ನೀವೂ ಮೋಸ ಹೋದೀರಿ ಎಚ್ಚರಿಕೆ!

ಈ ಶನಿವಾರ, ಬಹುದಿನದಿಂದ ಕೆಟ್ಟು ಹೋಗಿದ್ದ ನಮ್ಮ ಲ್ಯಾಪ್ ಟಾಪನ್ನು ಸರಿಪಡಿಸುವ ಮುಹೂರ್ತ ಬಂದೊದಗಿತ್ತು. ಅದನ್ನು ಸರಿಪಡಿಸಲೋಸುಗ ಜಯನಗರದ ಒಂದು ಅಂಗಡಿ ನುಗ್ಗಿದ್ದಾಯಿತು. ಕೆಲವು ಪರೀಕ್ಷೆಗಳ ನಂತರ ಹಾರ್ಡ್ ಡಿಸ್ಕ್ ಬದಲಿಸಬೇಕೆಂಬ ಸೂಚನೆ ಗಟ್ಟಿಯಾಗತೊಡಗಿತು. ನಮಗೆ ಬೇಕಾದ ಹಾರ್ಡ್ ಡಿಸ್ಕ್ ಆ ಅಂಗಡಿಯಲ್ಲಿ ಇಲ್ಲದ ಕಾರಣ ಫೋನಾಯಿಸಿ, ಬೇರೊಂದು ಕಡೆಯಿಂದ ಅದನ್ನು ಅಂಗಡಿ ಮಾಲೀಕರು ತರಿಸಿದರು. ಹೊಚ್ಚ ಹೊಸ ಹಾರ್ಡ್ ಡಿಸ್ಕನ್ನು ನಮ್ಮ ಕಣ್ಣೆದುರಿಗೇ ಪಾಕೆಟ್ ನ ಸೀಲು ಒಡೆದು ತೆಗೆದು ತೋರಿಸಿ, ಜೋಡಿಸಿ, ಪರೀಕ್ಷಿಸಿ, ಎಲ್ಲವೂ ಸಮರ್ಪಕವಾಗಿದೆಯೆಂದು ಭಾವಿಸಿ, ಅಲ್ಲೇ ಆಪರೇಟಿಂಗ್ ಸಿಸ್ಟಮನ್ನು ಇನ್ ಸ್ಟಾಲ್ ಮಾಡಿ ನೋಡಿದೆವು. ಎಲ್ಲ ಓಕೆ.. ಚಿಂತೆ ಯಾಕೆ ಎಂದು ಭಾವಿಸಿ ಮನೆಗೆ ಬಂದೆವು. ಕಥೆ ಇಲ್ಲಿಗೇ ಮುಗಿಯಲಿಲ್ಲ. ಮುಗಿಯುತ್ತಿದ್ದರೆ ಈ ಲೇಖನ ಬರೆಯುವ ಅವಶ್ಯಕತೆಯೂ ಇರಲಿಲ್ಲ.
ಮನೆಗೆ ಬಂದು ಸರಿಯಾದ ಲಾಪ್ ಟಾಪ್ ನಲ್ಲಿ ಮತ್ತೊಂದಷ್ಟು ಸಾಫ್ಟ್ ವೇರ್ ಗಳನ್ನು ಇನ್ ಸ್ಟಾಲ್ ಮಾಡುವ ಉತ್ಸಾಹದಲ್ಲಿ, ಮತ್ತೆ ಅದನ್ನು ಪರಿಶೀಲಿಸತೊಡಗಿದೆ. ಲಾಪ್ ಟಾಪ್ ನ ಡಿ ಡ್ರೈವ್ ಅನ್ನು ತೆರೆದು ನೋಡಿದಾಗ ನನಗೆ ಸಖೇದಾಶ್ಚರ್ಯವಾಗಿತ್ತು. ಯಾಕೆ ಅಂತೀರಾ? ಯಾರೋ ಒಬ್ಬರ ಹಲವಾರು ಕಡತಗಳು ಅದರಲ್ಲಿದ್ದವು. ಹೊಸ ಹಾರ್ಡ್ ಡಿಸ್ಕ್ ಖಾಲಿಯಾಗಿರಬೇಕಷ್ಟೆ? ಈ ಥರದ ಕಡತಗಳು ಅದರಲ್ಲಿ ಮುಂಚಿನಿಂದಲೂ ಇದೆ ಅಂದ ಮೇಲೆ ಇದು ಹೊಸದಾಗಿರಲು ಹೇಗೆ ಸಾಧ್ಯ? ಮತ್ತೊಮ್ಮೆ ಆ ಕಂಪ್ಯೂಟರ್ ಅಂಗಡಿಗೆ ಫೋನಾಯಿಸಿ, ಬದಲಿಸಿದ ಹಾರ್ಡ್ ಡಿಸ್ಕ್ ಹೊಸತೇ ಅಲ್ಲವೇ ಎಂಬ ಗುಮಾನಿಯನ್ನು ವ್ಯಕ್ತಪಡಿಸಿದೆವು. "ಅದು ಹೊಚ್ಚ ಹೊಸದೇ" ಎಂಬ ಉತ್ತರ ದೊರಕಿತು.
ಡಿ ಡ್ರೈವ್ ನ ಕಡತಗಳಲ್ಲಿ ಏನೇನಿದೆ ಎನ್ನುತ್ತೀರಾ? 1. ಬ್ಯಾಂಕ್ ಸ್ಟೇಟ್ ಮೆಂಟ್ ಗಳು 2. ಕ್ರೆಡಿಟ್ ಕಾರ್ಡ್ ಸ್ಟೇಟ್ ಮೆಂಟ್ ಗಳು 3. ಷೇರು ವ್ಯವಹಾರದ ಅಂಕಿ ಅಂಶ 4. ಗೃಹಸಾಲದ ವಿವರಗಳು 5. ಕುಟುಂಬದ ಛಾಯಾಚಿತ್ರಗಳು 6. ಆಫೀಸಿನ ವಿವರಗಳು.
ಇತ್ತೀಚೆಗೆ 'Identity theft' , ಅಂತರ್ಜಾಲದಲ್ಲಿ ಆಗುವ ಮೋಸ ಹೆಚ್ಚಾಗಿವೆಯಷ್ಟೆ. ನನ್ನೆದುರು ಒಂದು ಪ್ರತ್ಯಕ್ಷ ನಿದರ್ಶನವಿತ್ತು.
ಆ ಕಡತಗಳಲ್ಲಿ ಆ ವ್ಯಕ್ತಿಯ ದೂರವಾಣಿ ಸಂಖ್ಯೆಯನ್ನು ಪಡೆದು ಅವರಿಗೆ ಫೋನಾಯಿಸಿ, ಎಲ್ಲ ವಿಷಯಗಳನ್ನು ತಿಳಿಸಿ, ಅವರ ಅಂತರ್ಜಾಲದ ಪಾಸ್ ವರ್ಡ್ಗಳನ್ನು ತಕ್ಷಣವೇ ಬದಲಾಯಿಸಲು ಆಗ್ರಹಿಸಿದೆವು. ಈ ವಿಷಯ ತಿಳಿದು ಅವರಿಗೂ ಗಾಬರಿಯಾಯಿತೆಂದು ಹೊಸದಾಗಿ ಹೇಳಬೇಕೆ?
ಇಲ್ಲಿ ಇಬ್ಬರಿಗೆ ಮೋಸವಾಗಿದೆ. 1. ಹೊಸ ಹಾರ್ಡ್ ಡಿಸ್ಕ್ ನ ಬೆಲೆ ತೆತ್ತು ಹಳೆಯದನ್ನು ಪಡೆದ ನನಗೆ 2. ಈ ಪರಿಯ ವೈಯಕ್ತಿಕ ದಾಖಲೆಗಳು ಯಾರದಾಗಿದ್ದವೋ ಅವರಿಗೆ. ಹಾಗೆ ನೋಡಹೋದರೆ ಮೊದಲನೆಯದ್ದಕ್ಕಿಂತ ಎರಡನೆಯದು ಅತ್ಯಂತ ಗಂಭೀರ ವಿಷಯ. ಎಲ್ಲಾ ತರಹದ ವಿಷಯಗಳೂ ಒಂದು ಚಿಕ್ಕ ಡಿಸ್ಕ್ ನಲ್ಲಿ ಅಡಕವಾಗಿಸಬಹುದಾದ ಈ ಕಾಲದಲ್ಲಿ ಸುರಕ್ಷತೆಯ ಕೊರತೆ ಎದ್ದು ಕಾಣುತ್ತಿದೆ.
ಕಂಪ್ಯೂಟರ್ ನಲ್ಲಿ ತಕ್ಕಮಟ್ಟಿನ ಸಾಕ್ಷರರಾಗಿದ್ದರೂ ಮೋಸ ಹೋಗುವ ಭಯ ಬೆಂಗಳೂರಿನಲ್ಲಿ ಇಲ್ಲದಿಲ್ಲ. ಈ ಥರದ ಘಟನೆಗಳು ನಡೆದಲ್ಲಿ ಸಾರ್ವಜನಿಕರ ಗಮನಕ್ಕೆ ತಂದು ಜನರಲ್ಲಿ ಸೂಕ್ತ ಜಾಗೃತಿಯನ್ನು ಮೂಡಿಸುವುದು ಅತ್ಯಗತ್ಯ. ಎಲ್ಲಕ್ಕಿಂತ ಮುಖ್ಯವಾದ ವಿಷಯವೆಂದರೆ ವೈಯಕ್ತಿಕ ವಿವರಗಳನ್ನು ಒಂದೆಡೆ ಕಲೆ ಹಾಕಿದಾಗ ಅದಕ್ಕೆ ತಕ್ಕ ಭದ್ರತೆಯನ್ನು ಕಲ್ಪಿಸುವುದು ಇವತ್ತಿನ ಅಗತ್ಯ. ಇಲ್ಲವಾದಲ್ಲಿ ನಿಮ್ಮ ವೈಯಕ್ತಿಕ ವಿವರಗಳು ಜಗಜ್ಜಾಹೀರಾಗುವುದರಲ್ಲಿ ತುಂಬಾ ಸಮಯ ಹಿಡಿಯುವುದಿಲ್ಲ!
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications