ತ್ವರಿತ ಅಲರ್ಟ್ ಗಳಿಗಾಗಿ
For Daily Alerts
‘ಕನ್ನಡ ಎನೆ ಕುಣಿದಾಡದ ಅಧಿಕಾರಿಗಳಿಗೆ ಗುಂಡಿಕ್ಕಿ’
ತುಮಕೂರು : ಕನ್ನಡವನ್ನು ಬೇಜವಾಬ್ದಾರಿ ಧೋರಣೆಯಿಂದ ಕಾಣುವ ಅಧಿಕಾರಿಗಳನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹರಿಕೃಷ್ಣ ಪುನರೂರು ವೀರಾವೇಶದಿಂದ ಹೇಳಿದರು.
ತುಮಕೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿದ್ದ ಬಡಾವಣೆ ಮಟ್ಟದ ಪ್ರಥಮ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಭಾಷಣದಲ್ಲಿ ಭಾನುವಾರ (ಫೆ.9) ಹರಿಕೃಷ್ಣ ಪುನರೂರು ಅಕ್ಷರಶಃ ಗುಡುಗಿದರು. ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವ ಅಧಿಕಾರಿಗಳು ಕನ್ನಡ ಕಲಿತು, ಆಡಳಿತದಲ್ಲಿ ಅದನ್ನೇ ಜಾರಿಗೆ ತರುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಾರೆ. ಆದರೆ ಕರ್ನಾಟಕದ ಅಧಿಕಾರಿಗಳು ಇಂಗ್ಲಿಷ್ನಲ್ಲೇ ವ್ಯವಹಾರ ಮಾಡುವ ಮೂಲಕ ಕನ್ನಡ ವಿರೋಧಿ ಧೋರಣೆ ತಳೆದಿದ್ದಾರೆ. ಇಂಥವರನ್ನು ಗುಂಡಿಕ್ಕಿ ಕೊಲ್ಲಬೇಕೆಂದು ಪುನರೂರು ಅಭಿಪ್ರಾಯ ಪಟ್ಟರು.
(ಇನ್ಫೋ ವಾರ್ತೆ)
ಮುಖಪುಟ / ಸಾಹಿತ್ಯ ಸೊಗಡು
Comments
Story first published: Monday, February 10, 2003, 5:30 [IST]