ಕುವೆಂಪು ತಂತ್ರಾಂಶ ಹೊಸ ಆವೃತ್ತಿ ಬಿಡುಗಡೆ

2ನೇ ಆವೃತ್ತಿಯ ತಂತ್ರಾಂಶದಲ್ಲಿ ಮೊದಲ ಆವೃತ್ತಿಯ ಎಲ್ಲಾ ಅಂಶಗಳ ಜತೆಗೆ ನೂತನವಾಗಿ 3 ಬಗೆಯ ಪರಿವರ್ತಕಗಳು ಮತ್ತು 1 ಬಗೆಯ ಕೀಲಿಮಣೆ ವಿನ್ಯಾಸ, ಸೋನಾಟಾ ಸಾಫ್ಟ್ ವೇರ್ ಕಂಪೆನಿ ಸಹಕಾರದಿಂದ ಪ್ರಕಾಶಕ್ ತಂತ್ರಾಂಶದ ಪ್ರಜಾ ಅಕ್ಷರ ವಿನ್ಯಾಸಗಳಲ್ಲಿ ಆಯ್ದ 4 ಮಾದರಿಗಳನ್ನು ಅಳವಡಿಸಲಾಗಿದೆ.
ಕುವೆಂಪು ಕನ್ನಡ ತಂತ್ರಾಂಶ ಆವೃತ್ತಿ 1: ಅನು, ಎಸ್ ಆರ್ ಜಿ ಹಾಗೂ ಶ್ರೀಲಿಪಿ ಫಾಂಟ್ ಗಳನ್ನು ಬೆಂಬಿಲಿಸುವುದರ ಜೊತೆಗೆ ನಾಲ್ಕು ಬಗೆ ಕೀಲಿಮಣೆ ವಿನ್ಯಾಸ ಹಾಗೂ ನಾಲ್ಕು ಟೆಕ್ಸ್ ಪರಿವರ್ತಕಗಳನ್ನು ಹೊಂದಿದೆ. ANSI ಮಾದರಿ ಫಾಂಟ್ ಮಾತ್ರ ಬಳಕೆಯಾಗುತ್ತಿದ್ದು, ಪತ್ರಿಕಾ ವಿನ್ಯಾಸಗಾರರನ್ನು ಗಮನದಲ್ಲಿಟ್ಟುಕೊಂಡು ಉತ್ತಮ ಶೈಲಿಯ ಫಾಂಟ್ ಗಳನ್ನು ರೂಪಿಸಲಾಗಿದೆ. ಆದರೆ, ಇದು ಹೆಚ್ಚು ಕಡೆ ಇನ್ನೂ ಬಳಕೆಯಾಗುತ್ತಿಲ್ಲ. ವಿಧಾನ ಪರಿಷತ್ ಸದಸ್ಯರಾಗಿದ್ದ ಚಂದ್ರಶೇಖರ ಕಂಬಾರರು ತಂತ್ರಾಂಶ ಯೋಜನೆಗೆ 6 ಲಕ್ಷ ರೂ. ಬಿಡುಗಡೆ ಮಾಡಿದ್ದರು. ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ ಅನುಭವ, ಆಶಯದೊಂದಿಗೆ ತಂತ್ರಾಂಶ ರಚಿಸಲಾಗಿತ್ತು.
ಯಾರಿಗೆ ಉಪಯೋಗ: ಕನ್ನಡ ಬೆರಳಚ್ಚುಗಾರರು, ಡಿಟಿಪಿ ಆಪರೇಟರ್ ಗಳು, ವಿನ್ಯಾಸಗಾರರು, ಸರ್ಕಾರಿ ಕಚೇರಿಗಳಲ್ಲಿ ಬಳಸಬಹುದು. ಸದ್ಯದಲ್ಲೇ ಕುವೆಂಪು ತಂತ್ರಾಂಶದ ಯೂನಿಕೋಡ್ ಆವೃತ್ತಿ ಹೊರ ಬೀಳಲಿದ್ದು ಅಂತರ್ಜಾಲದಲ್ಲಿ ವಿಹರಿಸುವವರು, ಚಾಟ್ ಮಾಡುವವರು, ಪತ್ರ ಬರೆಯುವವರು ಎಲ್ಲರಿಗೂ ಅನುಕೂಲವಾಗಲಿದೆ.
ಮಾಹಿತಿ ಕಣಜವಾಗಲಿದೆ: ತಂತ್ರಾಂಶದೊಂದಿಗೆ ಕನ್ನಡ ಕಾರ್ಪಸ್ ನಿರ್ಮಾಣ ಯೋಜನೆ ಮಾಡಲಾಗುವುದು. ಇದರಿಂದ ಕನ್ನಡ ಇ-ನಿಘಂಟು(ಸುಮಾರು 1 ಕೋಟಿ ಪದ ಸಂಗ್ರಹ), ಸಮಗ್ರ ಕನ್ನಡ ವ್ಯಾಕರಣ ರಚನೆ ಇತ್ಯಾದಿಗಳನ್ನು ನಿರ್ಮಿಸಲಾಗುವುದು. ಆನ್ಲೈನ್ ಡಿಕ್ಷ್ನರಿ, ಕನ್ನಡ ಒಸಿಆರ್ ತಂತ್ರಾಂಶ, ಸಂಭಾಷಣೆಯನ್ನು ಶಬ್ದರೂಪದಲ್ಲಿ ಪರಿವರ್ತಿಸುವ ತಂತ್ರಾಂಶ, ಸ್ಪೆಲ್ಲಿಂಗ್ ಚೆಕ್ ಭಾಷಾಂತರ ದತ್ತ ಕಣಜ, ಸಂಶೋಧನಾ ಕರ್ನಾಟಕ, ವಿದ್ಯಾರ್ಥಿ ಗಳಿಗೆ ಬೋಧನೆ ಮತ್ತು ತರಬೇತಿ, ವೆಬ್ಸೈಟ್ ಮರುವಿನ್ಯಾಸ, ಡಿಜಿಟಲ್ ಸ್ಟುಡಿಯೊ, ಲೈಬ್ರರಿ, ಲ್ಯಾಂಗ್ವೇಜ್ ಲರ್ನರ್, ಆಡಿಯೊ-ವೀಡಿಯೊ ರೆಕಾರ್ಡಿಂಗ್ ಲ್ಯಾಬ್ ಸೇರಿದಂತೆ ಹಲವು ಯೋಜನೆ ಗಳನ್ನು ಸಿದ್ಧಪಡಿಸಲಾಗಿದೆ ಎಂದು ಮುರಿಗೆಪ್ಪ ಹೇಳಿದರು.
ಈ ತಂತ್ರಾಂಶ ಉಚಿತವೇ: ಹೌದು, ಹಂಪಿ ವಿಶ್ವವಿದ್ಯಾಲಯ ಹೊರ ತರುತ್ತಿರುವ ಈ ತಂತ್ರಾಂಶ ವಿಶ್ವವಿದ್ಯಾಲಯದ ವೆಬ್ ತಾಣದಲ್ಲಿ ಡೌನ್ ಲೋಡ್ ಮಾಡಿಕೊಳ್ಳಲು ಲಭ್ಯವಿರುತ್ತದೆ. ಆದರೆ, ಈ ತಂತ್ರಾಂಶವನ್ನು ಓಪನ್ ಸೋರ್ಸ್ ಆಗಿ ನೀಡುತ್ತಾರೆಯೇ? ಅಥವಾ ಈ ಹಿಂದಿನಂತೆ source on demand ಎಂದು ಹೇಳುತ್ತಾರೋ ಎಂದು ಕಾದು ನೋಡಬೇಕಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications