ಖ್ಯಾತಿ ಬೇಕಿದ್ದರೆ ಭಾರತದ ವಿರುದ್ಧ ದನಿಯೆತ್ತಿ!

ಮುಂಬೈ ದಾಳಿಯಲ್ಲಿ ಸಿಕ್ಕಿಬಿದ್ದ ಉಗ್ರ ಅಜ್ಮಲ್ ಕಸಬ್, ಸಂವಿಧಾನದ ಮೇಲಿನ ದಾಳಿಯ ರೂವಾರಿ ಅಫ್ಜಲ್ ಗುರು ಅಂತಹವರು ಹುಲುಸಾಗಿರುವಾಗ ನಾನು ಯಾರಿಗೆ ಕಮ್ಮಿ ಎಂದು ಅಂತಾರಾಷ್ಟ್ರೀಯ ಖ್ಯಾತಿಯ ಲೇಖಕಿ (ದಿ ಗಾಡ್ ಆಫ್ ಸ್ಮಾಲ್ ಥಿಂಗ್ಸ್ ಕಾದಂಬರಿಗೆ ಬೂಕರ್ ಪ್ರಶಸ್ತಿ) ಅರುಂಧತಿ ರಾಯ್ ತಮ್ಮ ಹೆಜ್ಜೆ ಇಟ್ಟಿದ್ದಾರೆ, ಅಷ್ಟೇ ಅಲ್ಲ, ಮುಂದೆ ಇನ್ನು ದೊಡ್ಡ ದೊಡ್ಡ ಹೆಜ್ಜೆಯನ್ನು ಇಡಲಿದ್ದಾರೆ ಎಂದು ಸಾಬೀತು ಮಾಡಿದ್ದಾರೆ. ಇಂತಹ ಹೆಣ್ಣು(?) ಮಕ್ಕಳನ್ನು ಪಡೆದ ಭಾರತ ಮಾತೆ ನೀನೆ ಧನ್ಯ!
ಪ್ರಸಿದ್ಧಿಯನ್ನು ಪಡೆಯುವ ಸಲುವಾಗಿ ಒಂದು ಸೂತ್ರವಿದೆ. ನಿಮಗೆ ಅಂತಾರಾಷ್ಟ್ರೀಯ ಖ್ಯಾತಿ ಏನಾದರು ಬೇಕಾದಲ್ಲಿ ಭಾರತದ ವಿರುದ್ಧ ಮಾತೆತ್ತಿ ಅಥವಾ ಪುಸ್ತಕ ಬರೆಯಿರಿ ಅಥವಾ ನಮ್ಮ ಈ ಆಧುನಿಕ ಭಾರತದ ಒಳಗೆ ನಿಮಗೇನಾದರೂ ಪ್ರಸಿದ್ಧಿ ಬೇಕಾದಲ್ಲಿ ಹಿಂದೂಗಳ ವಿರುದ್ಧ ದನಿಯೆತ್ತಿ ಎಂದು. ತಕ್ಷಣದಲ್ಲಿ ಪ್ರಸಿದ್ಧಿ ಪಡೆದ ಬಹುತೇಕ ಎಲ್ಲ ಪಿಪಾಸುಗಳೂ ಇದೆ ಗುಂಪಿಗೆ ಸೇರಿದವರಾಗಿದ್ದಾರೆ, ಪರೀಕ್ಷಿಸಿ ನೋಡಿ.
ಸಂವಿಧಾನದ 370ನೇ ವಿಧಿಯ ಕಾರಣದಿಂದಾಗಿ ಇಡೀ ಕಾಶ್ಮೀರ ಬಹುತೇಕ ಪರಕೀಯವಾಗಿಯೇ ಉಳಿದಿರುವಂತಹ ಪರಿಸ್ಥಿತಿಯಲ್ಲಿ ಭಾರತೀಯ ನಾರಿ ಅರುಂಧತಿ ರಾಯ್ ತಮ್ಮ ನಾಲಗೆಯನ್ನು ಹರಿಬಿಟ್ಟಿದ್ದರೂ, ದೇಶದ್ರೋಹದಾಪಾದನೆಯಡಿ ಬಂಧಿಸುವ ಅವಕಾಶವಿದ್ದರೂ, 'ಇಂತಹವರು ಮುಂದೊಂದು ದಿನ ನಮಗೂ ಸಹಾಯಕ್ಕೆ ಬರಬಹುದು' ಎಂಬ ದೂರಾಲೋಚನೆ(!)ಯಡಿ ಕೇಂದ್ರ ಸರಕಾರ ಸಮಸ್ಯೆಯನ್ನು ಹೆಚ್ಚಾಗಿಸುವುದು ಬೇಡ ಎಂಬ ಜಾಣ್ಮೆಯಲ್ಲಿ ಪರಿಸ್ಥಿಯನ್ನು ನಿಭಾಯಿಸುತ್ತಿದೆ!
ಎಲ್ಲ ಪಕ್ಷಗಳೂ, ಎಲ್ಲ ರಾಜಕಾರಣಿಗಳೂ ರಾಷ್ಟ್ರಹಿತದ ವಿಷಯದಲ್ಲಿ ಎಂದಿಗೆ ಒಂದಾಗುವರೋ, ಅಂದಿನಿಂದ ಹೆಚ್ಚುಗೊಳ್ಳುವ ಭಾರತದ ಅಭ್ಯುದಯದ ವೇಗವನ್ನು ನಿಯಂತ್ರಿಸಲೂ ಯಾವ ಅಂತಾರಾಷ್ಟ್ರೀಯ ತಂತ್ರಗಳಿಂದಲೂ ಸಾಧ್ಯವಿಲ್ಲ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications