ಹೆಸರಿಗಾಗಿಯೇ ಕೃಷ್ಣದೇವರಾಯ ವಿಶ್ವವಿದ್ಯಾಲಯ

ಕಲ್ಬುರ್ಗಿ ಅವರು ಏಕೆ ಈ ಹೆಸರು ಇಡಬಾರದು ಎನ್ನುವುದಕ್ಕೆ ಸುದೀರ್ಘ ಕಾರಣಗಳನ್ನು ನೀಡಿದರು. ವಿಜಯನಗರದ ಅರಸ ಶ್ರೀಕೃಷ್ಣದೇವರಾಯ ಎಂದಿಗೂ ಕನ್ನಡಪರ ಇರಲಿಲ್ಲ. ದೇಶಭಾಷೆಗಳಲ್ಲೇ ತೆಲುಗು ಅತ್ಯಂತ ಸುಂದರ ಭಾಷೆ ಎಂದೂ ಹೇಳಿದ್ದಾನೆ. ಜೊತೆಗೆ ಈ ಭಾಷೆಯ ಬೆಳವಣಿಗೆಗೆ ಅಪಾರ ಪ್ರೋತ್ಸಾಹ ನೀಡಿದ್ದಾನೆ. ಆತನ ಆಸ್ಥಾನದಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ತೆಲುಗು ಕವಿಗಳಿದ್ದರು. ಇಂಥ ರಾಜರಿಂದಲೇ ಕನ್ನಡದ ಬೆಳವಣಿಗೆಗೆ ಅಡ್ಡಿಯಾಯಿತು" ಎಂದರು. ಈ ಎಲ್ಲ ಅಭಿಪ್ರಾಯಗಳು ಸರಕಾರದ ಮೇಲೆ ಒತ್ತಡ ತಂದಿದ್ದರಿಂದಾಗಿ ವಿ.ವಿ. ಹೆಸರು ಬದಲಾವಣೆ ಆಗಲಿಲ್ಲ. ಆ ಸಂದರ್ಭದಲ್ಲಿ ಹೊಸಪೇಟೆಗೆ ಬಂದ ಅಂದಿನ ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ಅವರು 'ಕನ್ನಡ ವಿಶ್ವವಿದ್ಯಾಲಯಕ್ಕೆ ಶ್ರೀಕೃಷ್ಣದೇವರಾಯ ಹೆಸರಿಡುವ ನಿರ್ಧಾರ ಕೈ ಬಿಡಲಾಗಿದೆ" ಎಂದು ಕೈತೊಳೆದುಕೊಂಡಿದ್ದರು.
ಹೊಸ ವಿಶ್ವವಿದ್ಯಾಲಯವೇ ಬಂತು: ಶೈಕ್ಷಣಿಕ ಕೊರತೆಗಳನ್ನು ನಿವಾರಿಸುವ ಸಲುವಾಗಿ ವಿಶ್ವವಿದ್ಯಾಲಯಗಳ ಸ್ಥಾಪನೆಯಾಗುವುದನ್ನು ಕೇಳಿದ್ದೇವೆ. ನೋಡಿದ್ದೇವೆ. ಆದರೆ ಹೆಸರೊಂದರ ಕಾರಣಕ್ಕಾಗಿಯೆ ಹೊಸ ವಿಶ್ವವಿದ್ಯಾಲಯ ಸ್ಥಾಪನೆ ವಿಚಾರ ಕೇಳಿದ್ದೀರಾ! ಇದು ಕೂಡ ನಡೆದುಹೋಯಿತು. ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳ ವ್ಯಾಪ್ತಿಗೆ ಅನ್ವಯಿಸುವಂತೆ ಹೊಸ ವಿಶ್ವವಿದ್ಯಾಲಯ ಸ್ಥಾಪಿಸಲು ಮತ್ತು ಅದಕ್ಕೆ 'ಶ್ರೀಕೃಷ್ಣದೇವರಾಯ" ಹೆಸರಿಡಲು ಸಚಿವ ಸಂಪುಟ ನಿರ್ಧಾರ ತೆಗೆದುಕೊಳ್ಳುವಂತೆ ಮಾಡಲು ಜನಾರ್ದನ ರೆಡ್ಡಿ ಯಶಸ್ವಿಯಾದರು. ಕೇವಲ ತೊಂಭತ್ತು ಕಿಲೋಮೀಟರ್ ದೂರವಿರುವ ಅನಂತಪುರ ಜಿಲ್ಲೆಯಲ್ಲಿ ಈಗಾಗಲೇ ಶ್ರೀಕೃಷ್ಣದೇವರಾಯ ಹೆಸರಿನ ವಿಶ್ವವಿದ್ಯಾಲಯವಿದೆ. ಹೀಗಿರುವಾಗ ಕರ್ನಾಟಕದಲ್ಲಿ ಇದೇ ಹೆಸರಿನ ವಿಶ್ವವಿದ್ಯಾಲಯದ ಅವಶ್ಯಕತೆ ಏನು. ಅದರ ತಾತ್ವಿಕ ಜರೂರತ್ತೇನು. ಬಳ್ಳಾರಿಯಲ್ಲಿ ಈಗಾಗಲೇ ಕನ್ನಡ ವಿಶ್ವವಿದ್ಯಾಲಯ ಇರುವಾಗ ಮತ್ತೊಂದು ವಿಶ್ವವಿದ್ಯಾಲಯ ಸ್ಥಾಪಿಸಬೇಕೆ… ಇದರಿಂದಾಗುವ ಪ್ರಯೋಜನಗಳೇನು.. ಎಂದೆಲ್ಲ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ಯೋಚಿಸಲಿಲ್ಲ. ಜನಾರ್ದನ ರೆಡ್ಡಿ ನಿರ್ಧಾರಕ್ಕೆ ಸೊಲ್ಲೆತ್ತುವ ಧೈರ್ಯ ತಮಗಿಲ್ಲವೆಂಬುದನ್ನು ಅವರು ತೋರ್ಪಡಿಸಿದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications