ಗೋಹತ್ಯೆ ನಿಷೇಧಕ್ಕೆ ಮುಸ್ಲಿಮರ ಚಳವಳಿ

ದೇಶದ ಸುಮಾರು 15 ರಾಜ್ಯಗಳಿಂದ ಬಂದಿದ್ದ ನೂರಾರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾಡಿದ ಸುದರ್ಶನ್, ಬ್ರಿಟಿಷರು ತಮ್ಮ ಸ್ವಾರ್ಥಕ್ಕೋಸ್ಕರ ಹಿಂದೂಗಳು ಹಾಗು ಮುಸ್ಲಿಮರ ನಡುವೆ ವೈಷಮ್ಯ ತಂದರು. ಆದರೆ ನಾವು ಒಂದಾದರೆ ಯಾರ ಸ್ವಾರ್ಥ ಪ್ರೇರಿತ ಕುತಂತ್ರವೂ ನಡೆಯುವುದಿಲ್ಲ. ನಾವೆಲ್ಲರೂ ಸಮಾಜದಲ್ಲಿ ಶಾಂತಿ ಹಾಗೂ ಪರಸ್ಪರ ಪ್ರೀತಿಯನ್ನು ಬೆಳೆಸುವತ್ತ ಕಾರ್ಯೋನ್ಮುಖರಾಗಬೇಕು. ನಾವು ಉತ್ತಮ ಸಂಸ್ಕೃತಿಯ ಹಿನ್ನೆಲೆಯುಳ್ಳವರಿದ್ದೇವೆ. ನಮ್ಮ ನಿಮ್ಮೆಲ್ಲರ ಪೂರ್ವಜರು ಒಬ್ಬರೇ. ನಾವೆಲ್ಲರೂ ಒಂದಾಗಿ ವಿವಿಧತೆಯಲ್ಲಿ ಏಕತೆಯನ್ನು ಸಾಬೀತುಮಾಡೋಣ ಎಂದು ಕರೆ ನೀಡಿದರು.
ಈ ದೇಶದ ಮುಸ್ಲಿಮರು ಹೊರಗಿನಿಂದ ಬಂದವರಲ್ಲ. ಈ ದೇಶದ ಆಸ್ತಿಯೇ ಅವರೂ. ಪೂಜಾಪದ್ದತಿಯು ಭಿನ್ನತೆಯನ್ನು ಪಡೆದಿರಬಹುದು. ಶಾಂತಿಯನ್ನು ಸಾರುವ ಇಸ್ಲಾಂ ಧರ್ಮ ಹಿಂಸೆಯನ್ನು ಪ್ರತಿಪಾದಿಸಲು ಸಾಧ್ಯವಿಲ್ಲ. ಆದರೆ ಯಾವ ಧರ್ಮ ಸರ್ವಾಧಿಕಾರಿ ಧೋರಣೆ ತಳೆಯುತ್ತದೋ ಅದು ಹಿಂಸೆಗೆ ಕಾರಣವಾಗುತ್ತದೆ. ಕ್ರಮೇಣ ಅದು ತನ್ನ ತಿರುಳನ್ನು ಕಳೆದುಕೊಳ್ಳುತ್ತದೆ ಎಂದರು.
ಕೃಷಿ ಆಧಾರಿತ ಭಾರತದ ಬೆನ್ನೆಲುಬಾದ ಗೋವಿನ ಹತ್ಯೆಯನ್ನು ನಿಷೇಧಿಸಬೇಕು ಹಾಗೂ ಉಗ್ರವಾದ ಕಾನೂನನ್ನು ತರಬೇಕೆಂದು ಒತ್ತಾಯಿಸುತ್ತಿರುವ ರಾಷ್ಟ್ರೀಯ ಮುಸ್ಲಿಂ ಮಂಚ್ನ ಉದ್ದೇಶ ಹಾಗೂ ಮುಂದಿನ ಯೋಜನೆಗಳನ್ನು ನಂತರ ಮಾತಾಡಿದ ಇಂದ್ರೇಶ್ ಕುಮಾರ್, ಮುಂದಿನ ದಿನಗಳಲ್ಲಿ ಮಂಚ್ ಭಯೋತ್ಪಾದನೆ ವಿರುದ್ಧದ ಸಲುವಾಗಿ ಜನರಲ್ಲಿ ಜಾಗೃತಿ ಮೂಡಿಸುವತ್ತ ಕೆಲಸ ಮಾಡಲಿದೆ ಹಾಗೂ ಇನ್ನೂ ಹಲವಾರು ರಾಜ್ಯ, ರಾಷ್ಟ್ರ ಮಟ್ಟದ ಮಹಿಳೆ ಹಾಗೂ ವಿದ್ಯಾರ್ಥಿಗಳ ರ್ಯಾಲಿಗಳನ್ನು ಯೋಜಿಸಲಿದೆ ಎಂದರು. ಈಗಾಗಲೇ 15 ಪೂರ್ಣಾವಧಿ ಕಾರ್ಯಕರ್ತರು ಹಗಲು-ರಾತ್ರಿ ಇದಕ್ಕೋಸ್ಕರ ಶ್ರಮಿಸುತ್ತಿದ್ದಾರೆ ಎಂದರು.
ಮಂಚ್ನ ಕಾರ್ಯಕರ್ತರು ಗೋಹತ್ಯೆ ನಿಷೇಧದ ಕಾನೂನನ್ನು ಜಾರಿಗೊಳಿಸಲು ಸರ್ಕಾರವನ್ನು ಒತ್ತಾಯಿಸುವ ಸಲುವಾಗಿ 5 ಲಕ್ಷ ಮುಸ್ಲಿಮರ ಸಹಿ ಸಂಗ್ರಹಿಸಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿಯವರಿಗೆ ಸಲ್ಲಿಸಿದರು. ಅನ್ಸಾರಿಯವರ ಸಲಹೆಯ ಮೇರೆಗೆ ಇನ್ನೂ 10 ಲಕ್ಷ ಹೆಚ್ಚಿನ ಮುಸ್ಲಿಮರ ಸಹಿ ಸಂಗ್ರಹಿಸಿ ಕೊಡುವುದಾಗಿ ಪ್ರಮಾಣ ಮಾಡಿದರು.
ಇದೇ ಸಮಯದಲ್ಲಿ ಡಿಯೋಬ್ಯಾಂಡ್ ಮದರಸಾ, ಮುಸ್ಲಿಮರು ಗೋವನ್ನು ಹಾಗೂ ಎತ್ತನ್ನು ಕೊಲ್ಲುವುದರ ವಿರುದ್ಧ ಫತ್ವಾ ಹೊರಡಿಸಿದೆ. ದರುಲ್ ಉಲ್ಲಮ್ ಸಹ ಫತ್ವಾ ಹೊರಡಿಸುವುದರ ಜತೆಗೆ ದೇವರನ್ನು ನಂಬುವ ಹಿಂದುಗಳು ಕಾಫಿರರಲ್ಲ ಎಂಬುದನ್ನು ಸಾರಿ ಹೇಳಿದೆ. ತನ್ವೀರ್ ಅಹಮದ್, ಮೊಹಮ್ಮದ್ ಅಫ್ಜಲ್, ಸಲಬತ್ ಖಾನ್ ಹಾಗು ಇನ್ನಿತರರನ್ನು ಮಂಚ್ನ ವಿವಿಧ ಹುದ್ದೆಗಳಿಗೆ ಮುಖಂಡರನ್ನಾಗಿ ಆಯ್ಕೆ ಮಾಡಲಾಯಿತು.
(ಮೂಲ : ದಿ ಆರ್ಗನೈಜರ್)
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications