ಖ್ಯಾತಿ ಬೇಕಿದ್ದರೆ ಭಾರತದ ವಿರುದ್ಧ ದನಿಯೆತ್ತಿ!

ಮುಂಬೈ ದಾಳಿಯಲ್ಲಿ ಸಿಕ್ಕಿಬಿದ್ದ ಉಗ್ರ ಅಜ್ಮಲ್ ಕಸಬ್, ಸಂವಿಧಾನದ ಮೇಲಿನ ದಾಳಿಯ ರೂವಾರಿ ಅಫ್ಜಲ್ ಗುರು ಅಂತಹವರು ಹುಲುಸಾಗಿರುವಾಗ ನಾನು ಯಾರಿಗೆ ಕಮ್ಮಿ ಎಂದು ಅಂತಾರಾಷ್ಟ್ರೀಯ ಖ್ಯಾತಿಯ ಲೇಖಕಿ (ದಿ ಗಾಡ್ ಆಫ್ ಸ್ಮಾಲ್ ಥಿಂಗ್ಸ್ ಕಾದಂಬರಿಗೆ ಬೂಕರ್ ಪ್ರಶಸ್ತಿ) ಅರುಂಧತಿ ರಾಯ್ ತಮ್ಮ ಹೆಜ್ಜೆ ಇಟ್ಟಿದ್ದಾರೆ, ಅಷ್ಟೇ ಅಲ್ಲ, ಮುಂದೆ ಇನ್ನು ದೊಡ್ಡ ದೊಡ್ಡ ಹೆಜ್ಜೆಯನ್ನು ಇಡಲಿದ್ದಾರೆ ಎಂದು ಸಾಬೀತು ಮಾಡಿದ್ದಾರೆ. ಇಂತಹ ಹೆಣ್ಣು(?) ಮಕ್ಕಳನ್ನು ಪಡೆದ ಭಾರತ ಮಾತೆ ನೀನೆ ಧನ್ಯ!
ಪ್ರಸಿದ್ಧಿಯನ್ನು ಪಡೆಯುವ ಸಲುವಾಗಿ ಒಂದು ಸೂತ್ರವಿದೆ. ನಿಮಗೆ ಅಂತಾರಾಷ್ಟ್ರೀಯ ಖ್ಯಾತಿ ಏನಾದರು ಬೇಕಾದಲ್ಲಿ ಭಾರತದ ವಿರುದ್ಧ ಮಾತೆತ್ತಿ ಅಥವಾ ಪುಸ್ತಕ ಬರೆಯಿರಿ ಅಥವಾ ನಮ್ಮ ಈ ಆಧುನಿಕ ಭಾರತದ ಒಳಗೆ ನಿಮಗೇನಾದರೂ ಪ್ರಸಿದ್ಧಿ ಬೇಕಾದಲ್ಲಿ ಹಿಂದೂಗಳ ವಿರುದ್ಧ ದನಿಯೆತ್ತಿ ಎಂದು. ತಕ್ಷಣದಲ್ಲಿ ಪ್ರಸಿದ್ಧಿ ಪಡೆದ ಬಹುತೇಕ ಎಲ್ಲ ಪಿಪಾಸುಗಳೂ ಇದೆ ಗುಂಪಿಗೆ ಸೇರಿದವರಾಗಿದ್ದಾರೆ, ಪರೀಕ್ಷಿಸಿ ನೋಡಿ.
ಸಂವಿಧಾನದ 370ನೇ ವಿಧಿಯ ಕಾರಣದಿಂದಾಗಿ ಇಡೀ ಕಾಶ್ಮೀರ ಬಹುತೇಕ ಪರಕೀಯವಾಗಿಯೇ ಉಳಿದಿರುವಂತಹ ಪರಿಸ್ಥಿತಿಯಲ್ಲಿ ಭಾರತೀಯ ನಾರಿ ಅರುಂಧತಿ ರಾಯ್ ತಮ್ಮ ನಾಲಗೆಯನ್ನು ಹರಿಬಿಟ್ಟಿದ್ದರೂ, ದೇಶದ್ರೋಹದಾಪಾದನೆಯಡಿ ಬಂಧಿಸುವ ಅವಕಾಶವಿದ್ದರೂ, 'ಇಂತಹವರು ಮುಂದೊಂದು ದಿನ ನಮಗೂ ಸಹಾಯಕ್ಕೆ ಬರಬಹುದು' ಎಂಬ ದೂರಾಲೋಚನೆ(!)ಯಡಿ ಕೇಂದ್ರ ಸರಕಾರ ಸಮಸ್ಯೆಯನ್ನು ಹೆಚ್ಚಾಗಿಸುವುದು ಬೇಡ ಎಂಬ ಜಾಣ್ಮೆಯಲ್ಲಿ ಪರಿಸ್ಥಿಯನ್ನು ನಿಭಾಯಿಸುತ್ತಿದೆ!
ಎಲ್ಲ ಪಕ್ಷಗಳೂ, ಎಲ್ಲ ರಾಜಕಾರಣಿಗಳೂ ರಾಷ್ಟ್ರಹಿತದ ವಿಷಯದಲ್ಲಿ ಎಂದಿಗೆ ಒಂದಾಗುವರೋ, ಅಂದಿನಿಂದ ಹೆಚ್ಚುಗೊಳ್ಳುವ ಭಾರತದ ಅಭ್ಯುದಯದ ವೇಗವನ್ನು ನಿಯಂತ್ರಿಸಲೂ ಯಾವ ಅಂತಾರಾಷ್ಟ್ರೀಯ ತಂತ್ರಗಳಿಂದಲೂ ಸಾಧ್ಯವಿಲ್ಲ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications