ಹೆಸರಿಗಾಗಿಯೇ ಕೃಷ್ಣದೇವರಾಯ ವಿಶ್ವವಿದ್ಯಾಲಯ

ಕಲ್ಬುರ್ಗಿ ಅವರು ಏಕೆ ಈ ಹೆಸರು ಇಡಬಾರದು ಎನ್ನುವುದಕ್ಕೆ ಸುದೀರ್ಘ ಕಾರಣಗಳನ್ನು ನೀಡಿದರು. ವಿಜಯನಗರದ ಅರಸ ಶ್ರೀಕೃಷ್ಣದೇವರಾಯ ಎಂದಿಗೂ ಕನ್ನಡಪರ ಇರಲಿಲ್ಲ. ದೇಶಭಾಷೆಗಳಲ್ಲೇ ತೆಲುಗು ಅತ್ಯಂತ ಸುಂದರ ಭಾಷೆ ಎಂದೂ ಹೇಳಿದ್ದಾನೆ. ಜೊತೆಗೆ ಈ ಭಾಷೆಯ ಬೆಳವಣಿಗೆಗೆ ಅಪಾರ ಪ್ರೋತ್ಸಾಹ ನೀಡಿದ್ದಾನೆ. ಆತನ ಆಸ್ಥಾನದಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ತೆಲುಗು ಕವಿಗಳಿದ್ದರು. ಇಂಥ ರಾಜರಿಂದಲೇ ಕನ್ನಡದ ಬೆಳವಣಿಗೆಗೆ ಅಡ್ಡಿಯಾಯಿತು" ಎಂದರು. ಈ ಎಲ್ಲ ಅಭಿಪ್ರಾಯಗಳು ಸರಕಾರದ ಮೇಲೆ ಒತ್ತಡ ತಂದಿದ್ದರಿಂದಾಗಿ ವಿ.ವಿ. ಹೆಸರು ಬದಲಾವಣೆ ಆಗಲಿಲ್ಲ. ಆ ಸಂದರ್ಭದಲ್ಲಿ ಹೊಸಪೇಟೆಗೆ ಬಂದ ಅಂದಿನ ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ಅವರು 'ಕನ್ನಡ ವಿಶ್ವವಿದ್ಯಾಲಯಕ್ಕೆ ಶ್ರೀಕೃಷ್ಣದೇವರಾಯ ಹೆಸರಿಡುವ ನಿರ್ಧಾರ ಕೈ ಬಿಡಲಾಗಿದೆ" ಎಂದು ಕೈತೊಳೆದುಕೊಂಡಿದ್ದರು.
ಹೊಸ ವಿಶ್ವವಿದ್ಯಾಲಯವೇ ಬಂತು: ಶೈಕ್ಷಣಿಕ ಕೊರತೆಗಳನ್ನು ನಿವಾರಿಸುವ ಸಲುವಾಗಿ ವಿಶ್ವವಿದ್ಯಾಲಯಗಳ ಸ್ಥಾಪನೆಯಾಗುವುದನ್ನು ಕೇಳಿದ್ದೇವೆ. ನೋಡಿದ್ದೇವೆ. ಆದರೆ ಹೆಸರೊಂದರ ಕಾರಣಕ್ಕಾಗಿಯೆ ಹೊಸ ವಿಶ್ವವಿದ್ಯಾಲಯ ಸ್ಥಾಪನೆ ವಿಚಾರ ಕೇಳಿದ್ದೀರಾ! ಇದು ಕೂಡ ನಡೆದುಹೋಯಿತು. ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳ ವ್ಯಾಪ್ತಿಗೆ ಅನ್ವಯಿಸುವಂತೆ ಹೊಸ ವಿಶ್ವವಿದ್ಯಾಲಯ ಸ್ಥಾಪಿಸಲು ಮತ್ತು ಅದಕ್ಕೆ 'ಶ್ರೀಕೃಷ್ಣದೇವರಾಯ" ಹೆಸರಿಡಲು ಸಚಿವ ಸಂಪುಟ ನಿರ್ಧಾರ ತೆಗೆದುಕೊಳ್ಳುವಂತೆ ಮಾಡಲು ಜನಾರ್ದನ ರೆಡ್ಡಿ ಯಶಸ್ವಿಯಾದರು. ಕೇವಲ ತೊಂಭತ್ತು ಕಿಲೋಮೀಟರ್ ದೂರವಿರುವ ಅನಂತಪುರ ಜಿಲ್ಲೆಯಲ್ಲಿ ಈಗಾಗಲೇ ಶ್ರೀಕೃಷ್ಣದೇವರಾಯ ಹೆಸರಿನ ವಿಶ್ವವಿದ್ಯಾಲಯವಿದೆ. ಹೀಗಿರುವಾಗ ಕರ್ನಾಟಕದಲ್ಲಿ ಇದೇ ಹೆಸರಿನ ವಿಶ್ವವಿದ್ಯಾಲಯದ ಅವಶ್ಯಕತೆ ಏನು. ಅದರ ತಾತ್ವಿಕ ಜರೂರತ್ತೇನು. ಬಳ್ಳಾರಿಯಲ್ಲಿ ಈಗಾಗಲೇ ಕನ್ನಡ ವಿಶ್ವವಿದ್ಯಾಲಯ ಇರುವಾಗ ಮತ್ತೊಂದು ವಿಶ್ವವಿದ್ಯಾಲಯ ಸ್ಥಾಪಿಸಬೇಕೆ… ಇದರಿಂದಾಗುವ ಪ್ರಯೋಜನಗಳೇನು.. ಎಂದೆಲ್ಲ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ಯೋಚಿಸಲಿಲ್ಲ. ಜನಾರ್ದನ ರೆಡ್ಡಿ ನಿರ್ಧಾರಕ್ಕೆ ಸೊಲ್ಲೆತ್ತುವ ಧೈರ್ಯ ತಮಗಿಲ್ಲವೆಂಬುದನ್ನು ಅವರು ತೋರ್ಪಡಿಸಿದರು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications