸಿದ್ದ ವಿವೇಕ ರೈ, ತುಳು ಅಕಾಡೆಮಿ ಪ್ರಥಮ ಅಧ್ಯಕ್ಷರಾಗಿಯೂ ಕೆಲಸ ನಿರ್ವಹಿಸಿದ್ದರು. ಮಂಗಳೂರು ವಿಶ್ವ ವಿದ್ಯಾಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಹಾಗೂ ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡುತ್ತಿರುವ ವಿವೇಕ ರೈ, ಬೋಧನೆ, ಸಂಶೋಧನೆ, ಸಂಶೋಧನಾ ಮಾರ್ಗದರ್ಶನದಲ್ಲಿ ನಿರತರಾಗಿದ್ದಾರೆ.

(ಇನ್ಫೋ ವಾರ್ತೆ)

ಮುಖಪುಟ / ಸಾಹಿತ್ಯ ಸೊಗಡು


ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X