ಬೆಂಗಳೂರು ಗೋ ಗ್ರೀನ್...

* ಅರ್ಚನಾ ಹೆಬ್ಬಾರ್, ಬೆಂಗಳೂರು
ಪರಿಸರ ದಿನಾಚರಣೆಯ ಮುಂದುವರಿದ ಕಾರ್ಯಕ್ರಮವಾಗಿ ಒರಾಕಲ್ ಸಂಸ್ಥೆಯ ಪರಿಸರ ಪ್ರೇಮಿ ಉದ್ಯೋಗಿಗಳು 'ಇಕೋ ವಾಚ್' ಸಂಸ್ಥೆಯ ಸಹಯೋಗದೊಂದಿಗೆ ಸುಮಾರು 600 ಗಿಡಗಳನ್ನು ನೆಡುವ ಯೋಜನೆಯನ್ನು ಹಾಕಿಕೊಂಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿಯ ಬಳಿಯ ಆವಲಹಳ್ಳಿ ಕೆರೆಯಲ್ಲಿ ಜೂನ್ 15ರ ನಂತರದ ವಾರಾಂತ್ಯದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಬೆಂಗಳೂರನ್ನು ಹಸಿರಾಗಿಸಲು ಇದೊಂದು ಪುಟ್ಟ ಹೆಜ್ಜೆ. ಇಕೋ ವಾಚ್ ಸಂಸ್ಥೆ 'ಗೋ ಗ್ರೀನ್' ಯೋಜನೆಯ ಅಂಗವಾಗಿ ಮೊದಲ ಹಂತದ ಗಿಡ ನೆಡುವ ಕಾರ್ಯಕ್ರಮವನ್ನು ಜೂನ್ 6ರಂದು ಹಮ್ಮಿಕೊಂಡಿದ್ದರು. ಕಳೆದ ಶನಿವಾರ ಆಲ್ ಇಂಡಿಯಾ ರೇಡಿಯೋದ 'ಇಕೋ ಎಜ್ಯುಕೇಶನ್ ಸೆಂಟರಿನಲ್ಲಿ ಸುಮಾರು 100 ಗಿಡಗಳನ್ನು ನೆಡುವ ಮೂಲಕ 'ಗೋ ಗ್ರೀನ್' ಯೋಜನೆಗೆ ಚಾಲನೆ ನೀಡಲಾಯಿತು. ಈ ಗಿಡನೆಡುವ ಕಾರ್ಯಕ್ರಮದಲ್ಲಿ ಒರಾಕಲ್ ಕಂಪನಿಯ 40ಕ್ಕೂ ಹೆಚ್ಚಿನ ಉದ್ಯೋಗಿಗಳು ಸಂಸಾರ ಸಮೇತರಾಗಿ ಭಾಗವಹಿಸಿದ್ದರು. ಮುಂಬರುವ ವಾರಾಂತ್ಯಗಳಲ್ಲಿ ಮತ್ತಷ್ಟು ಗಿಡಗಳನ್ನು ನೆಡುವ ಉದ್ದೇಶ ಇಕೋ ವಾಚ್ ಸಂಸ್ಥೆ ಹೊಂದಿದೆ.
ಶನಿವಾರದ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಇಕೋ ವಾಚ್ ಮುಖ್ಯಸ್ಥರಾಗಿರುವ ಚಿತ್ರನಟ ಮತ್ತು ಪರಿಸರವಾದಿ ಸುರೇಶ ಹೆಬ್ಳೀಕರ್ ಅವರು "ಬಹಳಷ್ಟು ಸಂಸ್ಥೆಗಳು ಪರಿಸರ ಸ್ನೇಹಿ ಯೋಜನೆಗಳನ್ನು ಹಮ್ಮಿಕೊಳ್ಳುತ್ತಾ ಬಂದಿವೆ. ಪರಿಸರ ರಕ್ಷಣೆಗೆ ಇದು ಅತ್ಯಗತ್ಯ. ಇದಕ್ಕೆ ಪ್ರತಿಯೊಬ್ಬರ ಸಹಕಾರದ ಅವಶ್ಯಕತೆಯಿದೆ. ಪರಿಸರದಲ್ಲಿ ನಾವು ಬಹು ಮುಖ್ಯವಾಗಿ ಕಾಯ್ದುಕೊಂಡು ಬರಬೇಕಾದ್ದು ನೀರು ಮತ್ತು ಜೀವ ವೈವಿಧ್ಯ. ಈ ನಿಟ್ಟಿನಲ್ಲಿ ಬೆಂಗಳೂರು ಮತ್ತು ಸುತ್ತಮುತ್ತ ಒಂದು ಮಿಲಿಯನ್ ಗಿಡ ನೆಡುವ ಯೋಜನೆಯನ್ನು ಹಮ್ಮಿಕೊಂಡಿದ್ದೇವೆ" ಎಂದು ನುಡಿದರು.
-
ಒಂದೇ ವರ್ಷದಲ್ಲಿ 800 ಕೋಟಿ ರೂ ಮೌಲ್ಯದ ಕಂಪನಿ ಕಟ್ಟಿದ 23ರ ಹರೆಯದ ಅಂಜಲಿ ಸರ್ದಾನಾ -
Vrial News: ಕೆಲಸದಿಂದ ತೆಗೆದ ಬಳಿಕ ಪುಕ್ಕಟೆ ಸಹಾಯ ಕೇಳಿದ ಮಾಜಿ ಬಾಸ್: ನೌಕರ ಕೊಟ್ಟ ಉತ್ತರ ವೈರಲ್ -
Today Horoscope Mar 3: ಹುಣ್ಣಿಮೆಯ ದಿನ ಚಂದ್ರಗ್ರಹಣ, ಈ ರಾಶಿಯವರ ಆರೋಗ್ಯದಲ್ಲಿ ಏರುಪೇರು -
Property: ಖಾತಾ ಎಂದರೇನು, ಇ, ಬಿ - ಎ ಖಾತಾಗಳ ವ್ಯತ್ಯಾಸ, ಆಸ್ತಿದಾರರಿಗೆ ಹೇಗೆ ಲಾಭ ಇಲ್ಲಿದೆ ಸಂಪೂರ್ಣ ವಿವರ -
National Highway: ರಾಷ್ಟ್ರೀಯ ಹೆದ್ದಾರಿ-373 ಕಾಮಗಾರಿ ಎಲ್ಲಿಗೆ ಬಂತು? -
ಬೆಂಗಳೂರು ಆಡಳಿತ ಬಿಬಿಎಂಪಿಯಿಂದ ಜಿಬಿಎಗೆ: 5 ಪಾಲಿಕೆಗಳ ರಚನೆ, ಹೊಸ ಪ್ರದೇಶಗಳ ಸೇರ್ಪಡೆಯಿಂದ ರಿಯಲ್ ಎಸ್ಟೇಟ್ಗೆ ಬಂಪರ್ -
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಮದುವೆ ಸಂಭ್ರಮ: 'ಸಂಗೀತ' ರಾತ್ರಿಯ ನೆನಪುಗಳನ್ನು ಹಂಚಿಕೊಂಡ ನಟಿ -
RCB: ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐದು ಪಂದ್ಯಗಳ ಆಯೋಜನೆಗೆ ಆರ್ಸಿಬಿ ಒಪ್ಪಿಗೆ -
Dharavi Slum: ಏಷ್ಯಾದ ದೊಡ್ಡ ಕೊಳಗೇರಿ ಧಾರಾವಿಯಲ್ಲಿ ಬಡತನವೂ ಬಂಡವಾಳ, ಧಾರಾವಿ ಸಂಪೂರ್ಣ ವಿವರ ಇಲ್ಲಿದೆ -
ದುಬೈಯಿಂದ ತಾಯ್ನಾಡಿಗೆ ಮರಳಿದ ಕನ್ನಡಿಗರು: ಪಿ.ವಿ ಸಿಂಧು, ಭೋಜೇಗೌಡ ಸೇರಿದಂತೆ ಹಲವರು ಬೆಂಗಳೂರಿಗೆ ವಾಪಾಸ್ -
ಇರಾನ್-ಇಸ್ರೇಲ್ ಸಂಘರ್ಷ: ಕತಾರ್ನಲ್ಲಿ LNG ಉತ್ಪಾದನೆ ಸ್ಥಗಿತ: ಗಗನಕ್ಕೇರಿದ ತೈಲ ಮತ್ತು ಅನಿಲ ಬೆಲೆ -
Fuel Price: ತೀವ್ರಗೊಂಡ ಯುದ್ಧದ ಕಿಚ್ಚು, ಕಚ್ಚಾ ತೈಲ ದರ ಏರಿಕೆಯಾದರೂ ಪೆಟ್ರೋಲ್-ಡೀಸೆಲ್ ಬೆಲೆ ಸ್ಥಿರ












Click it and Unblock the Notifications