ಅಂಧರಿಗೆ ಬೆಳಕಾಗಬಲ್ಲ 'ಸ್ಟೆಮ್ ಸೆಲ್' ಥೆರಪಿ

ಸ್ಟೆಮ್ಸೆಲ್ ಸಂಶೋಧನೆಗಳ ಕುರಿತಾಗಿರುವ ಒಂದು ಪ್ರತಿಷ್ಠಿತ ಆನ್ಲೈನ್ ಜರ್ನಲ್ನಲ್ಲಿ ಈ ಕುರಿತ ಸಂಶೋಧನೆಯ ವಿವರಗಳು ಜೂನ್ 15ರಂದು ಪ್ರಕಟಗೊಂಡಿವೆ. ಈ ಸಂಶೋಧನೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ತಯಾರಿಸಿದ ಇಂಡ್ಯೂಸ್ಡ್ ಪ್ಲ್ಯೂರಿಪೊಟೆಂಟ್ ಸ್ಟೆಮ್ (induced pluripotent stem) (iPS) ಸೆಲ್ಗಳನ್ನು ಬಳಸಿ ಒಂದು ವಿರಳ ಅನುವಂಶೀಯ ಖಾಯಿಲೆಯಾದ ಜೆಯ್ರೇಟ್ ಆಟ್ರಫಿ (gyrate atrophy) ಅನ್ನು ಗುಣಪಡಿಸಲಾಗಿದೆ. ಈ ಕಾಯಿಲೆಯು 'ರೆಟಿನಲ್ ಪಿಗ್ಮೆಂಟ್ ಎಪಿಥೀಲಿಯಮ್' (retinal pigment epithelium) (RPE) ಸೆಲ್ಗಳನ್ನು ನಾಶಪಡಿಸಿ ಅಂಧತ್ವವನ್ನುಂಟು ಮಾಡುತ್ತದೆ. ಇವುಗಳು ರೆಟಿನಾದಲ್ಲಿನ 'ಫೋಟೋ ರಿಸೆಪ್ಟಾರ್' ಸೆಲ್ಗಳ ಕಾರ್ಯನಿರ್ವಹಣೆಯಲ್ಲಿ ತುಂಬಾ ಮಹತ್ವದ ಪಾತ್ರ ವಹಿಸುತ್ತವೆ.
ಈ ಫೋಟೋ ರಿಸೆಪ್ಟಾರ್ ಸೆಲ್ಗಳು ರೆಟಿನಾದ ಮೇಲೆ ಬಿದ್ದ ಬೆಳಕನ್ನು ಸಂಕೇತ ರೂಪಕ್ಕೆ ಪರಿವರ್ತಿಸಿ ಮೆದುಳಿಗೆ ಕಳಿಸುವಲ್ಲಿ ನೆರವಾಗುತ್ತವೆ. ಈ ಸಂಕೇತಗಳನ್ನು ಮೆದುಳು ಗ್ರಹಿಸಿ ಅವುಗಳನ್ನು ಅರ್ಥೈಸಿಕೊಳ್ಳುತ್ತದೆ. ಆದರೆ 'ರೆಟಿನಲ್ ಪಿಗ್ಮೆಂಟ್ ಎಪಿಥೀಲಿಯಮ್' ಸೆಲ್ಗಳ ತೊಂದರೆಯಿಂದಾಗಿ ಫೋಟೋ ರಿಸೆಪ್ಟಾರ್ ಸೆಲ್ಗಳು ಸರಿಯಾಗಿ ಕೆಲಸ ಮಾಡದೇ ಕುರುಡತ್ವ ಉಂಟಾಗುತ್ತದೆ. ಹಾಳಾದ 'ರೆಟಿನಲ್ ಪಿಗ್ಮೆಂಟ್ ಎಪಿಥೀಲಿಯಮ್' ಸೆಲ್ಗಳನ್ನು ಪುನರ್ನಿರ್ಮಾಣ ಮಾಡುವುದರಿಂದ ಈ ಕಾಯಿಲೆಯಿಂದಾಗಿ ಅಂಧನಾದ ವ್ಯಕ್ತಿಯ ಜೀವನದಲ್ಲಿ ಮತ್ತೆ ಬೆಳಕು ಮೂಡಿಸಬಹುದು.
"ನಾವು ಇಂಡ್ಯೂಸ್ಡ್ ಪ್ಲ್ಯೂರಿಪೊಟೆಂಟ್ ಸ್ಟೆಮ್ ಸೆಲ್ಗಳನ್ನು ತಯಾರಿಸಿ, ಈ ಕಾಯಿಲೆಗೆ ಕಾರಣವಾದ ಒಂದು ಬಗೆಯ ವಂಶವಾಹಿ ತೊಂದರೆಯನ್ನು ಸರಿಪಡಿಸಿ, ಈ ಇಂಡ್ಯೂಸ್ಡ್ ಪ್ಲ್ಯೂರಿಪೊಟೆಂಟ್ ಸ್ಟೆಮ್' ಸೆಲ್ಗಳು ರೆಟಿನಲ್ ಪಿಗ್ಮೆಂಟ್ ಎಪಿಥೀಲಿಯಮ್' ಸೆಲ್ಗಳಾಗಿ ಬೆಳೆಯುವಂತೆ ಮಾಡಿದಾಗ ಈ ಸೆಲ್ಗಳು ಸ್ವಾಬಾವಿಕವಾಗಿ ಕಾರ್ಯನಿರ್ವಹಿಸಿದವು. ಈ ಫಲಿತಾಂಶವು ತುಂಬಾ ಉತ್ತೇಜನಕಾರಿಯಾದುದು ಯಾಕೆಂದರೆ ಸರಿಯಾಗಿಲ್ಲದ ಒಂದು ಸಂಕೀರ್ಣ ವ್ಯವಸ್ಥೆಯನ್ನೂ ಸಹ ನಾವು ಸರಿಪಡಿಸಬಹುದು, ಅಲ್ಲದೇ ಭವಿಷ್ಯದಲ್ಲಿ ಸರಿಯಾಗಿ ಕಾರ್ಯನಿರ್ವಹಿಸದ ಅಥವಾ ನಿಶ್ಪ್ರಯೋಜಕವಾಗಿರುವ ರೆಟಿನಾದ ಸೆಲ್ಗಳನ್ನೂ ಈ ಚಿಕಿತ್ಸೆಯಿಂದ ಸರಿಪಡಿಸಬಹುದು" ಎಂದು ಅಧ್ಯಯನದ ನೇತೃತ್ವ ವಹಿಸಿರುವ ಕೋಷ ಜೀವಶಾಸ್ತ್ರಜ್ಞ ಹಾಗು ಇಂಡ್ಯಾನ ವಿಶ್ವವಿದ್ಯಾನಿಲಯದ 'ಸ್ಕೂಲ್ ಆಫ್ ಸೈನ್ಸ್'ನ ಜೀವಶಾಸ್ತ್ರದ ಸಹಾಯಕ ಪ್ರೊಫೆಸರ್ ಡಾ|| ಜೇಸನ್ ಮೇಯರ್ ತಿಳಿಸಿದರು.
ಮ್ಯಾಕ್ಯುಲಾರ್ ಡಿಜನರೇಶನ್ ಒಂದು ಸಾಮಾನ್ಯ ಕಣ್ಣಿನ ಕಾಯಿಲೆಯಾಗಿದ್ದು ವಿಶ್ವದಲ್ಲಿನ ಸುಮಾರು 25-30 ಮಿಲಿಯನ್ ಜನರು ಈ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಸುಮಾರು 1.5 ಮಿಲಿಯನ್ ಜನರು ರೆಟಿನೈಟಿಸ್ ಪಿಗ್ಮೆಂಟೋಸ ರೋಗದಿಂದ ಬಳಲುತ್ತಿದ್ದಾರೆ. ಈ 'ಇಂಡ್ಯೂಸ್ಡ್ ಪ್ಲ್ಯೂರಿಪೊಟೆಂಟ್ ಸ್ಟೆಮ್' ಸೆಲ್ಗಳನ್ನು ಅದೇ ರೋಗಿಗಳಿಂದ ಪಡೆದುಕೊಳ್ಳುವುದರಿಂದಾಗಿ ಮುಂದೆ ಯಾವುದೇ 'ಟ್ರಾನ್ಸ್ಪ್ಲಾಂಟ್ ರಿಜಕ್ಷನ್' ಅಂತಹ ಸಮಸ್ಯೆಗಳು ತಲೆದೋರುವುದಿಲ್ಲ. ಒಟ್ಟಿನಲ್ಲಿ ಹೇಳುವುದಾದರೆ ವಿಜ್ಞಾನದ ಇಂತಹ ಅವಿಷ್ಕಾರಗಳು ಮನುಕುಲದ ಅನೇಕ ಸಮಸ್ಯೆಗಳನ್ನು ಬಹುಮಟ್ಟಿಗೆ ನಿವಾರಿಸುವಲ್ಲಿ ಮಹತ್ವದ ಕೊಡುಗೆ ನೀಡುತ್ತಿವೆ. ಇನ್ನೂ ಹೆಚ್ಚು ಹೆಚ್ಚು ಇಂತಹ ಸಂಶೋಧನೆಗಳು ನಡೆದು ಬೆಳಕನ್ನೇ ಕಾಣದವರ ಬಾಳನ್ನು ಬೆಳಗಲಿ ಎಂದು ಆಶಿಸೋಣ ಅಲ್ಲವೇ? (ಕೃಪೆ : ©Science Daily.com)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications