ಗೋಹತ್ಯೆ ನಿಷೇಧಕ್ಕೆ ಮುಸ್ಲಿಮರ ಚಳವಳಿ

ದೇಶದ ಸುಮಾರು 15 ರಾಜ್ಯಗಳಿಂದ ಬಂದಿದ್ದ ನೂರಾರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾಡಿದ ಸುದರ್ಶನ್, ಬ್ರಿಟಿಷರು ತಮ್ಮ ಸ್ವಾರ್ಥಕ್ಕೋಸ್ಕರ ಹಿಂದೂಗಳು ಹಾಗು ಮುಸ್ಲಿಮರ ನಡುವೆ ವೈಷಮ್ಯ ತಂದರು. ಆದರೆ ನಾವು ಒಂದಾದರೆ ಯಾರ ಸ್ವಾರ್ಥ ಪ್ರೇರಿತ ಕುತಂತ್ರವೂ ನಡೆಯುವುದಿಲ್ಲ. ನಾವೆಲ್ಲರೂ ಸಮಾಜದಲ್ಲಿ ಶಾಂತಿ ಹಾಗೂ ಪರಸ್ಪರ ಪ್ರೀತಿಯನ್ನು ಬೆಳೆಸುವತ್ತ ಕಾರ್ಯೋನ್ಮುಖರಾಗಬೇಕು. ನಾವು ಉತ್ತಮ ಸಂಸ್ಕೃತಿಯ ಹಿನ್ನೆಲೆಯುಳ್ಳವರಿದ್ದೇವೆ. ನಮ್ಮ ನಿಮ್ಮೆಲ್ಲರ ಪೂರ್ವಜರು ಒಬ್ಬರೇ. ನಾವೆಲ್ಲರೂ ಒಂದಾಗಿ ವಿವಿಧತೆಯಲ್ಲಿ ಏಕತೆಯನ್ನು ಸಾಬೀತುಮಾಡೋಣ ಎಂದು ಕರೆ ನೀಡಿದರು.
ಈ ದೇಶದ ಮುಸ್ಲಿಮರು ಹೊರಗಿನಿಂದ ಬಂದವರಲ್ಲ. ಈ ದೇಶದ ಆಸ್ತಿಯೇ ಅವರೂ. ಪೂಜಾಪದ್ದತಿಯು ಭಿನ್ನತೆಯನ್ನು ಪಡೆದಿರಬಹುದು. ಶಾಂತಿಯನ್ನು ಸಾರುವ ಇಸ್ಲಾಂ ಧರ್ಮ ಹಿಂಸೆಯನ್ನು ಪ್ರತಿಪಾದಿಸಲು ಸಾಧ್ಯವಿಲ್ಲ. ಆದರೆ ಯಾವ ಧರ್ಮ ಸರ್ವಾಧಿಕಾರಿ ಧೋರಣೆ ತಳೆಯುತ್ತದೋ ಅದು ಹಿಂಸೆಗೆ ಕಾರಣವಾಗುತ್ತದೆ. ಕ್ರಮೇಣ ಅದು ತನ್ನ ತಿರುಳನ್ನು ಕಳೆದುಕೊಳ್ಳುತ್ತದೆ ಎಂದರು.
ಕೃಷಿ ಆಧಾರಿತ ಭಾರತದ ಬೆನ್ನೆಲುಬಾದ ಗೋವಿನ ಹತ್ಯೆಯನ್ನು ನಿಷೇಧಿಸಬೇಕು ಹಾಗೂ ಉಗ್ರವಾದ ಕಾನೂನನ್ನು ತರಬೇಕೆಂದು ಒತ್ತಾಯಿಸುತ್ತಿರುವ ರಾಷ್ಟ್ರೀಯ ಮುಸ್ಲಿಂ ಮಂಚ್ನ ಉದ್ದೇಶ ಹಾಗೂ ಮುಂದಿನ ಯೋಜನೆಗಳನ್ನು ನಂತರ ಮಾತಾಡಿದ ಇಂದ್ರೇಶ್ ಕುಮಾರ್, ಮುಂದಿನ ದಿನಗಳಲ್ಲಿ ಮಂಚ್ ಭಯೋತ್ಪಾದನೆ ವಿರುದ್ಧದ ಸಲುವಾಗಿ ಜನರಲ್ಲಿ ಜಾಗೃತಿ ಮೂಡಿಸುವತ್ತ ಕೆಲಸ ಮಾಡಲಿದೆ ಹಾಗೂ ಇನ್ನೂ ಹಲವಾರು ರಾಜ್ಯ, ರಾಷ್ಟ್ರ ಮಟ್ಟದ ಮಹಿಳೆ ಹಾಗೂ ವಿದ್ಯಾರ್ಥಿಗಳ ರ್ಯಾಲಿಗಳನ್ನು ಯೋಜಿಸಲಿದೆ ಎಂದರು. ಈಗಾಗಲೇ 15 ಪೂರ್ಣಾವಧಿ ಕಾರ್ಯಕರ್ತರು ಹಗಲು-ರಾತ್ರಿ ಇದಕ್ಕೋಸ್ಕರ ಶ್ರಮಿಸುತ್ತಿದ್ದಾರೆ ಎಂದರು.
ಮಂಚ್ನ ಕಾರ್ಯಕರ್ತರು ಗೋಹತ್ಯೆ ನಿಷೇಧದ ಕಾನೂನನ್ನು ಜಾರಿಗೊಳಿಸಲು ಸರ್ಕಾರವನ್ನು ಒತ್ತಾಯಿಸುವ ಸಲುವಾಗಿ 5 ಲಕ್ಷ ಮುಸ್ಲಿಮರ ಸಹಿ ಸಂಗ್ರಹಿಸಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿಯವರಿಗೆ ಸಲ್ಲಿಸಿದರು. ಅನ್ಸಾರಿಯವರ ಸಲಹೆಯ ಮೇರೆಗೆ ಇನ್ನೂ 10 ಲಕ್ಷ ಹೆಚ್ಚಿನ ಮುಸ್ಲಿಮರ ಸಹಿ ಸಂಗ್ರಹಿಸಿ ಕೊಡುವುದಾಗಿ ಪ್ರಮಾಣ ಮಾಡಿದರು.
ಇದೇ ಸಮಯದಲ್ಲಿ ಡಿಯೋಬ್ಯಾಂಡ್ ಮದರಸಾ, ಮುಸ್ಲಿಮರು ಗೋವನ್ನು ಹಾಗೂ ಎತ್ತನ್ನು ಕೊಲ್ಲುವುದರ ವಿರುದ್ಧ ಫತ್ವಾ ಹೊರಡಿಸಿದೆ. ದರುಲ್ ಉಲ್ಲಮ್ ಸಹ ಫತ್ವಾ ಹೊರಡಿಸುವುದರ ಜತೆಗೆ ದೇವರನ್ನು ನಂಬುವ ಹಿಂದುಗಳು ಕಾಫಿರರಲ್ಲ ಎಂಬುದನ್ನು ಸಾರಿ ಹೇಳಿದೆ. ತನ್ವೀರ್ ಅಹಮದ್, ಮೊಹಮ್ಮದ್ ಅಫ್ಜಲ್, ಸಲಬತ್ ಖಾನ್ ಹಾಗು ಇನ್ನಿತರರನ್ನು ಮಂಚ್ನ ವಿವಿಧ ಹುದ್ದೆಗಳಿಗೆ ಮುಖಂಡರನ್ನಾಗಿ ಆಯ್ಕೆ ಮಾಡಲಾಯಿತು.
(ಮೂಲ : ದಿ ಆರ್ಗನೈಜರ್)
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications