ವಿಜಯನಗರ ಸಾಮ್ರಾಜ್ಯದ ಕಡೇ ಚಕ್ರವರ್ತಿ ರೆಡ್ಡಿ!

ಸಿ.ಬಿ.ಐ. ಅಧಿಕಾರಿಗಳು ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ ನಿವಾಸದ ಮೇಲೆ ದಾಳಿ ನಡೆಸಿ ಭಾರಿ ಬೆಲೆ ಬಾಳುವ ವಸ್ತುಗಳನ್ನು ಜಪ್ತಿ ಮಾಡಿದರು. ಚಿನ್ನದ ಸಿಂಹಾಸನ, ಬೆಲ್ಟು, ಪೆನ್ನುಗಳು, ಚಿನ್ನದ ಅಂಗಿ, ತಟ್ಟೆಗಳು-ಚಮಚಗಳು, ಸಂಪೂರ್ಣ ಚಿನ್ನದಿಂದಲೇ ಮಾಡಿದ ತಿರುಪತಿ ತಿಮ್ಮಪ್ಪ-ಲಕ್ಷ್ಮಿ-ಪದ್ಮಾವತಿಯರ ವಿಗ್ರಹಗಳು, ಪೂಜಾ ಸಾಮಗ್ರಿಗಳು, ಅಸಂಖ್ಯಾತ ಅಭರಣಗಳು-ವಜ್ರ-ವೈಢೂರ್ಯಗಳು. ಅಬ್ಬಾ ಎನಿಸುವಂಥ ವಿವರಗಳು. ಆದರೆ ನೆನಪಿಡಿ. ಈ ಅದಿರು ವ್ಯಾಪಾರಿ ಕಟ್ಟಿದ ಸಂಪತ್ತಿನ ಸಾಮ್ರಾಜ್ಯದಲ್ಲಿ ಇದು ಅತ್ಯಲ್ಪ. 'ತಾನು 50.000 ಕೋಟಿ ಗಳಿಸಿದ್ದೇನೆ"ಬೆಳಗಾವಿ ವಿಧಾನಸಭಾ ಅಧಿವೇಶನದ ಸಂದರ್ಭದಲ್ಲಿ ರೆಡ್ಡಿ ಹೇಳಿದ್ದ ಮಾತಿದು! ಮುಖ್ಯವಾಗಿ ಇಲ್ಲಿ ಗಮನ ಸೆಳೆಯುವುದು ಚಿನ್ನದ ಸಿಂಹಾಸನ-ಬೆಲ್ಟು-ಅಂಗಿ. ಎಷ್ಟೆ ಹಣವಿದ್ದರೂ ಇಂಥ ಖಯಾಲಿ ಇರುವುದೇ ಎನಿಸದಿರದು.
ಬಳ್ಳಾರಿಯಲ್ಲಿದ್ದಾಗ ನಾನು ಗಮನಿಸಿದ ಅಂಶಗಳಲ್ಲಿ ಅಂದಿನ ಸಚಿವ ಜನಾರ್ದನ ರೆಡ್ಡಿ ಸುತ್ತಲೂ ಇದ್ದವರು ಅವರನ್ನು ಹೊಗಳುತ್ತಿದ್ದ ಪರಿ ಕೇಳಿದರೆ ಕಿವಿಗೆ ತೂತು ಬೀಳುತ್ತದೆ. ಅಭಿನವ ಶ್ರೀಕೃಷ್ಣದೇವರಾಯ, ಶ್ರೀಕೃಷ್ಣದೇವರಾಯರ ಅಪರವತಾರ ಎನ್ನುವುದೆಲ್ಲ ಆಶ್ಚರ್ಯ ಉಂಟು ಮಾಡಿತ್ತು. ಜಿಲ್ಲಾ ಬಿ.ಜೆ.ಪಿ. ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಅಂದು ಮಾತನಾಡಿದ ಜಿಲ್ಲೆಯ ಶಾಸಕರೊಬ್ಬರು ಜನಾರ್ದನ ರೆಡ್ಡಿ ಅವರು ಶ್ರೀಕೃಷ್ಣದೇವರಾಯರ ಪುನರ್ಜನ್ಮ ಎಂದಿದ್ದರು. ಇದನ್ನು ಕೇಳಿದಾಗ ಹೊಗಳಿಕೆಗೂ ಒಂದು ಇತಿಮಿತಿ ಬೇಡವೇ ಎನಿಸಿತು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications