ಕಂಪ್ಯೂಟರ್ನಲ್ಲಿ ಕನ್ನಡ ಅಳವಡಿಕೆ 6 ತಿಂಗಳಲ್ಲಿ ಪೂರ್ಣ- ಬರಗೂರು
ಕಾರವಾರ: ಕನ್ನಡ ಭಾಷೆಯನ್ನು ಕಂಪ್ಯೂಟರ್ನಲ್ಲಿ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದ್ದು , 6 ತಿಂಗಳಲ್ಲಿ ಈ ಪ್ರಯತ್ನ ಪೂರ್ಣಗೊಳ್ಳುವುದೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬರಗೂರು ರಾಮಚಂದ್ರಪ್ಪ ತಿಳಿಸಿದ್ದಾರೆ.
ಕಾರವಾರ ತಾಲ್ಲೂಕಿನ ಬಾಡದ ಶಿವಾಜಿ ಕಲಾ ಮತ್ತು ವಾಣಿಜ್ಯ ಮಹಾ ವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಭಾಷೆ ಮತ್ತು ಕನ್ನಡಪರ ಕಾಳಜಿ ಎನ್ನುವ ವಿಷಯದ ಕುರಿತು ಮಾತನಾಡಿದ ಬರಗೂರು ರಾಮಚಂದ್ರಪ್ಪ ಕನ್ನಡ ಕಲಿಯುವವರು ಕೀಳರಿಮೆ ತೊರೆಯಬೇಕು. ಕನ್ನಡ ವಾತಾವರಣವನ್ನು ಸೃಷ್ಟಿಸಲು ಪ್ರಯತ್ನಿಸಬೇಕು ಎಂದು ಅಭಿಪ್ರಾಯ ಪಟ್ಟರು.
ಇಂಗ್ಲೀಷ್ ಮಾಧ್ಯಮ ಹಾಗೂ ಇಂಗ್ಲೀಷ್ ಪರಿಣತಿ ಬೇರೆ ಬೇರೆಯಾಗಿದ್ದು ಕನ್ನಡಿಗರು ಭಾಷೆಯಾಗಿ ಇಂಗ್ಲೀಷನ್ನು ಕಲಿಯಬೇಕಾಗಿದೆ. ಕನ್ನಡವನ್ನು ಆದರ್ಶ ಹಾಗೂ ವಿವೇಕದ ವಿಷಯವಾಗಿ ತೆಗೆದುಕೊಳ್ಳಬೇಕಿದೆ ಎಂದ ಬರಗೂರು- ಶಿಕ್ಷಣ, ಭಾಷೆ, ಸಂಸ್ಕೃತಿ ವಿಷಯಗಳಲ್ಲೂ ವ್ಯಾಪಾರಿ ಮನೋಭಾವನೆ ಕಾಣುತ್ತಿರುವ ಬಗೆಗೆ ವಿಷಾದಿಸಿದರು. ಶಿಕ್ಷಣ ತಜ್ಞರ ಜಾಗಗಳನ್ನು ಶಿಕ್ಷಣೋದ್ಯಮಿಗಳು ಆಕ್ರಮಿಸಿಕೊಂಡಿದ್ದಾರೆ ಎಂದು ಅವರು ಟೀಕಿಸಿದರು.
ಉತ್ತರ ಕನ್ನಡ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ ನಾಯ್ಕ, ಉಪನ್ಯಾಸಕಿ ವಿಜಯಲಕ್ಷ್ಮಿ ನಾಯ್ಕ, ಶಿವಾಜಿ ವಿದ್ಯಾಲಯದ ಪ್ರಾಂಶುಪಾಲ ಎಸ್.ಆರ್.ನಾಯ್ಕ ಕಾರ್ಯಕ್ರಮದಲ್ಲಿ ಹಾಜರಿದ್ದರು.
(ಇನ್ಫೋ ವಾರ್ತೆ)
ಬರಗೂರು ಬರವಣಿಗೆ ಹಾಗೂ ಬದುಕು
ಮುಖಪುಟ / ಸಾಹಿತ್ಯ ಸೊಗಡು
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications