ಅಭಿನಂದನಾರ್ಹ ಮುಸ್ಲಿಂ ರಾಷ್ಟ್ರೀಯ ಮಂಚ್

ಈ ವಿಷಯವಾಗಿ ಹಲವಾರು ಬುಧ್ಧಿಜೀವಿಗಳು, ಸಂಘಟನೆಗಳು ಕಾಯಿದೆಯ ವಿರುದ್ಧ ಪ್ರತಿಭಟಿಸುತ್ತಲೇ ಬಂದಿದ್ದಾರೆ. 'ಅಲ್ಪಸಂಖ್ಯಾತರ ಹಾಗು ದಲಿತರ ಆಹಾರ ಸ್ವಾತಂತ್ರ್ಯ'ಕ್ಕೆ ಧಕ್ಕೆ ಬರುತ್ತದೆ ಎಂದು ಬೊಂಬಡಿ ಬಜಾಯಿಸುತ್ತಿದ್ದಾರೆ. ಆದರೆ ಇದೇ ಗೋಹತ್ಯೆ ನಿಷೇಧದ ಕಾನೂನಿನ ಜಾರಿಗೋಸ್ಕರ ರಾಘವೇಶ್ವರ ಭಾರತಿ ಸ್ವಾಮೀಜಿಗಳ ಜತೆ ಕೈ ಜೋಡಿಸಿ ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಿರುವ ಸುಮಾರು ಮೂರು ಲಕ್ಷಕ್ಕೂ ಅಧಿಕ ಮುಸ್ಲಿಮರು ಮನುಷ್ಯರಲ್ಲವೇ? ಅವರ 'ಆಹಾರ ಸ್ವಾತಂತ್ರ್ಯ' ಹರಣವಾಗುವುದಿಲ್ಲವೇ?
ಮುಸ್ಲಿಂ ರಾಷ್ಟ್ರೀಯ ಮಂಚ್ ಎಂಬ ಸಂಘಟನೆ ಹಲವಾರು ತಿಂಗಳುಗಳಿಂದ ಗೋಹತ್ಯೆಯನ್ನು ನಿಷೇಧಿಸಬೇಕು ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಡುತ್ತಲೇ ಬಂದಿದೆ. ಕೃಷಿ ಅಭಿವೃದ್ಧಿಗೆ ಮಾರಕವಾದ ಗೋಹತ್ಯೆಯನ್ನು ಖಂಡಿತವಾಗಿ ನಿಷೇಧಿಸಬೇಕು ಎಂದು ಮುಸ್ಲಿಂ ಜಾಗರಣ ಮಂಚ್ ನ ಕೆ.ಎಂ. ಅನೀಸ್ ಉಲ್ ಹಕ್ ರವರು ಸಾರ್ವಜನಿಕ ವೇದಿಕೆಯಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಒಳ್ಳೆಯ ಕೆಲಸಕ್ಕೋಸ್ಕರ ಎಲ್ಲ ಮುಸ್ಲಿಮರೂ ಕೈ ಜೋಡಿಸಬೇಕು ಎಂದು ಕರೆ ಕೊಟ್ಟಿದ್ದಾರೆ.
ಆದರೆ ಕೆಲ ಸ್ವಾರ್ಥರೋಗ ಪೀಡಿತ ರಾಜಕಾರಣಿಗಳು ಹಾಗು ಬುದ್ಧಿಜೀವಿಗಳಿಂದ ಇದಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ತಮ್ಮ 'ಬಿಜೆಪಿ ವಿರೋಧಿ' ನಿಲುವಿನಡಿಯಲ್ಲಿ ಮುಸ್ಲಿಮರನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಈ ಮೂಲಕ ತಮ್ಮ ರಾಜಕೀಯ ಸ್ವಾರ್ಥದ ಬೇಳೆಯನ್ನು ಬೇಯಿಸಿಕೊಳ್ಳಲಾಗುತ್ತಿದೆ.
ಆದರೆ ಇವುಗಳ ಹಿಂದಿನ ದುರುದ್ದೇಶಗಳನ್ನು ಅರ್ಥ ಮಾಡಿಕೊಂಡಿರುವ ಸಜ್ಜನ ಮುಸ್ಲಿಮರು 'ಗೋಹತ್ಯೆ ನಿಷೇಧ ಕಾನೂನಿನ' ಜಾರಿಗೊಸ್ಕರ ಒತ್ತಾಯಿಸುತ್ತಿದ್ದಾರೆ. ತಮ್ಮ ಧರ್ಮದವರ ಜಾಗೃತಿಗೋಸ್ಕರ ಕೆಲಸ ಮಾಡುತ್ತಿದ್ದಾರೆ. ರಾಷ್ಟ್ರದ ಒಳಿತಿಗೋಸ್ಕರ, ದುಷ್ಟ ರಾಜಕಾರಣಿಗಳ ಓಲೈಕೆಗೆ ಕಿವಿಗೊಡದೆ ಮುನ್ನಡೆಯುತ್ತಿರುವ ಮುಸ್ಲಿಂ ರಾಷ್ಟ್ರೀಯ ಮಂಚ್ ನ ಎಲ್ಲ ಕಾರ್ಯಕರ್ತರೂ ಅಭಿನಂದನಾರ್ಹರು.
ನಿಷ್ಕ್ರಿಯರಾಗಿರುವ ಎಲ್ಲ ಸಜ್ಜನರೂ ಸಕ್ರಿಯರಾಗಿರಬೇಕು. ರಾಷ್ಟ್ರೀಯತೆಯ ಪ್ರವಾಹದಲ್ಲಿ ಒಂದಾಗಬೇಕು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications