ಹುಟ್ಟು ಸಾವು ನಡುವಿನ ಸಾರ್ಥಕ ಬಾಳು

ಒಂದು ಮಗುವಿನ ಹುಟ್ಟಿನೊಂದಿಗೆ ಅನೇಕ ಆಸೆ ಕನಸುಗಳೂ ಹುಟ್ಟಿಕೊಳ್ಳುತ್ತವೆ. ಬದುಕಿನುದ್ದಕ್ಕೂ ಅವುಗಳನ್ನು ಪೂರೈಸಿಕೊಳ್ಳಲು ವ್ಯಕ್ತಿ ಹೆಣಗುತ್ತಾನೆ, ಹಾಗೆ ಸಫಲವಾಗುವುದು ಕೆಲವೇ ಕೆಲವು. ಇನ್ನುಳಿದವು ವ್ಯಕ್ತಿಯ ಸಾವಿನೊಂದಿಗೆ ಸಾಯುತ್ತವೆ. ವ್ಯಕ್ತಿ ಸಫಲಗೊಳಿಸಿಕೊಂಡ ಆಸೆ ಕನಸುಗಳಿಂದಲೇ ನಾವು ಅವನನ್ನು ನಾವು ಅಳೆಯುತ್ತೇವೆ. ಅವನ ಸಾಕಾರಗೊಳ್ಳದ ವ್ಯಕ್ತಿತ್ವಗಳಿಂದ ಅವನನ್ನು ನಾವು ಅಳೆಯುವುದಿಲ್ಲ, ಅಲ್ವೆ?
ಶರಣರ ಗುಣವನ್ನು ಮರಣದಲ್ಲಿ ಕಾಣು ಎಂಬಂತೆ ವ್ಯಕ್ತಿ ತೀರಿಕೊಂಡ ಮೇಲೆ ಆತ ಉಳಿಸಿ ಹೋದ, ಬೆಳೆಸಿಕೊಂಡ ವ್ಯಕ್ತಿತ್ವದ ಆಧಾರದ ಮೇಲೆ ಆತನ ಗುಣವನ್ನು ಅಳೆಯುತ್ತಾರೆ. ಸಮಾಜ ಸೇವೆ, ಬುದ್ಧಿವಂತಿಕೆ, ಒಳ್ಳೆಯತನಗಳಿಂದ ವ್ಯಕ್ತಿಯನ್ನು ತೂಗುತ್ತೇವೆ. ಜೀವನದಲ್ಲಿ ಮಾಡಿದ ಸಾಧನೆಯೇ ಆಸ್ತಿ ಅಂತಸ್ತು.
ಒಬ್ಬ ವ್ಯಕ್ತಿ ಸತ್ತಾಗ, ಆತ ಮಾಡಿದ ಸಾಧನೆಗಳೆಲ್ಲ ಚರ್ಚೆಗೆ ಬರುತ್ತವೆ. ಇಷ್ಟು ಬೇಗ ಸಾಯಬಾರದಿತ್ತು, ಎಂದೂ ಆತ ಕೆಡಕು ಬಯಸಿದವನಲ್ಲ, ಇಂಥವರು ಇದ್ದಿದ್ರಿಂದಾನೇ ಮಳೆಬೆಳೆಯೆಲ್ಲ ಆಗುತ್ತಿರುವುದು, ಇಂಥವರು ಸಿಗುವುದು ಲಕ್ಷಕ್ಕೊಬ್ಬರು, ಇನ್ನೂ ಇದ್ರಿದ್ರೆ ಚೆನ್ನಾಗಿತ್ತು, ಇವನ ಸಾವು ನಿಜಕ್ಕೂ ತುಂಬಲಾರದ ನಷ್ಟ.... ಮುಂತಾದ ಮಾತುಗಳು ಪುಂಖಾನುಪುಂಖವಾಗಿ ಹೊರಬರುತ್ತವೆ. ಅದೇ, ಸಮಾಜದಲ್ಲಿ ಯಾವುದೇ ಛಾಪು ಮೂಡಿಸದೇ ಸತ್ತರೆ ಅಥವಾ ಸಮಾಜಕ್ಕೆ ಬೇಡದವನಾಗಿ ಸತ್ತಿದ್ದರೆ... ಏನೇನಂತಾರೆ ಅಂತ ನೀವೇ ಊಹಿಸಿ.
ಗೆಳೆಯರೆ, ಸಾವನ್ನು ಕುರಿತ ಕಥೆ ನಿಮಗೆ ಹೇಳಲೇಬೇಕು. ವ್ಯಕ್ತಿಯೊಬ್ಬ ದೇವರಲ್ಲಿ ಹೀಗೆ ಬೇಡಿಕೊಂಡನಂತೆ. ದೇವ ನಾನು ಸತ್ತಾಗ ನನ್ನ ಸಾವಿಗೆ ದುಃಖಿಸಿ ಅಳುವ ಕೆಲವರಾದರೂ ಜನರಿರುವಂತೆ ಕರುಣಿಸು ಅಂತ. ಅದಕ್ಕೆ ದೇವರು, ಇದು ನನ್ನಿಂದ ಆಗದ ಕೆಲಸ. ಜನರು ಮೆಚ್ಚುವಂತೆ ನೀನು ಬದುಕಬೇಕು ಎಂದನಂತೆ...
ಈ ಕಥೆಯೊಳಗೆ ಬದುಕಿನ ಗೂಡಾರ್ಥವೇ ಅಡಗಿದೆಯಲ್ಲವೇ? ಹುಟ್ಟು ಸಾವು ಎನ್ನುವುದು ಯಾವುದೋ ಶಕ್ತಿಯ ಕ್ಯೆಯಲ್ಲಿದ್ದರೂ ಮಧ್ಯದ ಈ ಬದುಕಿನಲ್ಲಿ ಗುಣವಂತನಾಗುವುದು, ಕೆಡುಕನಾಗುವುದು ವ್ಯಕ್ತಿಯ ಕ್ಯೆಯಲ್ಲೇ ಇದೆಯಲ್ಲವೇ? ಸಾವಿನೆಡೆಗೆ ಏನಿದೆಯೋ ಯಾರಿಗೂ ತಿಳಿದಿಲ್ಲ. ನಾವೆಲ್ಲ ಒಳ್ಳೆಯವರಾಗಿ ಸಮಾಜಕ್ಕೆ ಬೇಕಾದವರಾಗಿ ಬದುಕಿದರೆ ಮುಂದೆ ಸ್ವರ್ಗದ ದಾರಿ ಸಿಗಲೂಬಹುದು.
ಸ್ವರ್ಗ ನರಕದ ಪರಿಕಲ್ಪನೆಗೆ ಒಬ್ಬೊಬ್ಬರು ಒಂದೊಂದು ವ್ಯಾಖ್ಯಾನ ನೀಡಬಹುದು. ಆದರೆ, ಒಬ್ಬ ಒಳ್ಳೆಯ ವ್ಯಕ್ತಿಯ ಸಾವಿಗೆ ಹಲವಾರು ಜನರು ಕಣ್ಣೀರು ಹರಿಸುತ್ತಾರೆಂಬುದು ನಿಜ. ಬಹುಶಃ ವ್ಯಕ್ತಿಯೊಬ್ಬನ ಸಾರ್ಥಕ ಬದುಕಿಗೆ ಇದೇ ದೊಡ್ಡ ಕೊಡುಗೆ. ಅಲ್ಲವೆ?
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications