ರಾಷ್ಟ್ರಕವಿ ಕುವೆಂಪು ನಿವಾಸ ಫೆ.2ರಿಂದ ರಾಷ್ಟ್ರೀಯ ಸ್ಮಾರಕ
ಶಿವಮೊಗ್ಗ : ಮನುಜ ಮತ ವಿಶ್ವ ಪಥ - ವಿಶ್ವ ಮಾನವ ಸಂದೇಶವನ್ನು ಜಗತ್ತಿಗೇ ಸಾರಿದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ (ಕುವೆಂಪು) ಅವರು ಹುಟ್ಟಿ ಬೆಳೆದ ಮಲೆನಾಡಿನ ಮಡಿಲಲ್ಲಿ ಹಚ್ಚ ಹಸುರಿನ ನಡುವೆ ಕಂಗೊಳಿಸುತ್ತಿರುವ ಕುಪ್ಪಳ್ಳಿಯ ನಿವಾಸ ಈಗ ನವೀಕರಣಗೊಂಡು ರಾಷ್ಟ್ರೀಯ ಸ್ಮಾರಕವಾಗಿ ರೂಪುತಳೆದಿದೆ. ಫೆ.2ರಂದು ಈ ಸ್ಮಾರಕವನ್ನು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ರಾಷ್ಟ್ರಕ್ಕೆ ಅರ್ಪಿಸಲಿದ್ದಾರೆ.
ಕವಿಯ ತವರು ಕುಪ್ಪಳ್ಳಿಯನ್ನು ಅಭಿವೃದ್ಧಿ ಪಡಿಸಲು 1993ರಲ್ಲಿ ಅಸ್ತಿತ್ವಕ್ಕೆ ಬಂದ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ, ಕುವೆಂಪು ಅವರ ಮನೆ ಹಾಗೂ ಪರಿಸರವನ್ನು ಸಂರಕ್ಷಿಸುವ ಹಾಗೂ ಅವರ ನೆನಪವನ್ನು ಸದಾ ಹಸಿರಾಗಿರಿಸಲು, ಹಾಗೂ ಇದನ್ನೊಂದು ಸ್ಫೂರ್ತಿಯ ಸೆಲೆಯಾಗಿ ಉಳಿಸಲು ಮೂಲ ನಿವಾಸಕ್ಕೆ ಧಕ್ಕೆ ಬಾರದಂತೆ ಪುನರ್ನವೀಕರಿಸಿದೆ.
ಕುವೆಂಪು ಅವರ ನಿವಾಸದ ನವೀಕರಣ ಹಾಗೂ ಕವಿಶೈಲದ ಸ್ಮಾರಕ ನಿರ್ಮಾಣಕ್ಕೆ 1.20 ಕೋಟಿ ರುಪಾಯಿ ವೆಚ್ಚ ಮಾಡಲಾಗಿದೆ. ಈ ವೆಚ್ಚವನ್ನು ರಾಜ್ಯ ಸರಕಾರ ಹಾಗೂ ಕವಿಯ ಅಭಿಮಾನಿಗಳು ಭರಿಸಿದ್ದಾರೆ. ಈ ವಿಷಯವನ್ನು ಪ್ರತಿಷ್ಠಾನದ ಅಧ್ಯಕ್ಷರೂ ಹಾಗೂ ನ್ಯಾಯಮೂರ್ತಿಗಳೂ ಆದ ಎನ್.ಡಿ. ವೆಂಕಟೇಶ್ ತಿಳಿಸಿದ್ದಾರೆ.
ಫೆ. 2ರಂದು ನಡೆಯುವ ಕಾರ್ಯಕ್ರಮದ ವಿವರ ನೀಡಲು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನ್ಯಾಯಮೂರ್ತಿಗಳು ಕಾರ್ಯಕ್ರಮದ ನಿಮಿತ್ತ ಮೂರು ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದರು. ಕವಿ ಡಾ. ಜಿ.ಎಸ್. ಶಿವರುದ್ರಪ್ಪ ಕವಿಶೈಲದ ಸ್ಮೃತಿಗಳನ್ನು ಉದ್ಘಾಟಿಸಲಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಯು.ಆರ್. ಅನಂತಮೂರ್ತಿ , ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರೂ ಸೇರಿದಂತೆ ಚಿಕ್ಕಮಗಳೂರು ಹಾಗೂ ಶಿವಮೊಗ್ಗದ ಚುನಾಯಿತ ಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಕುವೆಂಪು ಅವರ ಸಾಹಿತ್ಯ ವರ್ತಮಾನದ ಕಣ್ಣಲ್ಲಿ , ಕುವೆಂಪು ಸಾಹಿತ್ಯದಲ್ಲಿ ಪರಿಸರ ಪ್ರಜ್ಞೆ, ಕುವೆಂಪು ಸಾಹಿತ್ಯದ ವೈಚಾರಿಕ ನೆಲೆಗಳು ಮುಂತಾದ ವಿಷಯಗಳ ಕುರಿತು ವಿಚಾರ ಸಂಕಿರಣಗಳು ನಡೆಯಲಿವೆ. ನ್ಯಾ. ಕೋ. ಚನ್ನಬಸಪ್ಪ, ಪ್ರೊ. ಬಿ.ಎಂ. ಕುಮಾರ ಸ್ವಾಮಿ, ಪ್ರೊ. ಜಿ.ಕೆ. ಗೋವಿಂದರಾವ್, ಪ್ರೊ. ಜಿ.ಎಚ್. ನಾಯಕ, ಪ್ರೊ. ಪ್ರಧಾನ್ ಗುರುದತ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಾಜಿ ಉಪಮುಖ್ಯಮಂತ್ರಿ ಸಿದ್ಧರಾಮಯ್ಯ, ಮಾಜಿ ಸಚಿವ ಗೋವಿಂದೇಗೌಡ ಮೊದಲಾದವರು ಪಾಲ್ಗೊಳ್ಳುತ್ತಿದ್ದಾರೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕುವೆಂಪು ಪ್ರತಿಷ್ಠಾನದ ಖಜಾಂಚಿ ನಾರಾಯಣ ಮೂರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಹರಿಕುಮಾರ್, ವಾರ್ತಾಧಿಕಾರಿ ರಾಮೇಗೌಡ ಹಾಜರಿದ್ದರು.
ಮುಖಪುಟ / ಸಾಹಿತ್ಯ ಸೊಗಡು![]()
![]()
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications