ರಾಹುಕೇತುವಿಗಿಂತ 'ಎಡಬಿಡಂಗಿ' ಅನಂತಮೂರ್ತಿ ಅಪಾಯಕಾರಿ

ಇತ್ತೀಚೆಗೆ ಇಲ್ಲಿ ಹಮ್ಮಿಕೊಂಡಿದ್ದ ವಿಚಾರವಾದಿ ಬಿ.ವಿ. ವೀರಭದ್ರಪ್ಪ ಅವರ ಅಮೃತ ಮಹೋತ್ಸವ ಸಮಾರಂಭದಲ್ಲಿ ಅಭಿನಂದನಾ ಗ್ರಂಥ 'ಲೋಕಾಯತ' ಬಿಡುಗಡೆ ಮಾಡಿ ಬರಗೂರು ಮಾತನಾಡಿದರು. ಭೈರಪ್ಪ ನವರ ಕೆಲವೊಂದು ಐಡಿಯಾಲಜಿ ನನಗೂ ಇಷ್ಟವಾಗುವುದಿಲ್ಲ. ಇದರ ಬಗ್ಗೆ ಪ್ರತ್ಯೇಕ ಚರ್ಚೆ ನಡೆಸೋಣ, ಆದರೆ ಆದರ್ಶ ಪಾಠ ಹೇಳುವವರು ಚಲನಶೀಲತೆ ಬಿಟ್ಟು ಜಡತೆಯತ್ತ ಸರಿಯಾರಬಾರದು ಎನ್ನುವುದು ನನ್ನ ವಾದ ಎಂದಿದ್ದಾರೆ.
ಬೆಂಗಳೂರಿನಲ್ಲಿ ಈಚೆಗೆ ನಡೆದ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರ ಚಲನಚಿತ್ರಗಳ ವಿಮರ್ಶೆ, ಸಂವಾದ ಮತ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಅವರನ್ನು ರಾಹುಗ್ರಸ್ತ ಲೇಖಕ, ಅವರ ಕೃತಿಗೆ ಹಿಡಿದ ರಾಹುವನ್ನು ಗಿರೀಶ್ ಕಾಸರವಳ್ಳಿ ತಮ್ಮ ಚಿತ್ರಗಳ ಮೂಲಕ ಬಿಡುಗಡೆ ಮಾಡಿದ್ದಾರೆ ಎಂದು ಅನಂತಮೂರ್ತಿ ಟೀಕಿಸಿದ್ದಾರೆ. ಅವರ ದೃಷ್ಟಿಯಲ್ಲಿ ಬಲಪಂಥೀಯರು ರಾಹು, ಎಡಪಂಥೀಯರು ಕೇತುಗಳು. ಎರಡೂ ಪಂಥಗಳನ್ನು ಸಮಾಜ ಸಹಿಸಿಕೊಳ್ಳುತ್ತದೆ. ಆದರೆ, ಎರಡೂ ಪಂಥಕ್ಕೂ ಸೇರದ ಅನಂತಮೂರ್ತಿ ಅತ್ಯಂತ ಅಪಾಯಕಾರಿ ವ್ಯಕ್ತಿ ಎಂದು ವಾಗ್ದಾಳಿ ನಡೆಸಿದರು.
ಗೃಹಭಂಗದಂತಹ ಶ್ರೇಷ್ಠ ಕೃತಿಯನ್ನು ನೀಡಿದ ಭೈರಪ್ಪ ನಂತರ ಕರಪತ್ರದಂತಹ ಹಲವು ಕೃತಿ ರಚಿಸಿದರು. ಅವರನ್ನು, ಅವರ ಸಿದ್ಧಾಂತವನ್ನು ನೇರವಾಗಿ ಎದುರಿಸಬಹುದು. ಎಡಪಂಥೀಯ ನ್ಯೂನತೆಗಳ ಬಗ್ಗೆ ಪ್ರಶ್ನಿಸಬಹುದು. ಆದರೆ, ಸಾಂಸ್ಕೃತಿಕ ವಲಯದ ಮೂರನೇ ಜಗತ್ತು ಎಂದು ಗುರುತಿಸುವ ಸುರಕ್ಷತಾ ವಲಯದ ಆತ್ಮವಂಚಕರನ್ನು ಎದುರಿಸುವುದು ಕಷ್ಟದ ಕೆಲಸ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಚಂಪಾ, ಅನಂತಮೂರ್ತಿ ಹಾಗೂ ಭೈರಪ್ಪ ನಡುವಿನ ಜಗಳ ಬ್ರಾಹ್ಮಣರ ಒಳಗಿನ ಎಡಗೈ-ಬಲಗೈ ಜಗಳ. ವಶೀಕರಣ ಬಾಜಿಯ ಅನಂತಮೂರ್ತಿಯದು ಸದಾ ಎಡಬಿಡಂಗಿ ಪಂಥ ಎಂದು ಕುಟುಕಿದರು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications