ಕ್ಯಾಲಿಫೋರ್ನಿಯಾದ ಸನಿವೇಲ್ನಲ್ಲಿ ಪುರಂದರ ಆರಾಧನೆ
ಕ್ಯಾಲಿಫೋರ್ನಿಯಾ : ಎಲ್ಲಿದ್ದರೆ ಏನ್? ಎಂತಿದ್ದರೆ ಏನ್? ಎಂದೆಂದಿಗು ತಾನ್ - ಕನ್ನಡವೇ ಸತ್ಯ ... ಎಂದು ರಾಷ್ಟ್ರಕವಿ ಕುವೆಂಪು ಅವರು ವಿಶ್ವಕ್ಕೇ ಸಾರಿದ್ದಾರೆ. ಕನ್ನಡಿಗರು ಎಲ್ಲಿದ್ದರೂ ಅವರ ಕನ್ನಡತನ ಮಾತ್ರ ಸದಾ ಜಾಗೃತ. ಉತ್ತರ ಕ್ಯಾಲಿಫೋರ್ನಿಯಾದ ಕನ್ನಡಿಗರು ಸನಿವೇಲ್ ನಗರದ ಹಿಂದೂ ಮಂದಿರದ ಸಮುದಾಯ ಕೇಂದ್ರದಲ್ಲಿ ಶನಿವಾರ ಪುರಂದರ ದಾಸರ ಆರಾಧನೆ ಹಮ್ಮಿಕೊಂಡಿರುವುದೇ ಇದಕ್ಕೆ ಸಾಕ್ಷಿ.
ಕರ್ನಾಟಕ ಸಂಗೀತದ ಹಿರಿಮೆಯನ್ನು ತಮ್ಮ ಮುಂದಿನ ಪೀಳಿಗೆಗೂ ಪರಿಚಯಿಸಲು ಹಾಗೂ ಕನ್ನಡ ಸಾಹಿತ್ಯ ಹಾಗೂ ಸಂಸ್ಕೃತಿಯ ಕಳಕಳಿಯಿರುವ ಕನ್ನಡಿಗರು ಉತ್ತರ ಕ್ಯಾಲಿಫೋರ್ನಿಯಾ ಪ್ರದೇಶದಲ್ಲಿ ನಿಯಮಿತವಾಗಿ ಸಂಗೀತ ಕಚೇರಿಗಳನ್ನು ನಡೆಸುತ್ತಲೇ ಇರುತ್ತಾರೆ. ಇದಕ್ಕೆ ಸಹೃದಯಿ ಕನ್ನಡಿಗರ ಸಂಪೂರ್ಣ ಬೆಂಬಲವೂ ದೊರಕಿದೆ.
ಆರಾಧನೆ : ಪುರಂದರದಾಸರ ಆರಾಧನೆ ಶನಿವಾರ ಸನಿವೇಲ್ ಹಿಂದೂ ಮಂದಿರದ ಪ್ರಧಾನ ಅರ್ಚಕರಾದ ವಿದ್ವಾನ್ ಶ್ರೀ ಗಜಾನನ ಜೋಷಿಯವರ ನೇತೃತ್ವದಲ್ಲಿ ನೆರವೇರಲಿದೆ. ಕರ್ನಾಟಕ ಸಂಗೀತ ಪ್ರಪಿತಾಮಹರೆನಿಸಿದ ದಾಸವರೇಣ್ಯರಿಗೆ ಸಂಗೀತ ಸೇವೆಯ ಮೂಲಕ ಧನ್ಯವಾದ ಅರ್ಪಿಸುವ ಈ ಕಾರ್ಯಕ್ರಮದಲ್ಲಿ 25ಕ್ಕೂ ಹೆಚ್ಚು ಸಂಗೀತಗಾರರು ಭಾಗವಹಿಸುತ್ತಿದ್ದಾರೆ.
ಶನಿವಾರ (ಫೆ,10)ಮಧ್ಯಾಹ್ನ ಹನ್ನೆರಡೂವರೆಗೆ ಆರಂಭವಾಗಲಿರುವ ಈ ಗಾನಸುಧೆ ಕಾರ್ಯಕ್ರಮದಲ್ಲಿ ಮಕ್ಕಳು ಮತ್ತು ಕಿರಿಯ ಕಲಾವಿದರು, ಪಕ್ಕವಾದ್ಯಗಳಿಲ್ಲದೆ ಹಾಡುವವರು, ಪಕ್ಕವಾದ್ಯಗಳೊಂದಿಗೆ ಹಾಡುವವರ ಶ್ರುತಿಯ ಮಟ್ಟ ಅನುಸರಿಸುವವರು, ಹಿರಿಯ ಮತ್ತು ನುರಿತ ಕಲಾವಿದರು ಒಟ್ಟು ಏಳು ವಿಭಾಗಗಳಲ್ಲಿ ತಮ್ಮ ಸಂಗೀತ ಕೌಶಲ ಪ್ರದರ್ಶಿಸಲಿದ್ದಾರೆ.
ಮೃದಂಗ, ವೀಣೆ, ಕೊಳಲು, ಪಿಟೀಲು, ಘಟಂ ಕಲಾವಿದರು ಸಂಗೀತಗಾರರಿಗೆ ನೆರವಾಗಲಿದ್ದಾರೆ. ಶತಮಾನಗಳ ಹಿಂದೆಯೇ ಭಕ್ತಿ ಪಥದ ಮೂಲಕ ಸಮಾಜ ಸುಧಾರಣೆಗೆ ಶ್ರಮಿಸಿದ ದಾಸಶ್ರೇಷ್ಠರ ಈ ಆರಾಧನಾ ಮಹೋತ್ಸವದ ಬಗ್ಗೆ ಹೆಚ್ಚಿನ ವಿವರಗಳನ್ನು ಈ ಕೆಳಕಂಡ ಇ-ಮೇಲ್ಗಳನ್ನು ಸಂಪರ್ಕಿಸಿ ಪಡೆಯಬಹುದು.
Vadiraja Bhat:[email protected],
Sandhya Kedlaya:[email protected],
Harihareshwara:[email protected],
Ashok Kumar [email protected],
Parimala Muralidhara:[email protected],
Padmaja Kishore:[email protected],
Srikanth Sampigethaya:[email protected],
Nanda Kishore:[email protected],
Hemmige Varadarajan: [email protected],
B.V. Muralidhara: [email protected],
Pandit Gajanana Joshi : (408) 734-4554
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications