ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜ.28: ರಂಗಾಯಣದಲ್ಲಿ ರಾಷ್ಟ್ರೀಯ ನಾಟಕೋತ್ಸವ

By Staff
|
Google Oneindia Kannada News

ಬೆಂಗಳೂರು: ಸಾಂಸ್ಕೃತಿಕ ಕೇಂದ್ರ ರಂಗಾಯಣವು ಜನವರಿ 28ರಿಂದ ಫೆಬ್ರವರಿ 2ರವರೆಗೆ ನಾಟಕೋತ್ಸವವನ್ನು ಮೈಸೂರಿನಲ್ಲಿ ಹಮ್ಮಿಕೊಂಡಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಡೆಯಲಿರುವ ಈ ‘ಬಹುರೂಪಿ ನಾಟಕೋತ್ಸವ’ ವನ್ನು ಭಕ್ತಿ ಕವಿ ಹಾಗೂ ಪಾರಂಪರಿಕ ನಟ ಬಹುರೂಪಿ ಚೌಡಯ್ಯ ಅವರ ಸ್ಮರಣೆಗಾಗಿ ಆಯೋಜಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವೆ ರಾಣಿ ಸತೀಶ್‌ ತಿಳಿಸಿದ್ದಾರೆ.

ಸಾಮಾಜಿಕ ನ್ಯಾಯವನ್ನು ಮುಖ್ಯ ಆಶಯವನ್ನಾಗಿ ಇರಿಸಿಕೊಂಡು ಈ ನಾಟಕೋತ್ಸವವನ್ನು ಆಯೋಜಿಸಲಾಗಿದೆ. ಭಾರತೀಯ ಜಾನಪದ ಮತ್ತು ಕಥನ ಶೈಲಿಗೆ ಹೆಚ್ಚು ಒತ್ತು ಕೊಡಲಾಗುವುದು. ಒಟ್ಟು 40 ಲಕ್ಷ ರೂಪಾಯಿ ಅಂದಾಜಿನ ಈ ಉತ್ಸವದ ಬಹುರೂಪಿ ಭಾಗಕ್ಕೆ 4 ಲಕ್ಷ ರೂಪಾಯಿ ವೆಚ್ಚ ಮಾಡಲಾಗುತ್ತಿದೆ ಎಂದು ಸಚಿವೆ ಹೇಳಿದರು.

(ಇನ್ಫೋ ವಾರ್ತೆ)

ಮುಖಪುಟ / ಸಾಹಿತ್ಯ ಸೊಗಡು


ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X