ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಡಾ। ಎಚ್.ನರಸಿಂಹಯ್ಯ ಅವರಿಗೆ ಗೊರೂರು ಪ್ರಶಸ್ತಿ
ಬೆಂಗಳೂರು : ಪ್ರಸಿದ್ಧ ಶಿಕ್ಷಣ ತಜ್ಞ ಹಾಗೂ ಪುಟ್ಟಪರ್ತಿ ಸಾಯಿಬಾಬಾ ಅವರನ್ನು ಕಾಡಿಸಿದ ಖ್ಯಾತಿಯ ವಿಚಾರವಾದಿ ಡಾ। ಎಚ್. ನರಸಿಂಹಯ್ಯ ಅವರು 2001 ನೇ ಇಸವಿಯ ಗೊರೂರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಗೊರೂರು ಪ್ರತಿಷ್ಠಾನ ನೀಡುವ ಈ ಪ್ರಶಸ್ತಿಯನ್ನು ನವಂಬರ್ 25 ರಂದು ಬಸವನಗುಡಿಯ ನ್ಯಾಷನಲ್ ಕಾಲೇಜು ಸಭಾಂಗಣದಲ್ಲಿ ಜರುಗುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು. ಇದೇ ಸಂದರ್ಭದಲ್ಲಿ ಉದಯ ಟೀವಿಯ ಕಾರ್ಯಕ್ರಮ ನಿರೂಪಕಿ ಆದರ್ಶ ದಂಪತಿಗಳು ಖ್ಯಾತಿಯ ಶೈಲಜಾ ಸಂತೋಷ್ ಅವರಿಗೆ ಗೊರೂರು ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುವುದು.
ಮಾಹಿತಿ ತಂತ್ರಜ್ಞಾನ ಸಚಿವ ಬಿ.ಕೆ.ಚಂದ್ರಶೇಖರ್, ವಾರ್ತಾ ಸಚಿವ ಎಂ. ಶಿವಣ್ಣ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹಾರನಹಳ್ಳಿ ರಾಮಸ್ವಾಮಿ ಹಾಗೂ ನಿವೃತ್ತ ಮುಖ್ಯ ನ್ಯಾಯಾಧೀಶ ನಿಟ್ಟೂರು ಶ್ರೀನಿವಾಸರಾವ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸುವರು ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.
(ಇನ್ಫೋ ವಾರ್ತೆ)
ವಾರ್ತಾ
ಸಂಚಯ
ಮುಖಪುಟ
/
ಸಾಹಿತ್ಯ
ಸೊಗಡು
Comments
Story first published: Monday, April 15, 2002, 5:30 [IST]