ಪದ್ಮಶ್ರೀಯ ಘನತೆಗೆ ಇತಿಶ್ರೀ!

ಕೇವಲ ಹೆಸರೇ ಯೋಗ್ಯತೆಯಾಗಿರುವ 'ಗುಲಾಂ ಮೊಹಮ್ಮದ್ ಮೀರ್ ಯಾನೆ ಮಾಮಾ ಖಾನ್'ನನ್ನು 'ಪದ್ಮಶ್ರೀ'ಗೆ ಆಯ್ಕೆ ಮಾಡಿರುವುದು ಕೇಂದ್ರ ಸರ್ಕಾರದ ಅಲ್ಪಸಂಖ್ಯಾತರ ಓಲೈಕೆ ರಾಜಕೀಯಕ್ಕೆ ಹಿಡಿದ ದಿವ್ಯ ನಿದರ್ಶನವಾಗಿದೆ. ಒಂದು ವೇಳೆ ಅವನು ಒಳ್ಳೆಯವನಾಗಿ ಬದಲಾಗಿದ್ದರೆ ಅವನಿಗೆ 'ಪದ್ಮಶ್ರೀ'ಯ ಸತ್ಕಾರದ ಅನಿವಾರ್ಯತೆಯೇನು?
ಇನ್ನು ಇತ್ಯರ್ಥವಾಗದ ಕೊಲೆ-ಸುಲಿಗೆ ಯಂತಹ ಕ್ರಿಮಿನಲ್ ಮೊಕದ್ದಮೆಗಳಿರುವ ಮಾಜಿ ಭಯೋತ್ಪಾದಕ, 'ಅಲ್ಪಸಂಖ್ಯಾತ ನಾಯಕ'ನ 'ಸಾಮಾಜಿಕ ಸೇವೆ'ಗೆ 'ಪದ್ಮಶ್ರೀ'ಯ ಬಾಗಿಲು ತೆರೆದಿದ್ದು ಕೇಂದ್ರ ಸರ್ಕಾರದ ಸಾಧನೆಯೇ ಸರಿ! ಈವರೆಗೆ 'ಪದ್ಮಶ್ರೀ' ಪಡೆದಿರುವ ಎಲ್ಲ ಗಣ್ಯರಿಗೂ 'ನಗಣ್ಯ' ಪಟ್ಟ ಕೊಟ್ಟಿದ್ದು ಕೇಂದ್ರದ ಸಾಧನೆಯೇ ಸರಿ!
ಇಷ್ಟೆಲ್ಲಾ ನಡೆಯುತ್ತಿದ್ದರೂ, 'ರಾಮಮಂದಿರ ನಿರ್ಮಾಣ' ಎಂಬ ಖಾತರಿ ಯೋಜನೆಯ ರೂವಾರಿ, 'ವಿರೋಧ ಪಕ್ಷ' ಎಂಬ ಸುಪ್ಪತ್ತಿಗೆಯಲ್ಲಿ ಕುಳಿತು ತಮ್ಮ ಪಕ್ಷದ ಸಮಸ್ಯೆಗಳನ್ನೇ ಮೈಮೇಲೆ ಎಳೆದುಕೊಂಡು ಅತೃಪ್ತರ ಮನ ಒಲಿಸುವುದೇ 'ಸಾಮಾಜಿಕ ಕೆಲಸ' ವಾಗಿಬಿಟ್ಟಿದೆ.
ಕೇಂದ್ರದ ಈ ನಿರ್ಧಾರಕ್ಕೆ ಜಮ್ಮು -ಕಾಶ್ಮೀರ ಮುಖ್ಯಮಂತ್ರಿ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ, ಸಂತೋಷಕ್ಕೋ, ದುಃಖಕ್ಕೋ ಗೊತ್ತಿಲ್ಲ. ಅಂತು ಇಂತೂ 'ಪದ್ಮಶ್ರೀ'ಯ ಘನತೆಗೆ 'ಇತಿಶ್ರೀ' ಹಾಡಿರುವ ಯುಪಿಎ ಸರ್ಕಾರ ಪ್ರಶಸ್ತಿಯನ್ನು 'ಶರಣಾಗತರಾದ ಉಗ್ರ'ರಿಗೊಸ್ಕರವೇ ಮೀಸಲಿಡುವುದು ಒಳಿತು. ಇನ್ಮುಂದೆ ಪ್ರಶಸ್ತಿ ಸ್ವೀಕರಿಸಲು ಯಾವ 'ಸಾಮಾಜಿಕ ಸೇವಾ'ಕರ್ತರೂ ಮನಸ್ಸು ಮಾಡುವುದು ಅನುಮಾನವೇ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications