ಬೆಳಗಾವಿ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಬೇಕಾ ?
ಬೆಂಗಳೂರು: ಮಾರ್ಚಿ 7 ರಿಂದ ಬೆಳಗಾವಿಯಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಬಯಸುವ ಆಸಕ್ತರು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳುವಂತೆ ಕನ್ನಡ ಸಾಹಿತ್ಯ ಪರಿಷತ್ ಪ್ರಕಟಣೆ ತಿಳಿಸಿದೆ.
ಸಮ್ಮೇಳನದಲ್ಲಿ ಭಾಗವಹಿಸಲು ಬಯಸುವ ಆಸಕ್ತರು 100 ರುಪಾಯಿ ಪ್ರತಿನಿಧಿ ಶುಲ್ಕ ಪಾವತಿಸಿ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದು. ಪ್ರತಿನಿಧಿಗಳಿಗೆ ಮೂರೂ ದಿನಗಳ ಕಾಲ ಊಟ ಹಾಗೂ ವಸತಿ ಕಲ್ಪಿಸಲಾಗುವುದು. ಸಮ್ಮೇಳನದಲ್ಲಿ ಪುಸ್ತಕ ಮಾರಾಟ ಮಾಡಲು ಬಯಸುವವರು 500 ರುಪಾಯಿ ಶುಲ್ಕ ಸಲ್ಲಿಸಿ ಮಳಿಗೆಯನ್ನು ಕಾಯ್ದಿರಿಧಿಸಬಹುದು.
ಪ್ರತಿನಿಧಿ ಶುಲ್ಕ ಪಾವತಿಸಿ ಹೆಸರು ನೋಂದಾಯಿಸಲು ಹಾಗೂ ಪುಸ್ತಕ ಮಳಿಗೆ ಕಾಯ್ದಿರಿಸಲು ಕೊನೆಯ ದಿನಾಂಕ ಫೆಬ್ರವರಿ 5. ಸಂಪರ್ಕ ವಿಳಾಸ :
ಕನ್ನಡ ಸಾಹಿತ್ಯ ಪರಿಷತ್ತು , ಪಂಪ ಮಹಾಕವಿ ರಸ್ತೆ , ಚಾಮರಾಜಪೇಟೆ, ಬೆಂಗಳೂರು- 560 018
ಅಥವಾ,
ಸ್ವಾಗತ ಸಮಿತಿ, ಅಖಿಲ ಭಾರತ 70 ನೇ ಕನ್ನಡ ಸಾಹಿತ್ಯ ಸಮ್ಮೇಳನ, ಕನ್ನಡ ಸಾಹಿತ್ಯ ಭವನ, ಚನ್ನಮ್ಮ ವೃತ್ತ , ಬೆಳಗಾವಿ.
(ಇನ್ಫೋ ವಾರ್ತೆ)
ಮುಖಪುಟ / ಸಾಹಿತ್ಯ ಸೊಗಡು











Click it and Unblock the Notifications