ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

70ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ನಿರ್ಣಯಗಳು

By Staff
|
Google Oneindia Kannada News

ಬೆಳಗಾವಿ: ಪ್ರಾದೇಶಿಕ ಅಸಮತೋಲನ ನಿವಾರಣೆ ಹಾಗೂ ಕನ್ನಡ ಭಾಷೆಯ ಉಳಿವಿಗಾಗಿ ಹಕ್ಕೊತ್ತಾಯ-ನಿರ್ಣಯಗಳನ್ನು ಅಂಗೀಕರಿಸುವುದರೊಂದಿಗೆ ಮೂರು ದಿನಗಳ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಭಾನುವಾರ ಸಂಜೆ ಮುಕ್ತಾಯವಾಯಿತು.

ಸಮ್ಮೇಳನದಲ್ಲಿ ಅಂಗೀಕರಿಸಿದ ಪ್ರಮುಖ ನಿರ್ಣಯಗಳು :

  • ಮುಂದಿನ ವರ್ಷದಿಂದ ವಿಶ್ವ ಕನ್ನಡ ಸಮ್ಮೇಳನ
  • ರೈತರ ಮತ್ತು ಕಾರ್ಮಿಕ ಹಿತ ಕಾಪಾಡುವ ಹೊಣೆ ಸರಕಾರದ್ದು
  • ಬೆಳಗಾವಿಯಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಸಬೇಕು
  • ಮಹಾಜನ ವರದಿಯನ್ನು ಯಥಾವತ್‌ ಜಾರಿ ಮಾಡಬೇಕು
  • ಡಾ. ನಂಜುಡಪ್ಪ ವರದಿ ಅನುಷ್ಠಾನಕ್ಕೆ ಆಯವ್ಯಯದಲ್ಲಿ ಹಣ ಕಾದಿರಿಸಬೇಕು
  • ಮಕ್ಕಳ ಸಾಹಿತ್ಯಕ್ಕೆ ಪ್ರೋತ್ಸಾಹ ನೀಡಲು ಮಕ್ಕಳ ಸಾಹಿತ್ಯ ಅಕಾಡೆಮಿಯನ್ನು ಸ್ಥಾಪಿಸಬೇಕು
  • ತಾಂತ್ರಿಕ ಮತ್ತು ವೈದ್ಯಕೀಯ ಕೋರ್ಸ್‌ಗಳಲ್ಲಿ ಕನ್ನಡ ಬೋಧನೆಯನ್ನು ಕಡ್ಡಾಯಗೊಳಿಸಬೇಕು
ಈ ಏಳು ನಿರ್ಣಯಗಳ ಅನುಷ್ಠಾನಕ್ಕೆ ‘ನಿರ್ಣಯ ಜಾರಿ ಉನ್ನತಾಧಿಕಾರಿ ಕಾರ್ಯಪಡೆ’ಯನ್ನು ರಚಿಸಲಾಗಿದೆ ಎಂದು ಸಮ್ಮೇಳನ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ತಿಳಿಸಿದ್ದಾರೆ. ಈಗಿನ ಸಮ್ಮೇಳನಾಧ್ಯಕ್ಷ ಡಾ. ಪಾಟೀಲ ಪುಟ್ಟಪ್ಪ, ಹಿಂದಿನ ಸಮ್ಮೇಳನಾಧ್ಯಕ್ಷ ಡಾ. ಯು. ಆರ್‌. ಅನಂತ ಮೂರ್ತಿ, ಕಸಾಪ ಅಧ್ಯಕ್ಷ ಹರಿಕೃಷ್ಣ ಪುನರೂರು ಕಾರ್ಯಪಡೆಯ ಸದಸ್ಯರಾಗಿರುತ್ತಾರೆ.

ಮುಂದಿನ ಸಮ್ಮೇಳನ ಮೂಡಬಿದಿರೆಯಲ್ಲಿ

ಅಖಿಲ ಭಾರತ 71ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ದಕ್ಷಿಣ ಕನ್ನಡದ ಮೂಡಬಿದರೆಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಕನ್ನಡ ಸಾಹಿತ್ಯ ಪರಿಷತ್‌ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ದ. ಕ. ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ ಮೂಡಬಿದರೆಯಲ್ಲಿ ಸಮ್ಮೇಳನ ನಡೆಸುವ ಪ್ರಸ್ತಾಪವನ್ನು ಮಂಡಿಸಿದರು. ವ್ಯಾಪಕ ಚರ್ಚೆಯ ನಂತರ ಮುಂದಿನ ಸಮ್ಮೇಳನವನ್ನು ಮೂಡಬಿದರೆಯಲ್ಲಿ ನಡೆಸಲು ನಿರ್ಧರಿಸಲಾಯಿತು.

(ಇನ್ಫೋ ವಾರ್ತೆ)

ಮುಖಪುಟ / ಸಾಹಿತ್ಯ ಸೊಗಡು


ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X