ವಿರಹಿ ವಾಸುವಿನ 'ನನ್ನ ದೇವಕಿ' ಬ್ಲಾಗು

ನನ್ನ ದೇವಕಿ ಬ್ಲಾಗ್ ಓದಲು ಕೂತರೆ ಈಗಷ್ಟೇ ಪ್ರೀತಿ ಶುರು ಮಾಡಿರುವವರು, ಪ್ರೇಮಲೋಕದಲ್ಲಿ ಬಲಿತವರು, ವಿರಹಿಗಳು ಇನ್ನಿತರ ಆಸಕ್ತರಿಗೆ ಭರಪೂರ ರಸದೂಟವಿದೆ. ಜೋಗುಳದ ಲಾಲಿಹಾಡಾದ ವಾಸು ದೇವಕಿಯ ಅನುರಾಗ ಬ್ಲಾಗ್ ಮಂಡಲದಲ್ಲಿ ಸದಾ ಗುನುಗುತ್ತಿರಲಿ.
'ದೇವರು ವರವನ್ನು ಕೊಟ್ಟು ಕಿತ್ಕೋತಾನ'ಎಂದು ಪ್ರಶ್ನಿಸುವ ವಾಸುವಿನ ಒಂದು ಸ್ವಗತ ಪ್ರಲಾಪನೆ ನಿಮ್ಮ ಮುಂದೆ. .. .
ಕೊನೆಗೂ ದೇವರು ಅನ್ನುವ ನಾಜೂಕಯ್ಯ ನಿನ್ನ ವಿಷಯದಲ್ಲಿ ನನ್ನ ಪ್ರೀತಿ ತುಂಬಿದ ನಂಬಿಕೆಗಳನ್ನ ಹುಸಿಮಾಡಿಬಿಟ್ಟ ದೇವಕಿ. ನನ್ನ ಬದುಕಿನ ಪ್ರತಿ ದಿನದ ಪ್ರತಿ ಕ್ಷಣಗಳಲ್ಲಿ ಕೂಡ ನಾನು ನಿನ್ನ ಕುರಿತಾಗಿ ಒಂದೊಂದು ಕನಸು ಕಟ್ಟುತ್ತಿದ್ದೆ. ಆದರೇ ಅದಷ್ಟೂ ಕನಸುಗಳಿಗೆ ಮಣ್ಣಿನ ಹೊದಿಕೆಯ ಹೊದ್ದಿಸಿ ಮಲಗಿಸಿಬಿಟ್ಟೆ ದೇವಕಿ ನೀನು. ನಿನ್ನ ಮೇಲಿನ ಮೊದಲ ಪ್ರೀತಿಯಿಂದಾನೆ ಕೇಳ್ತಾ ಇದ್ದೀನಿ ಜಗತ್ತಿನಲ್ಲಿರುವ ಎಲ್ಲಾ ನೋವುಗಳೂ ನನಗೊಬ್ಬನಿಗೇ ಯಾಕೆ ದೇವಕಿ? ಬದುಕಿನ ಕಡೆಯ ಕ್ಷಣಗಳವರೆಗೂ ಈ ನಿನ್ನ ವಾಸು ನೋವಿನ ಅರಮನೆಯ ರಾಜಕುಮಾರನಾಗಿಯೇ ಇರಬೇಕಾ?
ಎದೆಯ ಎಲ್ಲ ತರಂಗಗಳಲ್ಲಿಯೂ ಬದುಕಿನ ಚಿತ್ತಾರ ಮೂಡಿಸಿದವಳು ನೀನು. ಅದೇ ತರಂಗಗಳಿಗೆ ವಿದಾಯದ ಕಹಿಯನ್ನೇಕೆ ತುಂಬಿದೆ ದೇವಕಿ? ಎದೆಯೊಳಗಿನ ಆಪ್ತ ಗೀತೆಯಂತಿದ್ದೆ ಅಲ್ಲವೇ ನೀನು, ಕೊನೆಗೂ ನನ್ನ ಪಾಲಿನ ಕಾಮನಬಿಲ್ಲಾಗಿಬಿಟ್ಟೆಯಲ್ಲ ನೀನಿರುವ ದೂರವೆಷ್ಟು ದೇವಕಿ? ನೀನು ಘೋರಿ ಕಟ್ಟಿದ ಪ್ರತಿ ಕನಸಿಗೂ ಗೂಡು ಕಟ್ಟೋದು ಬಲ್ಲೆ ದೇವಕಿ ಅದು ನೀನೆ ನನಗೆ ಪ್ರೀತಿಯಿಂದ ಕಲಿಸಿದ ಪಾಠ. ಆದರೆ ನೀನಿಲ್ಲದೆ ನಾನು ಕಟ್ಟುವ ಗೂಡಿಗೆ ಹೆಚ್ಚಿನ ಆಯುಷ್ಯವಿಲ್ಲವೆಂದು ಮಾತ್ರ ಬಲ್ಲೆ ದೇವಕಿ.
ಬದುಕಿನ ಗೀತೆಯನ್ನ ನಿನ್ನ ಜೊತೆಯೇ ಹಾಡಬೇಕೆಂದು ಬೆಟ್ಟದಷ್ಟು ಕನಸ ಎದೆಯೊಳಗಿಟ್ಟುಕೊಂಡು ಕುಳಿತಿದ್ದ ಹುಡುಗ ನಾನು. ಗೀತೆಯ ಮೊದಲ ಸಾಲಿನಲ್ಲೇ ನಿನ್ನ ಜೊತೆಯಿಲ್ಲ..ಹಾಡುವುದಾದರೂ ಹೇಗೆ ದೇವಕಿ? ನಾನು ಹೋಗುವ ದಾರಿಯಲ್ಲಿ ನಿನ್ನ ಪುಟ್ಟ ಹೆಜ್ಜೆ ಜೊತೆಗಿರುತ್ತೆ ಅನ್ನುವ ನಂಬಿಕೆಯಲ್ಲಿ ಸಂತೋಷದಿಂದ ಹೆಜ್ಜೆ ಹಾಕುತ್ತಿದ್ದೆ..ಮೊದಲೆರೆಡು ಹೆಜ್ಜೆಯೇ ಮುಗಿದಿಲ್ಲ ಅದೆಲ್ಲಿಗೆ ನಿನ್ನ ಪಯಣ? ನನ್ನ ಹೆಜ್ಜೆಗಳೀಗ ಅನುಭವಿಸುತ್ತಿರುವ ತಬ್ಬಲಿತನಕ್ಕೆ ಹಾಡುವವರು ಯಾರು ದೇವಕಿ?
ಈ ಬದುಕಿನಲ್ಲಿರುವ ಎಲ್ಲಾ ನೋವುಗಳ ತೂಕ ಒಂದಾದರೆ ಕಾರಣವೇ ಇಲ್ಲದೆ ಮುನಿದು ಹೋದ ನೀನು ಮತ್ತೆ ನಿನ್ನ ತಿರಸ್ಕಾರದ ತೂಕವೇ ಇನ್ನೊಂದು. ಇಲ್ಲಿ ಬರೆದಿದ್ದೆಲ್ಲ ನಿನ್ನ ಮೇಲಿನ ಕೋಪದಿಂದಾಗಲೀ ನೋವಿನಿಂದಾಗಲಿ ಅಲ್ಲ ದೇವಕಿ. ಕೆಲವೊಂದು ಸಲ ಮುಂದಿರುವ ಬದುಕನ್ನ ನೆನೆಸಿಕೊಂಡರೇ ದಿಗಿಲುಗೊಳ್ಳುತ್ತೇನೆ. ತುಂಬಾ ಮನುಷ್ಯನಿಗೆ ತುಂಬಾ ನೋವಾದಾಗ, ಕಷ್ಟಗಳು ಬಂದಾಗ, ಇನ್ನು ಬದುಕು ಸಾಧ್ಯವೇ ಇಲ್ಲ ಅನ್ನುವಾಗ ಯಾವ ದೇವರು ನೆನಪಾಗೋದಿಲ್ಲ. ಯಾವುದಾರೊಂದು ಹೆಗಲು ನೆನಪಾಗುತ್ತೆ, ಬೆಚ್ಚನೆಯ ಎದೆ ಬೇಕು ಅನ್ನಿಸುತ್ತೆ, ಕಣ್ಣೊರೆಸುವ ಒಂದು ಕೈಯ್ಯನ್ನ ಜೀವ ಬೇಡುತ್ತೆ. ತುಂಬಾ ನೋವಿನಲ್ಲಿದ್ದೀನಿ, ನೋವಾಗುತ್ತಿದೆ. ದೇವರಂತೂ ನನ್ನ ಬದುಕಿನಲ್ಲಿ ಮುನಿದು ಹೋಗಾಗಿದೆ ಮತ್ತು ದೇವರಂತಿದ್ದ ನೀನು. ಇಬ್ಬರೂ ಕಾರಣ ಹೇಳದೇ ಹೋಗಿದ್ದೀರಿ. ಆದರೂ ಮನಸ್ಸು ಯಾವುದೇ ಪ್ರತಿಫಲಪೇಕ್ಷೆಯಿಲ್ಲದೆ ಸುಮ್ಮನೆ ನೆಚ್ಚಿನ ಕವಿ ಕುವೆಂಪು ಅವರ
ತನುವು ನಿನ್ನದು ಮನವು ನಿನ್ನದು
ನನ್ನ ಜೀವಧನವು ನಿನ್ನದು
ನಾನು ನಿನ್ನವನೆಂಬ ಹೆಮ್ಮೆಯ
ತೃಣವು ಮಾತ್ರವು ನನ್ನದು...
ಮನಸ್ಸು ಮುದುರಿಕೊಂಡು ತನ್ನಷ್ಟಕ್ಕೆ ತಾನೆ ಹಾಡಿಕೊಳ್ಳುತ್ತಿದೆ..
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ












Click it and Unblock the Notifications