ಮೂರು ವರ್ಷಕ್ಕೇ ಗೆಜ್ಜೆ ಕಟ್ಟಿದ ಶ್ವೇತಾ ಪುರೋಹಿತ್

ಕರ್ನಾಟಕ ಸೆಕಂಡರಿ ಎಜುಕೇಷನ್ ಬೋರ್ಡ್ನವರು ನಡೆಸಿದ ಜ್ಯೂನಿಯರ್, ಸೀನಿಯರ್ ಗ್ರೇಡ್ ಪರೀಕ್ಷೆಗಳಲ್ಲಿ ಹಾಗೂ ಕರ್ನಾಟಕ ಮ್ಯೂಸಿಕ್ ವೋಕಲ್ ಜ್ಯೂನಿಯರ್ ಪರೀಕ್ಷೆಯಲ್ಲೂ ತೇರ್ಗಡೆ ಹೊಂದಿದ್ದಾರೆ. ಶ್ವೇತಾ-ಸಿಂಧು ಸಹೋದರಿಯರು ನೃತ್ಯ-ಸಂಗೀತ, ನೃತ್ಯ ನಾಟಕ ಮತ್ತು ಬ್ಯಾಲೆಗಳಲ್ಲಿ ಸಾಕಷ್ಟು ತರಬೇತಿ ಹೊಂದಿ ತಮ್ಮ ಕ್ಷೇತ್ರವನ್ನು ವಿಸ್ತರಿಸಿಕೊಂಡಿದ್ದಾರೆ.
ಶ್ವೇತಾ ಪುರೋಹಿತ್
ಮೂರು ವರ್ಷ ಇದ್ದಾಗಲೇ ಗೆಜ್ಜೆ ಕಟ್ಟಿದ ಶ್ವೇತಾ ಮುಂಬಯಿಯ ಅಖಿಲ ಭಾರತೀಯ ಗಂಧರ್ವ ಮಹಾ ವಿದ್ಯಾಲಯ ಮಂಡಲದವರು ನಡೆಸಿದ ಮಾಧ್ಯಮ-2 ಪರೀಕ್ಷೆಯನ್ನು ಪೂರ್ಣಗೊಳಿಸಿದ್ದಾರೆ. ಕರ್ನಾಟಕ ಸೆಕಂಡರಿ ಎಜುಕೇಷನ್ ಬೋರ್ಡ್ನವರು ನಡೆಸಿದ ವಿದ್ವತ್ ಪೂರ್ವ ಗ್ರೇಡ್ ಪರೀಕ್ಷೆಯಲ್ಲಿಯೂ ತೇರ್ಗಡೆ ಹೊಂದಿದ್ದಾರೆ.
ಹೊರ ರಾಜ್ಯಗಳಲ್ಲಿಯೂ ಹಲವಾರು ಸೋಲೋ ನೃತ್ಯ ಪ್ರದರ್ಶನ ನೀಡಿದ್ದಾರೆ. ಗುರು ರಾಧಾ ಶ್ರೀಧರ್ ನಿರ್ದೇಶಿಸಿದ 'ಗೋದಾದೇವಿ, 'ಶ್ರೀನಿವಾಸ ಕಲ್ಯಾಣ, 'ಹನುಮದ್ವಿಲಾಸ, 'ಗೀತಗೋವಿಂದ... ಮುಂತಾದ ರಾಜ್ಯ ಮಟ್ಟದ ನೃತ್ಯ ನಾಟಕಗಳಲ್ಲೂ ಹೆಸರು ಮಾಡಿದ್ದಾರೆ.
ಮುಂಬಯಿಯ ಕರ್ನಾಟಕ ಕಲ್ಚರಲ್ ಅಸೋಸಿಯೇಷನ್, ಕರ್ನಾಟಕ ನೃತ್ಯ ಕಲಾ ಅಕಾಡೆಮಿ, ಬೆಂಗಳೂರಿನಲ್ಲಿ ನಡೆದ 77ನೇ ಕನ್ನಡ ಸಾಹಿತ್ಯ ಸಮ್ಮೇಳನ, ರಾಷ್ಟ್ರೀಯ ಸಂಸ್ಕೃತ ಸಮ್ಮೇಳನ (ಬೆಂಗಳೂರು)... ಮುಂತಾದ ವೇದಿಕೆಗಳಲ್ಲಿ ಶ್ವೇತಾ ನೃತ್ಯದ ಝಲಕ್ ನೀಡಿದ್ದಾರೆ.
ಬೆಳ್ಳಿದೀಪ, ಯುವಭಾರತ ಪುಸ್ತಕ ನಿಧಿ, ಕರ್ನಾಟಕ ಪ್ರತಿಭಾವರ್ಧಕ ಅಕಾಡೆಮಿ ಮತ್ತು ರೋಟರಿ ಕ್ಲಬ್ನವರು ನಡೆಸಿದ ರಾಜ್ಯ ಮಟ್ಟದ ನೃತ್ಯ ಪ್ರದರ್ಶನಗಳಲ್ಲಿ ಜಯಗಳಿಸಿದ್ದಾರೆ. ಶ್ವೇತಾ ಸದ್ಯ ಬೆಂಗಳೂರಿನ ದಯಾನಂದ ಸಾಗರ್ ಇಂಜಿನಿಯರಿಂಗ್ ಕಾಲೇಜಿನಲ್ಲಿ 'ಆರ್ಕಿಟೆಕ್ಚರ್' ಅಭ್ಯಾಸ ಮಾಡುತ್ತಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications