ಹುಟ್ಟು ಸಾವು ನಡುವಿನ ಸಾರ್ಥಕ ಬಾಳು

ಒಂದು ಮಗುವಿನ ಹುಟ್ಟಿನೊಂದಿಗೆ ಅನೇಕ ಆಸೆ ಕನಸುಗಳೂ ಹುಟ್ಟಿಕೊಳ್ಳುತ್ತವೆ. ಬದುಕಿನುದ್ದಕ್ಕೂ ಅವುಗಳನ್ನು ಪೂರೈಸಿಕೊಳ್ಳಲು ವ್ಯಕ್ತಿ ಹೆಣಗುತ್ತಾನೆ, ಹಾಗೆ ಸಫಲವಾಗುವುದು ಕೆಲವೇ ಕೆಲವು. ಇನ್ನುಳಿದವು ವ್ಯಕ್ತಿಯ ಸಾವಿನೊಂದಿಗೆ ಸಾಯುತ್ತವೆ. ವ್ಯಕ್ತಿ ಸಫಲಗೊಳಿಸಿಕೊಂಡ ಆಸೆ ಕನಸುಗಳಿಂದಲೇ ನಾವು ಅವನನ್ನು ನಾವು ಅಳೆಯುತ್ತೇವೆ. ಅವನ ಸಾಕಾರಗೊಳ್ಳದ ವ್ಯಕ್ತಿತ್ವಗಳಿಂದ ಅವನನ್ನು ನಾವು ಅಳೆಯುವುದಿಲ್ಲ, ಅಲ್ವೆ?
ಶರಣರ ಗುಣವನ್ನು ಮರಣದಲ್ಲಿ ಕಾಣು ಎಂಬಂತೆ ವ್ಯಕ್ತಿ ತೀರಿಕೊಂಡ ಮೇಲೆ ಆತ ಉಳಿಸಿ ಹೋದ, ಬೆಳೆಸಿಕೊಂಡ ವ್ಯಕ್ತಿತ್ವದ ಆಧಾರದ ಮೇಲೆ ಆತನ ಗುಣವನ್ನು ಅಳೆಯುತ್ತಾರೆ. ಸಮಾಜ ಸೇವೆ, ಬುದ್ಧಿವಂತಿಕೆ, ಒಳ್ಳೆಯತನಗಳಿಂದ ವ್ಯಕ್ತಿಯನ್ನು ತೂಗುತ್ತೇವೆ. ಜೀವನದಲ್ಲಿ ಮಾಡಿದ ಸಾಧನೆಯೇ ಆಸ್ತಿ ಅಂತಸ್ತು.
ಒಬ್ಬ ವ್ಯಕ್ತಿ ಸತ್ತಾಗ, ಆತ ಮಾಡಿದ ಸಾಧನೆಗಳೆಲ್ಲ ಚರ್ಚೆಗೆ ಬರುತ್ತವೆ. ಇಷ್ಟು ಬೇಗ ಸಾಯಬಾರದಿತ್ತು, ಎಂದೂ ಆತ ಕೆಡಕು ಬಯಸಿದವನಲ್ಲ, ಇಂಥವರು ಇದ್ದಿದ್ರಿಂದಾನೇ ಮಳೆಬೆಳೆಯೆಲ್ಲ ಆಗುತ್ತಿರುವುದು, ಇಂಥವರು ಸಿಗುವುದು ಲಕ್ಷಕ್ಕೊಬ್ಬರು, ಇನ್ನೂ ಇದ್ರಿದ್ರೆ ಚೆನ್ನಾಗಿತ್ತು, ಇವನ ಸಾವು ನಿಜಕ್ಕೂ ತುಂಬಲಾರದ ನಷ್ಟ.... ಮುಂತಾದ ಮಾತುಗಳು ಪುಂಖಾನುಪುಂಖವಾಗಿ ಹೊರಬರುತ್ತವೆ. ಅದೇ, ಸಮಾಜದಲ್ಲಿ ಯಾವುದೇ ಛಾಪು ಮೂಡಿಸದೇ ಸತ್ತರೆ ಅಥವಾ ಸಮಾಜಕ್ಕೆ ಬೇಡದವನಾಗಿ ಸತ್ತಿದ್ದರೆ... ಏನೇನಂತಾರೆ ಅಂತ ನೀವೇ ಊಹಿಸಿ.
ಗೆಳೆಯರೆ, ಸಾವನ್ನು ಕುರಿತ ಕಥೆ ನಿಮಗೆ ಹೇಳಲೇಬೇಕು. ವ್ಯಕ್ತಿಯೊಬ್ಬ ದೇವರಲ್ಲಿ ಹೀಗೆ ಬೇಡಿಕೊಂಡನಂತೆ. ದೇವ ನಾನು ಸತ್ತಾಗ ನನ್ನ ಸಾವಿಗೆ ದುಃಖಿಸಿ ಅಳುವ ಕೆಲವರಾದರೂ ಜನರಿರುವಂತೆ ಕರುಣಿಸು ಅಂತ. ಅದಕ್ಕೆ ದೇವರು, ಇದು ನನ್ನಿಂದ ಆಗದ ಕೆಲಸ. ಜನರು ಮೆಚ್ಚುವಂತೆ ನೀನು ಬದುಕಬೇಕು ಎಂದನಂತೆ...
ಈ ಕಥೆಯೊಳಗೆ ಬದುಕಿನ ಗೂಡಾರ್ಥವೇ ಅಡಗಿದೆಯಲ್ಲವೇ? ಹುಟ್ಟು ಸಾವು ಎನ್ನುವುದು ಯಾವುದೋ ಶಕ್ತಿಯ ಕ್ಯೆಯಲ್ಲಿದ್ದರೂ ಮಧ್ಯದ ಈ ಬದುಕಿನಲ್ಲಿ ಗುಣವಂತನಾಗುವುದು, ಕೆಡುಕನಾಗುವುದು ವ್ಯಕ್ತಿಯ ಕ್ಯೆಯಲ್ಲೇ ಇದೆಯಲ್ಲವೇ? ಸಾವಿನೆಡೆಗೆ ಏನಿದೆಯೋ ಯಾರಿಗೂ ತಿಳಿದಿಲ್ಲ. ನಾವೆಲ್ಲ ಒಳ್ಳೆಯವರಾಗಿ ಸಮಾಜಕ್ಕೆ ಬೇಕಾದವರಾಗಿ ಬದುಕಿದರೆ ಮುಂದೆ ಸ್ವರ್ಗದ ದಾರಿ ಸಿಗಲೂಬಹುದು.
ಸ್ವರ್ಗ ನರಕದ ಪರಿಕಲ್ಪನೆಗೆ ಒಬ್ಬೊಬ್ಬರು ಒಂದೊಂದು ವ್ಯಾಖ್ಯಾನ ನೀಡಬಹುದು. ಆದರೆ, ಒಬ್ಬ ಒಳ್ಳೆಯ ವ್ಯಕ್ತಿಯ ಸಾವಿಗೆ ಹಲವಾರು ಜನರು ಕಣ್ಣೀರು ಹರಿಸುತ್ತಾರೆಂಬುದು ನಿಜ. ಬಹುಶಃ ವ್ಯಕ್ತಿಯೊಬ್ಬನ ಸಾರ್ಥಕ ಬದುಕಿಗೆ ಇದೇ ದೊಡ್ಡ ಕೊಡುಗೆ. ಅಲ್ಲವೆ?
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications