'ಸಂಸ್ಕೃತದಲಿನ್ನೇನು?' ಎಂದ ಕವಿ ಮಹಲಿಂಗರಂಗ

'ಸುಲಿದ ಬಾಳೆಯ ಹಣ್ಣಿನಂದದಿ, ಕಳೆದ ಸಿಗುರಿನ ಕಬ್ಬಿನಂದದಿ, ಅಳಿದ ಉಷ್ಣದ ಹಾಲಿನಂದದಿ ಸುಲಭವಾಗಿರ್ಪ, ಲಲಿತವಹ ಕನ್ನಡದ ನುಡಿಯಲಿ ತಿಳಿದು ತನ್ನೊಳು ತನ್ನ ಮೋಕ್ಷವ ಗಳಿಸಿಕೊಂಡರೆ ಸಾಲದೇ, ಸಂಸ್ಕೃತದಲಿನ್ನೇನು?' ಹೀಗೆ ಕನ್ನಡನುಡಿಯ ಹಿರಿಮೆಯನ್ನು 17ನೆಯ ಶತಮಾನದಲ್ಲೇ ಸಾರಿದ ಮಹಾನ್ ಕವಿ ಮಹಲಿಂಗರಂಗ.
12ನೆಯ ಶತಮಾನದಿಂದ ಕನ್ನಡ ನೆಲದಲ್ಲಿ ವೀರಶೈವ ಪರಂಪರೆ ಮತ್ತು ಆ ಮತಧರ್ಮದ ಸಾಹಿತ್ಯ ಬೆಳಗತೊಡಗಿತು. ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ಅದು ಇನ್ನಷ್ಟು ಶೋಭಾಯಮಾನವಾಯಿತು. ಅದೇ ವೇಳೆ 'ಕೈವಲ್ಯ ಸಾಹಿತ್ಯ'ವೆಂಬ ಸಾಹಿತ್ಯ ಪ್ರಕಾರವು ಆರಂಭವಾಯಿತು. ಅದ್ವೈತ ಸಿದ್ಧಾಂತದ ಬೆಳಕಿನಲ್ಲಿ ಆಧ್ಯಾತ್ಮಿಕ ಜಿಜ್ಞಾಸೆ 'ಕೈವಲ್ಯ ಸಾಹಿತ್ಯ'ದ ಮುಖ್ಯಸ್ರೋತವಾಗಿತ್ತು. ಪರಮಾರ್ಥಸಾಧನೆಯ ಮಾರ್ಗದ ಶೋಧವೇ 'ಕೈವಲ್ಯ ಸಾಹಿತ್ಯ'ದ ಉದ್ದೇಶವಾಗಿತ್ತು. 'ಭಕ್ತಿಮಾರ್ಗ'ಕ್ಕಿಂತ ಭಿನ್ನವಾದ 'ಜ್ಞಾನಮಾರ್ಗ'ಕ್ಕೆ ಒತ್ತು ನೀಡಿದ ಸಾಹಿತ್ಯ ಈ 'ಕೈವಲ್ಯ ಸಾಹಿತ್ಯ'.
ವೀರಶೈವ ತತ್ತ್ವವನ್ನು ಅದ್ವೈತ ಸಿದ್ಧಾಂತದೊಡನೆ ಸಮನ್ವಯಗೊಳಿಸಿ ಅರ್ಥೈಸಲೆತ್ನಿಸಿದ ನಿಜಗುಣ ಶಿವಯೋಗಿಗಳು 15ನೆಯ ಶತಮಾನದಲ್ಲಿ 'ಕೈವಲ್ಯ ಸಾಹಿತ್ಯ'ಕ್ಕೆ ಶ್ರೇಷ್ಠ ಕೊಡುಗೆ ಸಲ್ಲಿಸಿದರು. ಈ ಸಾಹಿತ್ಯಪ್ರಕಾರದಲ್ಲಿ ಅನಂತರದ ಮಹತ್ತರ ಕೊಡುಗೆ 17ನೆಯ ಶತಮಾನದ ಕವಿ ಮಹಲಿಂಗರಂಗನದು. ನಿಜಜೀವನದ ಅನುಪಮ ಉಪಮೆಗಳಿಂದ ಕೂಡಿದ ಷಟ್ಪದಿಗಳ ಮೂಲಕ ಮಹಲಿಂಗರಂಗ ಕವಿಯು ತನ್ನ 'ಅನುಭವಾಮೃತ' ಕೃತಿಯಲ್ಲಿ ಆದಿಶಂಕರರ ಅದ್ವೈತ ತತ್ತ್ವವನ್ನು ಪ್ರಸ್ತುತಪಡಿಸಿರುವ ಬಗೆ ಅನನ್ಯವಾದುದಾಗಿದೆ. ಈ ಕೃತಿಯು ಕನ್ನಡದ ಶ್ರೇಷ್ಠ ಕೃತಿಗಳಲ್ಲೊಂದೆಂದು ಹೇಳಬಹುದಾಗಿದೆ.
'ಮಹಲಿಂಗರಂಗ - ಒಂದು ಅಧ್ಯಯನ' ಮಹಾಪ್ರಬಂಧಕ್ಕಾಗಿ ಪ್ರೊ. ಗುರುಪಾದ ಘಿವಾರಿ ಅವರಿಗೆ ಕರ್ನಾಟಕ ವಿಶ್ವವಿದ್ಯಾಲಯವು 2009ರ ಜನವರಿಯಲ್ಲಿ ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ.
ಪ್ರಸ್ತುತ ಕನ್ನಡ ಸಾಹಿತ್ಯ ಪರಿಷತ್ತಿನ ದಾವಣಗೆರೆ ಜಿಲ್ಲಾ ಘಟಕವು ಗೌರಮ್ಮ ಪಿ. ರಾಮರಾವ್ ದತ್ತಿನಿಧಿಯಡಿ 'ಮಹಲಿಂಗರಂಗ ಸಾಹಿತ್ಯ ಪ್ರಶಸ್ತಿ'ಯನ್ನು 2002ನೇ ಇಸವಿಯಿಂದ ಪ್ರತಿವರ್ಷ ನೀಡುತ್ತಬಂದಿದೆ. ಕನ್ನಡ ಸಾಹಿತ್ಯಕ್ಷೇತ್ರದಲ್ಲಿ ಶ್ರೇಷ್ಠ ಸಾಧನೆ ಮಾಡಿದ ಮತ್ತು ಜಿಲ್ಲೆಯವರಾದ ಸಾಹಿತಿಗಳಿಗೆ ಈ ಪ್ರಶಸ್ತಿ ಸಲ್ಲುತ್ತದೆ. ಇಂದು ನಾಯಿಕೊಡೆಗಳಂತೆ ಹುಟ್ಟಿಕೊಂಡಿರುವ ಇತರ ಅನೇಕ ಪ್ರಶಸ್ತಿಗಳಂತಲ್ಲದ ಈ ಪ್ರಶಸ್ತಿಗೆ ಅರ್ಹರನ್ನು ಸಾಹಿತ್ಯ ಪರಿಷತ್ತು ರಚಿಸುವ ಆಯ್ಕೆ ಸಮಿತಿಯು ನಿರ್ಧರಿಸುತ್ತದೆ. ಅನಂತರ ಪರಿಷತ್ತು ಸರ್ವಾನುಮತದಿಂದ ನಿರ್ಧಾರವನ್ನು ಸ್ವೀಕಾರ ಮಾಡುತ್ತದೆ. ಯಾವುದೇ ಅರ್ಜಿ, ಆಮಿಷ, ವಶೀಲಿಬಾಜಿಗಳಿಂದ ಹೊರತಾಗಿರುವ ಈ ಪ್ರಶಸ್ತಿಯು ಅಪ್ಪಟ ಗುಣಗ್ರಾಹಿಯಾಗಿದೆ. ವೃತ್ತಪತ್ರಿಕೆಗಳ ಸ್ಥಾನಿಕ ಆವೃತ್ತಿ ಮತ್ತು ಸ್ಥಳೀಯ ಪುಟಗಳೆಂಬ (ಅ)ವ್ಯವಸ್ಥೆಯಿಂದಾಗಿ ಈ ಪ್ರಶಸ್ತಿಗೆ ವ್ಯಾಪಕ ಪ್ರಚಾರ ಸಿಕ್ಕಿಲ್ಲ, ಅಷ್ಟೆ.
ಕಳೆದ ಏಳು ವರ್ಷಗಳಲ್ಲಿ ಕ್ರಮವಾಗಿ ಲಲಿತಮ್ಮ ಡಾ. ಚಂದ್ರಶೇಖರ್, ಮುದೇನೂರು ಸಂಗಣ್ಣ, ಬಿದರಹಳ್ಳಿ ನರಸಿಂಹಮೂರ್ತಿ, ಕುಂ.ಬಾ. ಸದಾಶಿವಪ್ಪ, ಬಿ.ವಿ. ವೀರಭದ್ರಪ್ಪ, ಶ್ರೀನಿವಾಸ ಸುತ್ರಾವೆ ಮತ್ತು ಟಿ. ಗಿರಿಜ ಇವರು ಗಳಿಸಿರುವ ಈ ಪ್ರಶಸ್ತಿಯು ಈ ಬಾರಿ (2009ನೇ ಸಾಲಿಗೆ) ಈ ಲೇಖಕನಿಗೆ ಸಂದಿದೆ.
'ದಟ್ಸ್ ಕನ್ನಡ'ದ ಓದುಗರು ಬಯಸಿದ್ದರಿಂದಾಗಿ ಇವಿಷ್ಟು ವಿವರಗಳು. ಅಭಿನಂದನೆ ತಿಳಿಸಿರುವ ಮಿತ್ರರೆಲ್ಲರಿಗೂ ಈ ಲೇಖಕನ ಧನ್ಯವಾದಗಳು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications