31030indiaಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31030indiaಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg31030indiaಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg31030indiaರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg31030indiaಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpg36690pakistanಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36690pakistanಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36690pakistanಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36690pakistan ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36690pakistanನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpg38591terrorismಆರು ಹಿತವರು ನಿನಗೆ? ದೇವರೋ ದೇಶವೋ?/column/nataraj/2003/191103moore.htmlಅಮೇರಿಕಾದ ಸಂಯುಕ್ತ ಸಂಸ್ಥಾನಗಳಲ್ಲಿ ದಕ್ಷಿಣದಲ್ಲಿರುವ ಅಲಬಾಮ ಎಂಬ ಪ್ರಾಂತ್ಯ ಅನೇಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಎಲ್ಲಕಿಂತ ಮುಖ್ಯವಾಗಿ ವರ್ಣಭೇದ ಇಲ್ಲಿನ ಜನರ ರಕ್ತದಲ್ಲಿ ಬೆರೆತುಹೋಗಿದೆ. ಕಟ್ಟರ್‌ ಕ್ರೈಸ್ತರೇ ಹೆಚ್ಚಾಗಿರುವ ಈ ಪ್ರಾಂತ್ಯದಲ್ಲಿ ಚುನಾಯಿತರಾಗುವ ಪ್ರತಿನಿಧಿಗಳೂ ನ್ಯಾಯಾಧೀಶರೂ ಸಹ ಅಸಮಾನತೆಯನ್ನು ಎತ್ತಿಹಿಡಿಯುತ್ತಾರೆಂಬುದೂ ಎಲ್ಲರಿಗೂ ತಿಳಿದ ವಿಷಯ. ಇತ್ತೀಚೆಗೆ ಅಲಬಾಮಾದ ಮುಖ್ಯನ್ಯಾಯಾಧೀಶ ರಾಯ್‌ ಮೂರ್‌ ಎಂಬಾತ ಹೆಚ್ಚು ಪ್ರಖ್ಯಾತಿಗೆ ಬರಲು ಕಾರಣ 10940http://kannada.oneindia.com/img/2009/11/24-roy-moore.jpg38591terrorismಬಾರಿಸುವ ಗಂಟೆ ಸದಾ ಎಚ್ಚರಿಸುವ ಗಂಟೆ/festivals/general/2008/1224-for-whom-the-bell-tolls.htmlಕರ್ನಾಟಕದ ಚರ್ಚುಗಳಲ್ಲೆಲ್ಲ ಚರ್ಚ್ ಮೇಲಿನ ದಾಳಿ, ಭಯೋತ್ಪಾದನೆ ಬದಿಗಿಟ್ಟು ಕ್ರೈಸ್ತ ಪರಮಾತ್ಮನ ಆರಾಧಿಸುವ ಸಡಗರ. ನಳನಳಿಸುತ್ತಿರುವ ಎಕ್ಸ್ಮಸ್ ಗಿಡ, ತೂಗಾಡುವ ಬಣ್ಣದ ಬಲ್ಬುಗಳು, ಬಣ್ಣ ಸುಣ್ಣ, ಹೊಸ ಗಾಜು ಕಿಟಕಿಗಳಿಂದ ಅಲಂಕೃತ ದೇವಳಗಳು. ಹೊಸ ಬಟ್ಟೆ, ಘಮಘಮಿಸುವ ಬಗೆಬಗೆಯ ಕೇಕು, ಸಿಹಿಮುತ್ತುಗಳು, ಸ್ವಲ್ಪವೇ ವೈನ್... ಆಮೆನ್. ಇದೆಲ್ಲ ಚರ್ಚಿನ ಒಳಗಡೆ, ಹೊರಗಡೆ ಗೇಟಿನ ಬಳಿ ಪೊಲೀಸ್ ಬಿಗಿ 33694http://kannada.oneindia.com/img/2008/12/24-churchbell.jpg38591terrorismನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg38591terrorismಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg38591terrorismಈ ಮೇಲ್ ಭಯೋತ್ಪಾದನೆ!/column/shreenidhi/2009/0210-spam-junk-hoax-emails.htmlಜನ ಇವತ್ತಿಗೂ ಐವತ್ತು ಜನಕ್ಕೆ ಫಾರ್ವರ್ಡು ಮಾಡಿದರೆ ಕ್ಯಾನ್ಸರು ಪೇಶಂಟಿಗೆ 10 ಸೆಂಟು ಸಿಗುತ್ತದೆ ಅನ್ನುವ ತರಹದ ಈ-ಮೇಲ್ ಗಳನ್ನು ಕಳಿಸುತ್ತಲೇ ಇದ್ದಾರೆ. ನನ್ನ ಪರಿಚಿತರೊಬ್ಬರು ಹೇಳಿದ ಹಾಗೆ, ಸೀಮನ್ಸ್ನಲ್ಲಿ ಕೆಲಸ ಮಾಡುವ ಅದ್ಯಾವುದೋ ಹೆಂಗಸು- ಅವಳಿಗೇನೋ ರೋಗ ಇರುವ ಈ ಮೇಲ್, ಕಳೆದ ಆರು-ಏಳು ವರುಷಗಳಿಂದ ಬರುತ್ತಲೇ ಇದೆಯಂತೆ!* ಶ್ರೀನಿಧಿ ಡಿಎಸ್ಇತ್ತೀಚಿನ ದಿನಗಳಲ್ಲಿ ಕೆಲಬಾರಿ ದಿನವೂ 34579http://kannada.oneindia.com/img/2009/02/10-junk-emails1.gifnews"> ಪಾಕ್ ಎಂಬ ಕಾದ ಕಬ್ಬಿಣ ಬಡಿಯಲು ಇದು ಸಕಾಲ | Strike when the 'Pakistan' iron is hot - ಪಾಕ್ ಎಂಬ ಕಾದ ಕಬ್ಬಿಣ ಬಡಿಯಲು ಇದು ಸಕಾಲ - Kannada Oneindia

ಪಾಕ್ ಎಂಬ ಕಾದ ಕಬ್ಬಿಣ ಬಡಿಯಲು ಇದು ಸಕಾಲ

Sarabjit Singh and Afzal Guru
ಈಗ ನಮ್ಮ ಸರ್ಕಾರಕ್ಕೆ ಬೇಕಾಗಿರುವುದು ಪ್ರಾಮಾಣಿಕತೆ, ಸಕಾರಾತ್ಮಕ ಧೋರಣೆ ಮತ್ತು ಇಚ್ಛಾಶಕ್ತಿ. ಅತ್ತ ಸರಬ್‌ಜಿತ್‌ಗೆ ಗಲ್ಲು ಖಾಯಂ ಆದರೆ ಇತ್ತ ಅಫ್ಜಲ್ ಗುರುವನ್ನು ಗಲ್ಲಿಗೇರಿಸಲು ಹಿಂದೆಮುಂದೆ ನೋಡುತ್ತಿರುವ ನಮ್ಮ ಸರ್ಕಾರದಿಂದ, ಮುಂಬಯಿಯ ಘನಘೋರ ದುರಂತದ ನಂತರವೂ ಪಾಕ್ ವಿಷಯದಲ್ಲಿ ತಣ್ಣಗೆ ಕುಳಿತಿರುವ ನಮ್ಮ ಕೇಂದ್ರ ಸರ್ಕಾರದಿಂದ ಈ ಇತ್ಯಾತ್ಮಕ ಗುಣಗಳನ್ನು ನಾವು ನಿರೀಕ್ಷಿಸಬಹುದೇ?

* ಆನಂದರಾಮ ಶಾಸ್ತ್ರೀ, ಬೆಂಗಳೂರು

ಸರಬ್‌ಜಿತ್ ಸಿಂಗ್‌ಗೆ ಪಾಕಿಸ್ತಾನವು ಗಲ್ಲು ಶಿಕ್ಷೆ ಖಾಯಂ ಮಾಡಿದೆ. ಆತ ತಪ್ಪಿತಸ್ಥನಲ್ಲವೆಂಬ ಅರಿವಿದ್ದೂ ಪಾಕಿಸ್ತಾನ ಈ ರೀತಿ ರಾಕ್ಷಸಿ ವರ್ತನೆಯ ಪುನರಾವರ್ತನೆ ಮಾಡುತ್ತಿದೆ. ಮುಂಬೈ ಬಾಂಬ್ ದಾಳಿ ವಿಷಯದಲ್ಲಿ ಪಾಕಿಸ್ತಾನಕ್ಕೆ ಎಳ್ಳಷ್ಟೂ ಪಶ್ಚಾತ್ತಾಪವಾಗಿಲ್ಲ.

ಭಾರತದ ವಿರುದ್ಧ ಪಾಕಿಸ್ತಾನವು ಮುಂಬಯಿಯಲ್ಲಿ ನಡೆಸಿದ ಆ 'ಮೂರು ದಿನದ ಅಧರ್ಮಯುದ್ಧ'ದಿಂದಾಗಿ ನೂರಾರು ಅಮಾಯಕ ಜೀವಗಳ ಹರಣವಾಯಿತಷ್ಟೇ ಹೊರತು ಪಾಕಿಸ್ತಾನವು ಅದರಿಂದ ಸಾಧಿಸಿದ್ದೇನಿಲ್ಲ. ಜಗತ್ತಿನ ವಿಶ್ವಾಸವನ್ನು ಅದೀಗ ಸಂಪೂರ್ಣವಾಗಿ ಕಳೆದುಕೊಂಡಿದೆ. ಆದರೆ, ಈ ಘಟನೆಯಿಂದ ಭಾರತವು ಕಲಿಯಬೇಕಾದ್ದು ಬಹಳಷ್ಟಿದೆ.

ಬ್ರಿಟಿಷರ ಬಳುವಳಿ

ಬ್ರಿಟಿಷರು ಭಾರತವನ್ನು ಒಡೆದು ಹೊರಟುಹೋದರು. ನಂತರ ನಾವು ಮಾನಸಿಕವಾಗಿ ಒಂದಾಗುವ ಬದಲು ಇನ್ನಷ್ಟು ದೂರವಾಗತೊಡಗಿದೆವು. ಭಾರತ, ಪಾಕ್ ಎರಡೂ ದೇಶಗಳ ರಾಜಕಾರಣಿಗಳು ದ್ವೇಷದ ಬೆಂಕಿಯನ್ನು ಶಮನಗೊಳಿಸುವ ಬದಲು ಆ ಬೆಂಕಿಯಲ್ಲಿ ತಮ್ಮ ಬೇಳೆ ಬೇಯಿಸಿಕೊಳ್ಳತೊಡಗಿದರು. ಪಾಕ್‌ನ ಮಿಲಿಟರಿ ಸರ್ವಾಧಿಕಾರಿಗಳಂತೂ ಭಾರತದ ಮಟ್ಟಿಗೆ ಮಾತ್ರವಲ್ಲ, ತಮ್ಮ ದೇಶದ ಪಾಲಿಗೂ ರಾಕ್ಷಸರೇ ಆದರು. ಇವೆಲ್ಲದರ ಪರಿಣಾಮ, ಸೌಹಾರ್ದಯುತವಾಗಿ ಬಗೆಹರಿಯಬಹುದಾಗಿದ್ದ ಕಾಶ್ಮೀರ ಸಮಸ್ಯೆಯು ಉಲ್ಬಣಗೊಂಡಿತು. ಪಾಕ್ ಪೋಷಿತ ಉಗ್ರರು ಹುಟ್ಟಿಕೊಂಡರು. ಕಾಶ್ಮೀರದ ಹೊರಗೂ ತಮ್ಮ ಕಬಂಧಬಾಹುಗಳನ್ನು ಚಾಚಿದ ಇವರು ಇಂದು ಇಡೀ ಭಾರತಕ್ಕೇ ಕಂಟಕಪ್ರಾಯರಾಗಿ ಬೆಳೆದುನಿಂತಿದ್ದಾರೆ.

ಭಾರತದಲ್ಲಿ ಮುಸ್ಲಿಮರನ್ನು ಹಿಂಸಿಸಲಾಗುತ್ತಿದೆಯೆಂದು ಕೆಲವು ಅನ್ಯೋದ್ದೇಶಭರಿತ ಮಾಧ್ಯಮಗಳು ಸುಳ್ಳು ಚಿತ್ರಣ ನೀಡುತ್ತಿರುವುದರಿಂದಾಗಿ ಮತ್ತು ಬಾಬ್ರಿ ಮಸೀದಿಯ ಧ್ವಂಸದ ವಿಷಯವನ್ನೆತ್ತಿಕೊಂಡು ಈ ಮುಸ್ಲಿಂ ಉಗ್ರರನ್ನು ಭಾರತದ ವಿರುದ್ಧ ಇನ್ನಷ್ಟು ವ್ಯಗ್ರಗೊಳಿಸಲಾಯಿತು. ಇದೇ ವೇಳೆ, ಅಧಿಕಾರ, ತುಷ್ಟೀಕರಣ ಹಾಗೂ ರಾಜಕೀಯ ದ್ವೇಷಗಳೇ ಗುರಿಯಾಗಿರುವ ನಮ್ಮ ಆಡಳಿತ ಪಕ್ಷಗಳು ಕಾಲದಿಂದ ಕಾಲಕ್ಕೆ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಸೂಕ್ತವಾಗಿ ಆತ್ಮಸಮರ್ಥನೆಯ ಕಾರ್ಯ ನಿರ್ವಹಿಸುವಲ್ಲಿ ವಿಫಲವಾದವು. ಈ ಪರಿಸ್ಥಿತಿಯನ್ನು ಉಪಯೋಗಿಸಿಕೊಂಡು ಪಾಕಿಸ್ತಾನ ಹಾಗೂ ಪಾಕ್ ಪ್ರೇರಿತ ಉಗ್ರಗಾಮಿ ಸಂಘಟನೆಗಳು ನಮ್ಮ ಮೇಲೆ ಎಲ್ಲ ರೀತಿಯ ದುರಾಕ್ರಮಣವನ್ನೂ ತೀವ್ರಗೊಳಿಸಿದವು. ಅದೀಗ ಮುಂಬಯಿಯಲ್ಲಾದಂತೆ ಅಘೋಷಿತ ಯುದ್ಧದ ಹಂತಕ್ಕೆ ಬಂದು ನಿಂತಿದೆ!

ಯುದ್ಧವೋ ಮತ್ತೇನೋ ಮಾಡಿ ಪಾಕಿಸ್ತಾನವನ್ನು ಬಗ್ಗುಬಡಿದುಬಿಡಬೇಕೆನ್ನುವ ಕೆಲವರ ಆಶಯದ ಅನುಷ್ಠಾನ ಇಂದು ಅಷ್ಟು ಸುಲಭವಲ್ಲ. ಇಂದಿರಾಗಾಂಧಿ ಮತ್ತು ಲಾಲ್‌ಬಹಾದುರ್ ಶಾಸ್ತ್ರಿ ಇವರಿಬ್ಬರಿಗೆ ಆ ಅವಕಾಶ ಇತ್ತು. ಈಗ ಪಾಕಿಸ್ತಾನವೂ ನಮ್ಮಂತೆ ಅಣುಶಕ್ತಿ ಸನ್ನದ್ಧ ರಾಷ್ಟ್ರವಾಗಿರುವುದರಿಂದ ಅದನ್ನು ಬಗ್ಗುಬಡಿಯಲು ಹೊರಡುವ ಮೊದಲು ನಾವು ಎಲ್ಲ ಸಾಧಕ ಬಾಧಕಗಳನ್ನೂ ಯೋಚಿಸಬೇಕಾಗುತ್ತದೆ.

ಮಾಡಬೇಕಾದ್ದೇನು?

ಮೊಟ್ಟಮೊದಲು, ನಮ್ಮ ದೇಶದ ಆಡಳಿತದ ಚುಕ್ಕಾಣಿ ಹಿಡಿದಿರುವವರೀಗ ಆಲಸ್ಯ ಮತ್ತು ಕಾಪಟ್ಯ ತೊರೆದು ಎಚ್ಚತ್ತುಕೊಳ್ಳಬೇಕಾಗಿದೆ. ಮೈಕೊಡವಿ ಎದ್ದೇಳಬೇಕಾಗಿದೆ. ಹಿಂದು-ಮುಸ್ಲಿಂ ವೋಟುಗಳಿಗಾಗಿ ದೇಶವನ್ನೇ ಬಲಿಕೊಡಲು ಹೇಸದಿರುವ ನಮ್ಮ ರಾಜಕಾರಣಿಗಳು ಇನ್ನಾದರೂ ಪ್ರಾಮಾಣಿಕತೆಯನ್ನು ತೋರಬೇಕು ಮತ್ತು ಸಮಸ್ಯೆಯನ್ನು ಬಗೆಹರಿಸುವ ಇಚ್ಛಾಶಕ್ತಿಯನ್ನು ಮೆರೆಯಬೇಕು. ಅಂಥ ಯೋಗ್ಯ ನೇತಾರರನ್ನೇ ಚುನಾಯಿಸುವ ತನ್ನ ಜವಾಬ್ದಾರಿಯನ್ನು ಮತದಾರ ತಪ್ಪದೇ ನಿರ್ವಹಿಸಬೇಕು.

'ಭಾರತದಲ್ಲಿ ಮುಸ್ಲಿಮರು ಹಿಂಸಿಸಲ್ಪಡುತ್ತಿದ್ದಾರೆ' ಎಂಬ ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹಬ್ಬುತ್ತಿರುವುದೂ ಮುಸ್ಲಿಂ ಉಗ್ರರ ಭೀಕರ ಸ್ವರೂಪಕ್ಕೆ ಪ್ರಮುಖ ಕಾರಣಗಳಲ್ಲೊಂದಾಗಿರುವುದರಿಂದ ಅಂಥ ಅಪಕಲ್ಪನೆಯನ್ನು ನಿವಾರಿಸುವ ಕೆಲಸವನ್ನು ನಮ್ಮ ಮಾಧ್ಯಮಗಳು ಮತ್ತು ವಿಚಾರಪರ ಗಣ್ಯರು ಹಾಗೂ ಸಂಘಟನೆಗಳು ಕೈಗೆತ್ತಿಕೊಳ್ಳಬೇಕು. ಕೇಂದ್ರ ಸರ್ಕಾರವು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಈ ನಿಟ್ಟಿನಲ್ಲಿ ಸ್ಪಷ್ಟನೆಯ ಕೆಲಸವನ್ನು ಅತ್ಯಂತ ವ್ಯವಸ್ಥಿತವಾಗಿ ಮಾಡಬೇಕು. ಜೊತೆಗೆ, ಕಾಶ್ಮೀರದಲ್ಲಿ ನಮ್ಮ ಸೈನಿಕರು ಇನ್ನೂ ಹೆಚ್ಚಿನ ಸಂಯಮ ಪ್ರದರ್ಶಿಸಬೇಕು. ರಾಜಕಾರಣಿಗಳು ಕಾಶ್ಮೀರದ ಜನತೆಗೆ ಉತ್ತಮ ಆಡಳಿತ ನೀಡಿ ಎಲ್ಲರ ವಿಶ್ವಾಸ ಗಳಿಸಬೇಕು.

ಇಷ್ಟಾಗುವಾಗ ನಾವು ಪಾಕಿಸ್ತಾನದೊಡನೆ ಮಾತುಕತೆಯನ್ನು ತೀವ್ರಗತಿಯಲ್ಲಿ ಮುನ್ನಡೆಸಬೇಕು. ಅದೇವೇಳೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಲಾಬಿ ನಡೆಸಿ, ಪಾಕ್ ಮೇಲೆ ವಿವಿಧ ಒತ್ತಡಗಳನ್ನು ಹೇರಿಸಬೇಕು. ಜಾಗತಿಕ ಆರ್ಥಿಕ ಬಿಕ್ಕಟ್ಟಿನಿಂದಾಗಿ ಪಾಕಿಸ್ತಾನವೀಗ ಜರ್ಜರಿತವಾಗಿದೆ. ಅಲ್ ಖೈದಾ ಹಾಗೂ ತಾಲಿಬಾನ್ ಉಗ್ರರು ಪಾಕ್‌ಗೂ ಕಂಟಕಪ್ರಾಯರಾಗಿದ್ದಾರೆ. ಪಾಕ್‌ಗೆ ನೆರವು ನೀಡುತ್ತಿರುವ ಅಮೆರಿಕದ ಆರ್ಥಿಕ ಪರಿಸ್ಥಿತಿಯೂ ಭದ್ರವಾಗಿಲ್ಲ. ಜೊತೆಗೆ, ಪಾಕಿಸ್ತಾನದ ಭಯೋತ್ಪಾದನಾ ಚಟುವಟಿಕೆಯು ಅಮೆರಿಕವೂ ಸೇರಿದಂತೆ ಜಗತ್ತಿನ ಎಲ್ಲ ರಾಷ್ಟ್ರಗಳಿಗೂ ಗೊತ್ತಿರುವುದೇ ಆಗಿದೆ. ಈ ಸಂದರ್ಭದ ಉಪಯೋಗ ಪಡೆದುಕೊಂಡು ಭಾರತವು ಪಾಕಿಸ್ತಾನವನ್ನು ಹಾದಿಗೆ ತರಲು ಸಾಧ್ಯ. ಕೊನೆಗೆ ಅನಿವಾರ್ಯವಾದರೆ ಶಕ್ತಿಪ್ರಯೋಗ ಇದ್ದೇ ಇದೆ. ನಮ್ಮ ಶಕ್ತಿಯ ಮುಂದೆ ಪಾಕಿಸ್ತಾನದ ಶಕ್ತಿ ಏನೇನೂ ಅಲ್ಲ.

ಕಬ್ಬಿಣ ಕಾದಿದೆ. ಬಡಿದು ಹದಕ್ಕೆ ತರಲು ಇದು ಸುಸಮಯ. ಇದಕ್ಕಾಗಿ ನಮ್ಮ ಸರ್ಕಾರಕ್ಕೆ ಬೇಕಾಗಿರುವುದು ಪ್ರಾಮಾಣಿಕತೆ, ಸಕಾರಾತ್ಮಕ ಧೋರಣೆ ಮತ್ತು ಇಚ್ಛಾಶಕ್ತಿ. ಅತ್ತ ಸರಬ್‌ಜಿತ್‌ಗೆ ಗಲ್ಲು ಖಾಯಂ ಆದರೆ ಇತ್ತ ಅಫ್ಜಲ್ ಗುರುವನ್ನು ಗಲ್ಲಿಗೇರಿಸಲು ಹಿಂದೆಮುಂದೆ ನೋಡುತ್ತಿರುವ ನಮ್ಮ ಸರ್ಕಾರದಿಂದ, ಮುಂಬಯಿಯ ಘನಘೋರ ದುರಂತದ ನಂತರವೂ ಪಾಕ್ ವಿಷಯದಲ್ಲಿ ತಣ್ಣಗೆ ಕುಳಿತಿರುವ ನಮ್ಮ ಕೇಂದ್ರ ಸರ್ಕಾರದಿಂದ ಈ ಇತ್ಯಾತ್ಮಕ ಗುಣಗಳನ್ನು ನಾವು ನಿರೀಕ್ಷಿಸಬಹುದೇ?

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+