ವನವಾಸಿ ಬಂಧುಗಳ ಕಲ್ಯಾಣಕ್ಕಾಗಿ ಕೈಜೋಡಿಸಿ

'ವನವಾಸಿ ಬಂಧು'ಗಳು ಎಂದು ಗುರುತಿಸಬಹುದಾದ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ಕರೆತರಲು ಅಹರ್ನಿಶಿ ಕೆಲಸ ಮಾಡುತ್ತಿರುವ 'ವನವಾಸಿ ಕಲ್ಯಾಣ' ಎಂಬ ಸಾಮಾಜಿಕ ಸಂಸ್ಥೆ ಸದ್ದಿಲ್ಲದೇ ವನವಾಸಿ ಬಂಧುಗಳ ಏಳಿಗೆಗೋಸ್ಕರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡು ಅನೇಕ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಈ ಸಾಮಾಜಿಕ ಸಂಸ್ಥೆ ಬೆಂಗಳೂರಿನ ರಾಜಾಜಿನಗರದಲ್ಲಿದೆ.
ವನವಾಸಿ ಬಂಧುಗಳ ಶಿಕ್ಷಣಕ್ಕಾಗಿ ಶಾಲೆಗಳು, ವಿದ್ಯಾರ್ಥಿ ನಿಲಯಗಳು, ತರಬೇತಿ ಕೇಂದ್ರಗಳು, ವೈದ್ಯಕೀಯ ಚಿಕಿತ್ಸಾ ಶಿಬಿರಗಳು ಹಾಗು ಇನ್ನು ಹಲವಾರು ಚಟುವಟಿಕೆಗಳಲ್ಲಿ ಮಗ್ನವಾಗಿದೆ. ಆದರೆ ಇವುಗಳನ್ನೆಲ್ಲ ಯಾವುದೇ ಪತ್ರಿಕೆಗಳ ಮುಂದಾಗಲೀ ಅಥವಾ ಟಿವಿ ಚಾನೆಲ್ ಗಳ ಮುಂದಾಗಲೀ ಹೇಳಿಕೊಂಡಿಲ್ಲ. ಕಾರಣ ಇವೆಲ್ಲವುಗಳ ಹಿಂದಿನ ಉದ್ದೇಶ ಪವಿತ್ರ ದೇಶಭಕ್ತಿಯೇ ಹೊರತು ಪ್ರಸಿದ್ಧಿಯಾಗಲೀ ಪ್ರಚಾರವಾಗಲೀ ಅಲ್ಲ.
ಈ ಎಲ್ಲ ಪವಿತ್ರ ಕಾರ್ಯಗಳಿಗೋಸ್ಕರ ಮಹಿಳೆಯರ ಸಹಿತ ಸಾವಿರಾರು ಮಂದಿ ಪೂರ್ಣಾವಧಿ ಕಾರ್ಯಕರ್ತರು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ವನವಾಸಿ ಬಂಧುಗಳ ಶ್ರೇಯೋಭಿವೃದ್ಧಿಯಲ್ಲಿ ತಮ್ಮ ಜೀವನವನ್ನು ಜೋಡಿಸಿಕೊಂಡಿದ್ದಾರೆ.
ನಮ್ಮಲ್ಲೂ ಅನೇಕ ಮಂದಿಗೆ 'ನಮ್ಮ ದೇಶಕ್ಕೆ ಏನಾದರು ಮಾಡಬೇಕು' ಎಂಬ ಹಂಬಲ ಇರುತ್ತೆ. ಆದರೆ ಅದಕ್ಕೆ ಬೇಕಾದ ಸರಿಯಾದ ಪ್ರೇರಣೆ ಸಿಕ್ಕಿರುವುದಿಲ್ಲ. ಅದಕ್ಕೆ ಬೇಕಾದ 'ಸಾಧನ' ಸಿಕ್ಕಿರುವುದಿಲ್ಲ. ಈ ಕಾರಣಗಳಿಗೆ ಕೆಲವು ಉತ್ತಮ ಕಾರ್ಯಕ್ರಮಗಳು, ಕೆಲವು ಮಾಹಿತಿಗಳು ಪ್ರೇರಕಶಕ್ತಿಯಾಗಿ ಕೆಲಸ ಮಾಡಬಲ್ಲವು. ಬರುವ ಶನಿವಾರ 23ರಂದು ಸಂಜೆ 6 ಗಂಟೆಗೆ 'ವನವಾಸಿ ಕಲ್ಯಾಣ'ದ ಸಂಸ್ಥಾಪನಾ ದಿನದ ಪ್ರಯುಕ್ತ ಒಂದು ಸಣ್ಣ ಕಾರ್ಯಕ್ರಮ ಯೋಜನೆಯಾಗಿದೆ.
ಸ್ಥಳ ಮತ್ತು ಸಮಯ :
ಶಾಸ್ವತಿ ಸಭಾಂಗಣ
ಎನ್ ಎಂ ಕೆ ಆರ್ ವಿ ಮಹಿಳಾ ಕಾಲೇಜು
ಮೂರನೆ ಬ್ಲಾಕ್, ಜಯನಗರ, ಬೆಂಗಳೂರು
ಸಮಯ: ಶನಿವಾರ 23 ರಂದು ಸಂಜೆ 6 ಗಂಟೆಗೆ
'ವನವಾಸಿ ಕಲ್ಯಾಣ' ಮತ್ತು ಕಾರ್ಯಕ್ರಮದ ಬಗ್ಗೆ ತಿಳಿದುಕೊಳ್ಳಲು ಸಂಪರ್ಕಿಸಿ : www.vanavasikalyan.org
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ











Click it and Unblock the Notifications