'ಕೆಪಿಐಟಿ ಕಮ್ಮಿನ್ಸ್'ನ ಸಾಮಾಜಿಕ ಕಳಕಳಿ

ಉದ್ಯೋಗಿಗಳಿಂದ ಹಣವನ್ನು ಸಂಗ್ರಹಿಸಿ 'ಯೂತ್ ಫಾರ್ ಸೇವಾ' ಎಂಬ ಸಂಸ್ಥೆಯ ಮೂಲಕ ತನ್ನ ಕರ್ತವ್ಯವನ್ನು ನಿರ್ವಹಿಸಲು ಕಂಪನಿ ನಿರ್ಧರಿಸಿದೆ. ಈಗಾಗಲೇ ಸಂಗ್ರಹ ಕಾರ್ಯ ಆರಂಭವಾಗಿದೆ. ಸುಮಾರು 8000 ಉದ್ಯೋಗಿಗಳಿರುವ ಸಂಸ್ಥೆಯಲ್ಲಿ ಬಹುಪಾಲು ಎಲ್ಲರೂ ಈ ಸತ್ಕಾರ್ಯದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಕಂಪನಿ ಈ ತರಹದ ಇನ್ನು ಕೆಲವು ಉತ್ತಮ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದೆ. ಈ ಕಾರಣಕ್ಕಾಗಿಯೇ ಕಂಪನಿ 'ವಿ - ಕೇರ್' ಎಂಬ ಉದ್ಯೋಗಿಗಳ ತಂಡವನ್ನು ಕಟ್ಟಿದೆ. ಈಗ್ಗೆ ಕೆಲವು ದಿನಗಳ ಹಿಂದೆ ನಗರದ ವೈಟ್ ಫೀಲ್ಡ್ ನಲ್ಲಿರುವ ಒಂದು ಸರ್ಕಾರಿ ಶಾಲೆಯನ್ನು ದತ್ತು ತೆಗೆದುಕೊಂಡು ಅಲ್ಲಿರುವ ಮಕ್ಕಳಿಗೆ ಮಧ್ಯಾಹ್ನದ ಭೋಜನದ ವ್ಯವಸ್ಥೆಯನ್ನು ಕಲ್ಪಿಸಲು 'ಅಕ್ಷಯ ಪಾತ್ರೆ' ಯೋಜನೆಯಡಿ ಕೈ ಜೋಡಿಸಿತ್ತು. ಈ ಕಾರಣಕ್ಕಾಗಿ ತನ್ನ ಉದ್ಯೋಗಿಗಳಿಂದ ಸಂಗ್ರಹಿಸಲ್ಪಟ್ಟ ಸುಮಾರು 3 ಲಕ್ಷ ರು.ಗಳನ್ನು ಯೋಜನೆಯಲ್ಲಿ ತೊಡಗಿಸಿದೆ.
'ಸಮರ್ಥನಂ ಟ್ರಸ್ಟ್' ಎಂಬ ಅಂಧ ಮಕ್ಕಳ ಬದುಕಿನಲ್ಲಿ ಹರ್ಷವನ್ನು ತುಂಬುವ ಸಂಸ್ಥೆಯೊಂದಿಗೆ ಕೈ ಜೋಡಿಸಿರುವ 'ಕೆಪಿಐಟಿ ಕಮಿನ್ಸ್', ಬದುಕಿನಲ್ಲಿ ಸಾರ್ಥಕತೆಯನ್ನು ಕಂಡುಕೊಳ್ಳುವ ಇಚ್ಛೆಯುಳ್ಳ ತನ್ನ ಉದ್ಯೋಗಿಗಳಿಗೆ ಉತ್ತಮ ಅವಕಾಶವನ್ನು ನೀಡಿದೆ.
ಯಾರ ನೋವಿಗೂ ಸ್ಪಂದಿಸದಿರುವ, ಆಧುನೀಕತೆಯ ಅಮಲಿನಲ್ಲಿ, ಶ್ರೀಮಂತಿಕೆಯ ಅಟ್ಟಹಾಸದಲ್ಲಿ ಮಾನವೀಯತೆಯನ್ನೇ ಮರೆಯುವ ಹಲವಾರು ಸ್ವಾರ್ಥ ವಿದೇಶೀ ಕಂಪನಿಗಳ ಮಧ್ಯೆ, ಪ್ರಚಾರಕ್ಕಾಗಿ ಟಿವಿಗಳಿಗೆ, ದಿನಪತ್ರಿಕೆಗಳಿಗೆ, ಪೋಸು ನೀಡುತ್ತ ಸಹಾಯಮಾಡುವ ಡೋಂಗಿಗಳ ಮಧ್ಯೆ, 'ಕೆಪಿಐಟಿ ಕಮಿನ್ಸ್' ಕಂಪನಿ ಎಲೆಮರೆಕಾಯಿಯಂತೆ ತನ್ನ ಕೈಂಕರ್ಯದಲ್ಲಿ ತೊಡಗಿದೆ.
-
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications