Get Updates
Get notified of breaking news, exclusive insights, and must-see stories!

ಅರಸರೇ ಇದ್ದರೂ ಇಂಥ ಉತ್ಸವ ಮಾಡುತ್ತಿರಲಿಲ್ಲ!

ಕರ್ನಾಟಕ ಸರಕಾರ ಪ್ರತಿವರ್ಷ ಹಂಪಿಯಲ್ಲಿ ಉತ್ಸವ ನಡೆಸುವ ನಿರ್ಧಾರ ತೆಗೆದುಕೊಳ್ಳಲು ಕಾರಣರಾದವರು ಎಂ.ಪಿ.ಪ್ರಕಾಶ್. ಅವಿಭಜಿತ ಜನತಾ ಪಕ್ಷ ಅಧಿಕಾರದಲ್ಲಿದ್ದಾಗ ಈ ಸಂಪ್ರದಾಯ ಶುರುವಾಯಿತು. ಕಲೆ-ಸಾಹಿತ್ಯದಲ್ಲಿ ಅಪಾರವಾದ ತಿಳಿವಳಿಕೆ ಹೊಂದಿದ್ದ ಪ್ರಕಾಶ್ ಅವರು ಹಂಪಿ ಉತ್ಸವ ಹೇಗೆ ನಡೆಯಬೇಕೆಂಬುದರ ಯೋಜನೆಯನ್ನು ಖುದ್ದು ರೂಪಿಸಿದವರು. ಆಡಂಬರಕ್ಕೆ ಅವಕಾಶವಿಲ್ಲದೆ ತುಂಬ ಸೊಗಸಾಗಿ ಕಾರ್ಯಕ್ರಮಗಳು ನಡೆಯುತ್ತಿದ್ದವು. ಆದರೆ ಜನಾರ್ದನ ರೆಡ್ಡಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ಈ ಉತ್ಸವದ ಸಾಂಸ್ಕೃತಿಕ ಮೆರುಗು ಕಳೆದು ಹೋಗಿ ಆಡಂಬರವೇ ವಿಜೃಂಭಿಸತೊಡಗಿತು.

ಎಂ.ಪಿ.ಪ್ರಕಾಶ್ ಅವರು ಸಚಿವರಾಗಿದ್ದ ಅವಧಿಯಲ್ಲಿ ಹಂಪಿ ಉತ್ಸವದ ಸಂದರ್ಭದಲ್ಲಿ ಗಣ್ಯರ ಮನ ಕಲಕುವ ಸಾವು-ನೋವಿನ ದುರ್ಘಟನೆ ನಡೆದರೆ ಉತ್ಸವ ರದ್ದುಗೊಳಿಸಲು ಆದೇಶಿಸುತ್ತಿದ್ದರು. ಮಾಜಿ ಸಚಿವ ನಜೀರ್ ಸಾಬ್ ಅವರ ಮರಣ, ಹೊಸಪೇಟೆ ತಾಲೂಕು ಪಂಚಾಯತಿ ಅಧ್ಯಕ್ಷರ ಕೊಲೆಯಂಥ ದುರ್ಘಟನೆಗಳ ಸನ್ನಿವೇಶದಲ್ಲಿ ಉತ್ಸವ ರದ್ದಾಗಿದೆ. ಇಂಥ ಸಂದರ್ಭಗಳಲ್ಲಿ ಉತ್ಸವ ಮಾಡಿದರೆ ಅರ್ಥವಿರುವುದಿಲ್ಲ ಎಂಬ ಇರಾದೆ ಅವರದಾಗಿತ್ತು. ಆದರೆ ಇಂಥ ಸಂವೇದನಾಶೀಲತೆ 2009ರಲ್ಲಿ ಕಂಡು ಬರಲಿಲ್ಲ.

ನಾವಿರುವುದು ಪ್ರಜಾಪ್ರಭುತ್ವದ ನೆಲೆಯಲ್ಲಿ. ನಿರಂಕುಶ ಪ್ರಭುಗಳ ಆಡಳಿತ ಬೇಡ ಎಂದೇ ಹೋರಾಟ ಮಾಡಿ ಈ ವ್ಯವಸ್ಥೆ ಒಪ್ಪಿಕೊಳ್ಳಲಾಗಿದೆ. ಹೀಗಿರುವಾಗ ಪ್ರಜೆಗಳ ಧ್ವನಿಗೆ ಬೆಲೆಯೆ ಇಲ್ಲದ ರಾಜರ ಪಟ್ಟಾಭಿಷೇಕೋತ್ಸವಗಳನ್ನು ವೈಭವದಿಂದ ಆಚರಿಸುವುದು ಅರ್ಥಹೀನ. ಪ್ರಜಾಪ್ರಭುತ್ವಕ್ಕೆ ಮಾಡುವ ಅವಮಾನ. ಇದನ್ನೆಲ್ಲ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಮಂತ್ರಿ ಮಂಡಲ ಯೋಚಿಸಲಿಲ್ಲ. ಇದಕ್ಕೆ ಮತ್ತದೆ ಕಾರಣ ಜನಾರ್ದನ ರೆಡ್ಡಿ. ಇವರ ಮಾತಿನಂತೆ 27 ಕೋಟಿ ರುಪಾಯಿಗಳನ್ನು ಸರಕಾರ ಬಿಡುಗಡೆ ಮಾಡಿತು. 2009ರ ಜನವರಿ 27ರಿಂದ 30ರವರೆಗೆ ಶ್ರೀಕೃಷ್ಣದೇವರಾಯರ 500ನೇ ವರ್ಷದ ಪಟ್ಟಾಭಿಷೇಕೋತ್ಸವ ಆಯೋಜಿತವಾಯಿತು. 5 ಕೋಟಿ ವೆಚ್ಚದಲ್ಲಿ ಭವ್ಯ ವೇದಿಕೆ ನಿರ್ಮಾಣವಾಯಿತು. ಒಂದು ವೇಳೆ ವಿಜಯನಗರ ಸಾಮ್ರಾಜ್ಯದ ಅರಸರ ಸಂತತಿಯೇ ಇವತ್ತಿದ್ದರೂ ಇಂಥ ಉತ್ಸವ ಮಾಡುತ್ತಿರಲಿಲ್ಲವೇನೋ!

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+