ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಡಾ.ಗುರುಲಿಂಗ ಕಾಪಸೆ
ಬೆಂಗಳೂರು : ಧಾರವಾಡದ ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಹಾಗೂ ಪ್ರಸಿದ್ಧ ಸುಗಮ ಸಂಗೀತ ಗಾಯಕಿ ಎಚ್.ಆರ್. ಲೀಲಾವತಿ ಸಂಗೀತ ಮತ್ತು ನೃತ್ಯ ಅಕಾಡೆಮಿ ಅಧ್ಯಕ್ಷರಾಗಿ ನೇಮಕವಾಗುವುದು ಹೆಚ್ಚೂ ಕಡಿಮೆ ಖಚಿತವಾಗಿದೆ.
ಆರು ಅಕಾಡೆಮಿಗಳ ಅಧ್ಯಕ್ಷ ಸ್ಥಾನ ನೇಮಕ ಕುರಿತಾದ ಕಡತಕ್ಕೆ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಮಂಗಳವಾರ ಸಂಜೆ ಸಹಿ ಹಾಕಿದ್ದಾರೆಂದು ತಿಳಿದುಬಂದಿದ್ದು , ಈ ಕುರಿತಾದ ಅಧಿಕೃತ ಘೋಷಣೆಯನ್ನು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವೆ ರಾಣಿ ಸತೀಶ್ ಬುಧವಾರ ಸಂಜೆ ಪ್ರಕಟಿಸುವ ನಿರೀಕ್ಷೆಯಿದೆ ಎಂದು ನಮ್ಮ ಬಾತ್ಮೀದಾರರು ತಿಳಿಸ್ದಿದಾರೆ.
ಶಿಲ್ಪಕಲಾ ಅಕಾಡೆಮಿ ಹಾಗೂ ತುಳು ಭಾಷಾ ಅಕಾಡೆಮಿಗಳ ಅಧ್ಯಕ್ಷರ ನೇಮಕ ಕುರಿತಂತೆ ಸದ್ಯಕ್ಕೆ ಸರ್ಕಾರ ಯಾವುದೇ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿಲ್ಲ . ಉಳಿದಂತೆ ಎಲ್ಲ ಅಕಾಡೆಮಿಗಳ ಅಧ್ಯಕ್ಷರನ್ನು ಸರ್ಕಾರ ತಕ್ಷಣವೇ ನೇಮಕ ಮಾಡಲಿದೆ. ಸಂಗೀತ ಮತ್ತು ನೃತ್ಯ ಅಕಾಡೆಮಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಎಚ್.ಆರ್.ಲೀಲಾವತಿ ಪ್ರಸ್ತುತ ಕ್ಯಾಲಿಫೋರ್ನಿಯಾ ಪ್ರವಾಸದಲ್ಲಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಸಾಹಿತ್ಯ ಸೊಗಡು