ಅರಸರೇ ಇದ್ದರೂ ಇಂಥ ಉತ್ಸವ ಮಾಡುತ್ತಿರಲಿಲ್ಲ!

ಎಂ.ಪಿ.ಪ್ರಕಾಶ್ ಅವರು ಸಚಿವರಾಗಿದ್ದ ಅವಧಿಯಲ್ಲಿ ಹಂಪಿ ಉತ್ಸವದ ಸಂದರ್ಭದಲ್ಲಿ ಗಣ್ಯರ ಮನ ಕಲಕುವ ಸಾವು-ನೋವಿನ ದುರ್ಘಟನೆ ನಡೆದರೆ ಉತ್ಸವ ರದ್ದುಗೊಳಿಸಲು ಆದೇಶಿಸುತ್ತಿದ್ದರು. ಮಾಜಿ ಸಚಿವ ನಜೀರ್ ಸಾಬ್ ಅವರ ಮರಣ, ಹೊಸಪೇಟೆ ತಾಲೂಕು ಪಂಚಾಯತಿ ಅಧ್ಯಕ್ಷರ ಕೊಲೆಯಂಥ ದುರ್ಘಟನೆಗಳ ಸನ್ನಿವೇಶದಲ್ಲಿ ಉತ್ಸವ ರದ್ದಾಗಿದೆ. ಇಂಥ ಸಂದರ್ಭಗಳಲ್ಲಿ ಉತ್ಸವ ಮಾಡಿದರೆ ಅರ್ಥವಿರುವುದಿಲ್ಲ ಎಂಬ ಇರಾದೆ ಅವರದಾಗಿತ್ತು. ಆದರೆ ಇಂಥ ಸಂವೇದನಾಶೀಲತೆ 2009ರಲ್ಲಿ ಕಂಡು ಬರಲಿಲ್ಲ.
ನಾವಿರುವುದು ಪ್ರಜಾಪ್ರಭುತ್ವದ ನೆಲೆಯಲ್ಲಿ. ನಿರಂಕುಶ ಪ್ರಭುಗಳ ಆಡಳಿತ ಬೇಡ ಎಂದೇ ಹೋರಾಟ ಮಾಡಿ ಈ ವ್ಯವಸ್ಥೆ ಒಪ್ಪಿಕೊಳ್ಳಲಾಗಿದೆ. ಹೀಗಿರುವಾಗ ಪ್ರಜೆಗಳ ಧ್ವನಿಗೆ ಬೆಲೆಯೆ ಇಲ್ಲದ ರಾಜರ ಪಟ್ಟಾಭಿಷೇಕೋತ್ಸವಗಳನ್ನು ವೈಭವದಿಂದ ಆಚರಿಸುವುದು ಅರ್ಥಹೀನ. ಪ್ರಜಾಪ್ರಭುತ್ವಕ್ಕೆ ಮಾಡುವ ಅವಮಾನ. ಇದನ್ನೆಲ್ಲ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಮಂತ್ರಿ ಮಂಡಲ ಯೋಚಿಸಲಿಲ್ಲ. ಇದಕ್ಕೆ ಮತ್ತದೆ ಕಾರಣ ಜನಾರ್ದನ ರೆಡ್ಡಿ. ಇವರ ಮಾತಿನಂತೆ 27 ಕೋಟಿ ರುಪಾಯಿಗಳನ್ನು ಸರಕಾರ ಬಿಡುಗಡೆ ಮಾಡಿತು. 2009ರ ಜನವರಿ 27ರಿಂದ 30ರವರೆಗೆ ಶ್ರೀಕೃಷ್ಣದೇವರಾಯರ 500ನೇ ವರ್ಷದ ಪಟ್ಟಾಭಿಷೇಕೋತ್ಸವ ಆಯೋಜಿತವಾಯಿತು. 5 ಕೋಟಿ ವೆಚ್ಚದಲ್ಲಿ ಭವ್ಯ ವೇದಿಕೆ ನಿರ್ಮಾಣವಾಯಿತು. ಒಂದು ವೇಳೆ ವಿಜಯನಗರ ಸಾಮ್ರಾಜ್ಯದ ಅರಸರ ಸಂತತಿಯೇ ಇವತ್ತಿದ್ದರೂ ಇಂಥ ಉತ್ಸವ ಮಾಡುತ್ತಿರಲಿಲ್ಲವೇನೋ!
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications