ನಾಡಗೀತೆ : ವಿವಾದಿತ ಚರಣಕ್ಕೆ ಕತ್ತರಿ
ಬೆಂಗಳೂರು : ಕುವೆಂಪು ವಿರಚಿತ ನಾಡಗೀತೆಯಲ್ಲಿ ಮಧ್ವಾಚಾರ್ಯರ ಹೆಸರಿನ ಸೇರ್ಪಡೆ ಕುರಿತಂತೆ ಎದ್ದಿದ್ದ ವಿವಾದಕ್ಕೆ ರಾಜ್ಯ ಸರಕಾರ ತೆರೆ ಎಳೆದಿದೆ. ' ಶಂಕರ, ರಾಮಾನುಜ, ಬಸವೇಶ್ವರ " ರು ಇರುವ ಚರಣ ಹೊರತುಪಡಿಸಿ ಒಂದು ಪಲ್ಲವಿ ಹಾಗೂ ಎರಡು ಚರಣಗಳನ್ನು ನಾಡಗೀತೆಯಾಗಿ ಆಯ್ಕೆ ಮಾಡಿ ಆದೇಶ ಹೊರಡಿಸಿದೆ.
ಜ.7ರಂದು (ಸಂಕಇ 207 ಕಸಧ 2003) ಈ ಕುರಿತು ಅಧಿಕೃತ ಆದೇಶ ಹೊರಡಿಸಲಾಗಿದೆ. ಪರಿಷ್ಕೃತ ನಾಡಗೀತೆಯಲ್ಲಿ 'ಶಂಕರ ರಾಮಾನುಜ ವಿದ್ಯಾರಣ್ಯ, ಬಸವೇಶ್ವರರಿಹ ದಿವ್ಯಾರಣ್ಯ..." ಮತ್ತು ' ತೈಲಪ ಹೊಯ್ಸಳರಾಳಿದ ನಾಡೆ... " ಎಂಬ ಸಾಲುಗಳಿರುವ ಚರಣಗಳಿಗೆ ಕತ್ತರಿ ಪ್ರಯೋಗ ಮಾಡಲಾಗಿದೆ. ಹಾಡಲು ಹಿಡಿಯುವ ಸಮಯದ ದೃಷ್ಟಿಯಿಂದ ಕೆಲ ಚರಣಗಳನ್ನು ಕೈಬಿಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ. ಪರಿಷ್ಕೃತ ನಾಡಗೀತೆ ಎರಡು ನಿಮಿಷ ಹತ್ತು ಸೆಕೆಂಡು ತೆಗೆದುಕೊಳ್ಳುತ್ತದೆ.
ಆಯ್ದ ಚರಣಗಳನ್ನು ನಾಡಗೀತೆಯಾಗಿ ಪರಿಗಣಿಸಬೇಕು ಮತ್ತು ಹಾಡುವಾಗ ಎದ್ದು ನಿಂತು ಗೌರವ ಸಲ್ಲಿಸಬೇಕೆಂದು ಸರಕಾರ ಆದೇಶದಲ್ಲಿ ಸ್ಪಷ್ಟಪಡಿಸಿದೆ. ನಾಡಗೀತೆಯನ್ನು ಎಲ್ಲ ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಎಲ್ಲ ಸಾಂಸ್ಕೃತಿಕ, ಸಾಹಿತ್ಯಿಕ ಮತ್ತು ಇತರೆ ಅಧಿಕೃತ ಕಾರ್ಯಕ್ರಮಗಳಲ್ಲಿ ಹಾಡಬೇಕು ಎಂದು ತಿಳಿಸಿದೆ.
ಈಗಿನ ನಾಡಗೀತೆ
ಜಯ್ ಭಾರತ ಜನನಿಯ ತನುಜಾತೆ,
ಜಯಹೇ ಕರ್ನಾಟಕ ಮಾತೆ!
ಜಯ್ ಸುಂದರ ನದಿ ವನಗಳ ನಾಡೆ,
ಜಯ ಹೇ ರಸಋಷಿಗಳ ಬೀಡೆ!
ಜನನಿಯ ಜೋಗುಳ ವೇದದ ಘೋಷ,
ಜನನಿಗೆ ಜೀವವು ನಿನ್ನಾವೇಶ.
ಹಸುರಿನ ಗಿರಿಗಳ ಸಾಲೆ
ನಿನ್ನಯ ಕೊರಳಿನ ಮಾಲೆ,
ಕಪಿಲ ಪತಂಜಲ ಗೌತಮ ಜಿನನುತ
ಭಾರತ ಜನನಿಯ ತನುಜಾತೆ
ಜಯ ಹೇ ಕರ್ನಾಟಕ ಮಾತೆ!
ಸರ್ವ ಜನಾಂಗದ ಶಾಂತಿಯ ತೋಟ,
ರಸಿಕರ ಕಂಗಳ ಸೆಳೆಯುವ ನೋಟ.
ಹಿಂದೂ ಕ್ರೈಸ್ತ ಮುಸಲ್ಮಾನ
ಪಾರಸಿಕ ಜೈನರುದ್ಯಾನ.
ಜನಕನ ಹೋಲುವ ದೊರೆಗಳ ಧಾಮ,
ಗಾಯಕ ವೈಣಿಕರಾರಾಮ
ಕನ್ನಡಿ ನುಡಿ ಕುಣಿದಾಡುವ ಗೇಹ,
ಕನ್ನಡ ತಾಯಿಯ ಮಕ್ಕಳ ದೇಹ!
ಜಯ್ ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ!
ಜಯ್ ಸುಂದರ ನದಿ ವನಗಳ ನಾಡೆ,
ಜಯ ಹೇ ರಸಋಷಿಗಳ ಬೀಡೆ.
ಕೈಬಿಟ್ಟ ಸಾಲುಗಳು
ಭೂದೇವಿಯ ಮಕುಟದ ನವಮಣಿಯೆ,
ಗಂಧದ ಚಂದದ ಹೊನ್ನಿನ ಗಣಿಯೆ;
ರಾಘವ ಮಧುಸೂದನರವತರಿಸಿದ
ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ!
ಶಂಕರ ರಾಮಾನುಜ ವಿದ್ಯಾರಣ್ಯ
ಬಸವೇಶ್ವರರಿಹ ದಿವ್ಯಾರಣ್ಯ
ರನ್ನ ಷಡಕ್ಷರಿ ಪೊನ್ನ
ಪಂಪ ಲಕುಮಿಪತಿ ಜನ್ನ
ಕಬ್ಬಿಗರುದಿಸಿದ ಮಂಗಳಧಾಮ,
ಕವಿಕೋಗಿಲೆಗಳ ಪುಣ್ಯಾರಾಮ!
ನಾನಕ ರಾಮಾನಂದ ಕಬೀರರ
ಭಾರತ ಜನನಿಯ ತನುಜಾತೆ,
ಜಯಹೇ ಕರ್ನಾಟಕ ಮಾತೆ!
ತೈಲಪ ಹೊಯ್ಸಳರಾಳಿದ ನಾಡೆ,
ಡಂಕಣ ಜಕಣರ ನೆಚ್ಚಿನ ಬೀಡೆ,
ಕೃಷ್ಣ ಶರಾವತಿ ತುಂಗಾ
ಕಾವೇರಿಯ ವರ ರಂಗ!
ಚೈತನ್ಯ ಪರಮಹಂಸ ವಿವೇಕರ
ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ!
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications