ಟಾಪ್-5 ನಿಸಾರ್ ಪದ್ಯಗಳು
ಕವಿ ಕೆ.ಎಸ್. ನಿಸಾರ್ ಅಹಮದ್ ಅವರ ಲೇಖನಿಯಿಂದ ಹೊಮ್ಮಿದ ಅನೇಕ ಕವಿತೆಗಳು, ಹಾಡುಗಳಾಗಿ ಜನರ ಮನಸೂರೆಗೊಂಡಿವೆ. ಅವರ ಐದು ಪ್ರಸಿದ್ಧ ಕವಿತೆಗಳ ಕೆಲ ಸಾಲುಗಳು ಓದುಗರ ಮುಂದೆ.
ಜೋಗದ ಸಿರಿ ಬೆಳಕಿನಲ್ಲಿ , ತುಂಗೆಯ ತೆನೆ ಬಳುಕಿನಲ್ಲಿ,
ಸಹ್ಯಾದ್ರಿಯ ಲೋಹದದಿರ ಉತ್ತುಂಗದ ನಿಲುಕಿನಲ್ಲಿ ,
ನಿತ್ಯ ಹರಿದ್ವರ್ಣ ವನದ ತೇಗ ಗಂಧ ತರುಗಳಲ್ಲಿ -
ನಿತ್ಯೋತ್ಸವ, ತಾಯಿ, ನಿತ್ಯೋತ್ಸವ ನಿನಗೆ...
*
ಕುರಿಗಳು, ಸಾರ್-ಕುರಿಗಳು
ಸಾಗಿದ್ದೇ ಗುರಿಗಳು
ಮಂದೆಯಲ್ಲಿ ಒಂದಾಗಿ, ಸ್ವಂತತೆಯೇ ಬಂದಾಗಿ
ಇದರ ಬಾಲ ಅದು ಮತ್ತೆ ...
*
ಟಾಪ್-3
ರಾಮನ್ ಸತ್ತ ಸುದ್ದಿ ಓದಿದ ಬೆಳಿಗ್ಗೆ ಶಿವಮೊಗ್ಗೆಗೆ
ದರಿದ್ರ ಥಂಡಿ; ಅಸ್ತಿತ್ವದ ಅಸ್ಪಷ್ಟ ಜಿಜ್ಞಾಸೆ, ಗುರುತಿಸಲಾಗದ
ಕಸಿವಿಸಿ. ಮುಜುಗರ ತಾಳದೆ ವಾಕಿಂಗ್ ಹೊರಟೆ; ಬೀದಿ...
*
ಟಾಪ್-4
ಮನೋರಮಾ ಮನೋರಮಾ
ಸಾಲದೇನೆ ನಿನ್ನ ಹೆಸರೆ? ಮಲಗೋಬದ ಗಮಗಮ
*
ಟಾಪ್-5
ಕನ್ನಡವೆಂದರೆ ಬರಿ ನುಡಿಯಲ್ಲ ಹಿರಿದಿದೆ ಅದರರ್ಥ
ನೀರೆಂದರೆ ಬರಿ ಜಲವಲ್ಲ ಅದು ಪಾವನತೀರ್ಥ












Click it and Unblock the Notifications