ಬೆಂಗಳೂರು ಗೋ ಗ್ರೀನ್...

* ಅರ್ಚನಾ ಹೆಬ್ಬಾರ್, ಬೆಂಗಳೂರು
ಪರಿಸರ ದಿನಾಚರಣೆಯ ಮುಂದುವರಿದ ಕಾರ್ಯಕ್ರಮವಾಗಿ ಒರಾಕಲ್ ಸಂಸ್ಥೆಯ ಪರಿಸರ ಪ್ರೇಮಿ ಉದ್ಯೋಗಿಗಳು 'ಇಕೋ ವಾಚ್' ಸಂಸ್ಥೆಯ ಸಹಯೋಗದೊಂದಿಗೆ ಸುಮಾರು 600 ಗಿಡಗಳನ್ನು ನೆಡುವ ಯೋಜನೆಯನ್ನು ಹಾಕಿಕೊಂಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿಯ ಬಳಿಯ ಆವಲಹಳ್ಳಿ ಕೆರೆಯಲ್ಲಿ ಜೂನ್ 15ರ ನಂತರದ ವಾರಾಂತ್ಯದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಬೆಂಗಳೂರನ್ನು ಹಸಿರಾಗಿಸಲು ಇದೊಂದು ಪುಟ್ಟ ಹೆಜ್ಜೆ. ಇಕೋ ವಾಚ್ ಸಂಸ್ಥೆ 'ಗೋ ಗ್ರೀನ್' ಯೋಜನೆಯ ಅಂಗವಾಗಿ ಮೊದಲ ಹಂತದ ಗಿಡ ನೆಡುವ ಕಾರ್ಯಕ್ರಮವನ್ನು ಜೂನ್ 6ರಂದು ಹಮ್ಮಿಕೊಂಡಿದ್ದರು. ಕಳೆದ ಶನಿವಾರ ಆಲ್ ಇಂಡಿಯಾ ರೇಡಿಯೋದ 'ಇಕೋ ಎಜ್ಯುಕೇಶನ್ ಸೆಂಟರಿನಲ್ಲಿ ಸುಮಾರು 100 ಗಿಡಗಳನ್ನು ನೆಡುವ ಮೂಲಕ 'ಗೋ ಗ್ರೀನ್' ಯೋಜನೆಗೆ ಚಾಲನೆ ನೀಡಲಾಯಿತು. ಈ ಗಿಡನೆಡುವ ಕಾರ್ಯಕ್ರಮದಲ್ಲಿ ಒರಾಕಲ್ ಕಂಪನಿಯ 40ಕ್ಕೂ ಹೆಚ್ಚಿನ ಉದ್ಯೋಗಿಗಳು ಸಂಸಾರ ಸಮೇತರಾಗಿ ಭಾಗವಹಿಸಿದ್ದರು. ಮುಂಬರುವ ವಾರಾಂತ್ಯಗಳಲ್ಲಿ ಮತ್ತಷ್ಟು ಗಿಡಗಳನ್ನು ನೆಡುವ ಉದ್ದೇಶ ಇಕೋ ವಾಚ್ ಸಂಸ್ಥೆ ಹೊಂದಿದೆ.
ಶನಿವಾರದ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಇಕೋ ವಾಚ್ ಮುಖ್ಯಸ್ಥರಾಗಿರುವ ಚಿತ್ರನಟ ಮತ್ತು ಪರಿಸರವಾದಿ ಸುರೇಶ ಹೆಬ್ಳೀಕರ್ ಅವರು "ಬಹಳಷ್ಟು ಸಂಸ್ಥೆಗಳು ಪರಿಸರ ಸ್ನೇಹಿ ಯೋಜನೆಗಳನ್ನು ಹಮ್ಮಿಕೊಳ್ಳುತ್ತಾ ಬಂದಿವೆ. ಪರಿಸರ ರಕ್ಷಣೆಗೆ ಇದು ಅತ್ಯಗತ್ಯ. ಇದಕ್ಕೆ ಪ್ರತಿಯೊಬ್ಬರ ಸಹಕಾರದ ಅವಶ್ಯಕತೆಯಿದೆ. ಪರಿಸರದಲ್ಲಿ ನಾವು ಬಹು ಮುಖ್ಯವಾಗಿ ಕಾಯ್ದುಕೊಂಡು ಬರಬೇಕಾದ್ದು ನೀರು ಮತ್ತು ಜೀವ ವೈವಿಧ್ಯ. ಈ ನಿಟ್ಟಿನಲ್ಲಿ ಬೆಂಗಳೂರು ಮತ್ತು ಸುತ್ತಮುತ್ತ ಒಂದು ಮಿಲಿಯನ್ ಗಿಡ ನೆಡುವ ಯೋಜನೆಯನ್ನು ಹಮ್ಮಿಕೊಂಡಿದ್ದೇವೆ" ಎಂದು ನುಡಿದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications