ಸಂಸ್ಕೃತದ ಜ್ಞಾನ ಎಲ್ಲ ವರ್ಗಗಳಿಗೂ ಲಭಿಸುವಂತಾಗಲಿ

ಕನ್ನಡ ಭಾಷೆಯ ಅಭಿವೃದ್ಧಿಗಾಗಿ ಏನು ಮಾಡಬೇಕು ಎಂದು ಚಿಂತಿಸುವುದನ್ನು ಬಿಟ್ಟು ನಕಾರಾತ್ಮಕ ಧೋರಣೆಯಡಿ ಸಂಸ್ಕೃತ ವಿವಿ ಬೇಡ ಅಂತ ಹೇಳಲಿಕ್ಕೆಂದು ಕೆಲ ಸಾಹಿತಿಗಳ ನಡುವೆ ಸ್ಪರ್ಧೆ ಏರ್ಪಟ್ಟಿರುವುದು ಸಾಹಿತಿಗಳ ಬೌದ್ಧಿಕ ಡೋಂಗಿತನದ ಪರಮಾವಧಿಯಾಗಿದೆ.
ಕಿ.ರಂ.ನಾಗರಾಜ್ರವರು ತಮ್ಮನ್ನು ತಾವು ಏನೆಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ ಎಂಬುದೇ ತಿಳಿಯಲಾಗಲಿಲ್ಲ. ಅವರೇ ಹೇಳಿದ ಹಾಗೆ ಭಾಷೆಯನ್ನು ತಿಳಿಯಲು ಪಂಡಿತರ ಅವಶ್ಯವಿರುವ, ಸೀಮಿತ ವಲಯ ಮಾತ್ರ ಓದುತ್ತಿರುವ ಪ್ರಾಚೀನ ಭಾಷೆಯಾದ ಸಂಸ್ಕೃತವನ್ನು ಬರೇ ಉಳಿಸುವುದಷ್ಟೇ ಅಲ್ಲದೇ ಸಮಾಜದ ಎಲ್ಲ ವಲಯ, ವರ್ಗಗಳಿಗೂ ತಲುಪುವಂತೆ ಬೆಳೆಸಲು ವಿಶ್ವವಿದ್ಯಾಲಯ ಅತ್ಯಂತ ಪೂರಕ ಎಂದು ಒಬ್ಬ ಸಾಹಿತಿಗೆ ಅನಿಸದಿರುವುದೇ ಆಶ್ಚರ್ಯ. ಅಂಥಾದ್ದರಲ್ಲಿ ತಮ್ಮ ಅಸಮ್ಮತಿಯನ್ನು ಒಂದು ವೇದಿಕೆಯ ಮೇಲೆ ಹರಿಯಬಿಟ್ಟಿರುವುದು ಅವರಿಗೇ ಶೋಭೆಯಲ್ಲ.
ನಮ್ಮ ದೇಶಕ್ಕೆ ಸಾಂಸ್ಕೃತಿಕ ಕ್ಷೇತ್ರದಲ್ಲಿ, ಭಾಷಾ ಕ್ಷೇತ್ರದಲ್ಲಿ ಜಗತ್ತಿನಲ್ಲೇ ವಿಶೇಷ ಸ್ಥಾನವಿರುವುದರ ಹಿಂದೆ ಸಂಸ್ಕೃತದ ಪಾತ್ರ ಅತ್ಯಂತ ಹಿರಿದು ಎಂಬುದನ್ನು ಅಲ್ಲಗೆಳೆಯಲು ಸಾಧ್ಯವೇ?
ನಾನು ಮತ್ತೂರಿನವ(ಸಂಸ್ಕೃತ ಗ್ರಾಮ ಎಂದೂ ಹೆಸರಿದೆ) ಎಂದರೆ ನಿಮಗೆ ಸಂಸ್ಕೃತ ಬರುತ್ತೆ ಅಲ್ವಾ? ಎಂದು ಕೇಳದವರೇ ಇಲ್ಲ. ಕೇಳಿ ಅವ್ಯಕ್ತ ಹೆಮ್ಮೆಯನ್ನನುಭವಿಸದವರೇ ಎಲ್ಲ. ಈ ಹೆಮ್ಮೆ ನನಗೆ ಸಂಸ್ಕೃತ ಬರುತ್ತೋ, ಬರಲ್ವೋ ಎಂಬುದಕ್ಕಲ್ಲ. ಸಂಸ್ಕೃತಕ್ಕೆ ವಿಶೇಷ ಸ್ಥಾನ ನೀಡಿ, ಶಾಲಾ ಪಠ್ಯವನ್ನಾಗಿ ಮಾಡಿ, ಹೆಚ್ಚಾಗಿ ಬಳಸುವ ಗ್ರಾಮ ಭಾರತದಲ್ಲಿದೆ ಎಂಬ ಕಾರಣಕ್ಕೆ.
ಸಂಸ್ಕೃತ ವಿವಿಯ ಕಾರಣದಿಂದ ಭಾಷೆಯಲ್ಲಿನ ಹೆಚ್ಚಿನ ಜ್ಞಾನ ನಾಗರಾಜ್ರ ಸಮೇತ ಸಮಾಜದ ಎಲ್ಲ ವರ್ಗ, ವಲಯಗಳಿಗೂ ಲಭಿಸುವಂತಾಗಲಿ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications