ವನವಾಸಿ ಬಂಧುಗಳ ಕಲ್ಯಾಣಕ್ಕಾಗಿ ಕೈಜೋಡಿಸಿ

'ವನವಾಸಿ ಬಂಧು'ಗಳು ಎಂದು ಗುರುತಿಸಬಹುದಾದ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ಕರೆತರಲು ಅಹರ್ನಿಶಿ ಕೆಲಸ ಮಾಡುತ್ತಿರುವ 'ವನವಾಸಿ ಕಲ್ಯಾಣ' ಎಂಬ ಸಾಮಾಜಿಕ ಸಂಸ್ಥೆ ಸದ್ದಿಲ್ಲದೇ ವನವಾಸಿ ಬಂಧುಗಳ ಏಳಿಗೆಗೋಸ್ಕರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡು ಅನೇಕ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಈ ಸಾಮಾಜಿಕ ಸಂಸ್ಥೆ ಬೆಂಗಳೂರಿನ ರಾಜಾಜಿನಗರದಲ್ಲಿದೆ.
ವನವಾಸಿ ಬಂಧುಗಳ ಶಿಕ್ಷಣಕ್ಕಾಗಿ ಶಾಲೆಗಳು, ವಿದ್ಯಾರ್ಥಿ ನಿಲಯಗಳು, ತರಬೇತಿ ಕೇಂದ್ರಗಳು, ವೈದ್ಯಕೀಯ ಚಿಕಿತ್ಸಾ ಶಿಬಿರಗಳು ಹಾಗು ಇನ್ನು ಹಲವಾರು ಚಟುವಟಿಕೆಗಳಲ್ಲಿ ಮಗ್ನವಾಗಿದೆ. ಆದರೆ ಇವುಗಳನ್ನೆಲ್ಲ ಯಾವುದೇ ಪತ್ರಿಕೆಗಳ ಮುಂದಾಗಲೀ ಅಥವಾ ಟಿವಿ ಚಾನೆಲ್ ಗಳ ಮುಂದಾಗಲೀ ಹೇಳಿಕೊಂಡಿಲ್ಲ. ಕಾರಣ ಇವೆಲ್ಲವುಗಳ ಹಿಂದಿನ ಉದ್ದೇಶ ಪವಿತ್ರ ದೇಶಭಕ್ತಿಯೇ ಹೊರತು ಪ್ರಸಿದ್ಧಿಯಾಗಲೀ ಪ್ರಚಾರವಾಗಲೀ ಅಲ್ಲ.
ಈ ಎಲ್ಲ ಪವಿತ್ರ ಕಾರ್ಯಗಳಿಗೋಸ್ಕರ ಮಹಿಳೆಯರ ಸಹಿತ ಸಾವಿರಾರು ಮಂದಿ ಪೂರ್ಣಾವಧಿ ಕಾರ್ಯಕರ್ತರು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ವನವಾಸಿ ಬಂಧುಗಳ ಶ್ರೇಯೋಭಿವೃದ್ಧಿಯಲ್ಲಿ ತಮ್ಮ ಜೀವನವನ್ನು ಜೋಡಿಸಿಕೊಂಡಿದ್ದಾರೆ.
ನಮ್ಮಲ್ಲೂ ಅನೇಕ ಮಂದಿಗೆ 'ನಮ್ಮ ದೇಶಕ್ಕೆ ಏನಾದರು ಮಾಡಬೇಕು' ಎಂಬ ಹಂಬಲ ಇರುತ್ತೆ. ಆದರೆ ಅದಕ್ಕೆ ಬೇಕಾದ ಸರಿಯಾದ ಪ್ರೇರಣೆ ಸಿಕ್ಕಿರುವುದಿಲ್ಲ. ಅದಕ್ಕೆ ಬೇಕಾದ 'ಸಾಧನ' ಸಿಕ್ಕಿರುವುದಿಲ್ಲ. ಈ ಕಾರಣಗಳಿಗೆ ಕೆಲವು ಉತ್ತಮ ಕಾರ್ಯಕ್ರಮಗಳು, ಕೆಲವು ಮಾಹಿತಿಗಳು ಪ್ರೇರಕಶಕ್ತಿಯಾಗಿ ಕೆಲಸ ಮಾಡಬಲ್ಲವು. ಬರುವ ಶನಿವಾರ 23ರಂದು ಸಂಜೆ 6 ಗಂಟೆಗೆ 'ವನವಾಸಿ ಕಲ್ಯಾಣ'ದ ಸಂಸ್ಥಾಪನಾ ದಿನದ ಪ್ರಯುಕ್ತ ಒಂದು ಸಣ್ಣ ಕಾರ್ಯಕ್ರಮ ಯೋಜನೆಯಾಗಿದೆ.
ಸ್ಥಳ ಮತ್ತು ಸಮಯ :
ಶಾಸ್ವತಿ ಸಭಾಂಗಣ
ಎನ್ ಎಂ ಕೆ ಆರ್ ವಿ ಮಹಿಳಾ ಕಾಲೇಜು
ಮೂರನೆ ಬ್ಲಾಕ್, ಜಯನಗರ, ಬೆಂಗಳೂರು
ಸಮಯ: ಶನಿವಾರ 23 ರಂದು ಸಂಜೆ 6 ಗಂಟೆಗೆ
'ವನವಾಸಿ ಕಲ್ಯಾಣ' ಮತ್ತು ಕಾರ್ಯಕ್ರಮದ ಬಗ್ಗೆ ತಿಳಿದುಕೊಳ್ಳಲು ಸಂಪರ್ಕಿಸಿ : www.vanavasikalyan.org
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications