ಸಿನಿಮಾ ಡಬ್ಬಿಂಗ್ ಕಲೆಯ ಭ್ರಷ್ಟಾಚಾರವಷ್ಟೇ: ಭೈರಪ್ಪ

ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರತಂಡದವರನ್ನು ಶನಿವಾರ ಅಭಿನಂದಿಸಿ ಮಾತನಾಡಿದ ಅವರು, ಪದೇ ಪದೆ ಭಾರೀ ವಿವಾದಕ್ಕೆ ಕಾರಣವಾಗುತ್ತಿರುವ ಡಬ್ಬಿಂಗ್ ಸಂಸ್ಕೃತಿಯ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. 'ಡಬ್ಬಿಂಗ್ ಕೇವಲ ನಮ್ಮ ತಂತ್ರಜ್ಞರ ಕೆಲಸವನ್ನಷ್ಟೇ ಕಿತ್ತುಕೊಳ್ಳುವುದಿಲ್ಲ. ಬದಲಾಗಿ, ನಮ್ಮ ಸಂಸ್ಕೃತಿಯನ್ನು ಅಭಿವ್ಯಕ್ತಿಗೊಳಿಸುವ ಅವಕಾಶವನ್ನೇ ಕೊಲ್ಲುತ್ತದೆ' ಎಂದರು.
'ಒಂದು ಸಾಹಿತ್ಯದ ಕೃತಿಯನ್ನು ಬೇರೆ ಭಾಷೆಗೆ ಅನುವಾದ ಮಾಡಿದಾಗ ಅಲ್ಲಿ ಸಂಸ್ಕೃತಿಗಿಂತ ಹೆಚ್ಚಾಗಿ ಕಥೆಯ ಅನುವಾದವಾಗುತ್ತದೆ. ಆದರೆ, ಸಿನಿಮಾ ಹಾಗಲ್ಲ. ಅದು ನಟನೆ, ಸಂಗೀತ, ಸಾಹಿತ್ಯ, ಪರಿಸರ ಇತ್ಯಾದಿಗಳಿಂದ ಒಂದು ಭಾಷೆಗೆ ಹೊಂದಿಕೊಂಡಿರುತ್ತದೆ. ಇದನ್ನು ಬೇರೊಂದು ಭಾಷೆಗೆ ತರ್ಜುಮೆ ಮಾಡುವಾಗ ಅಲ್ಲಿರುವ ಮೂಲ ಸಂಸ್ಕೃತಿಯನ್ನು ನಾಶಪಡಿಸಿದಂತಾಗುತ್ತದೆ' ಎಂದರು.
ರೀಮೇಕ್ಗಿಂತ ದೊಡ್ಡ ಭೌತಿಕ ದಾರಿದ್ರ ಇನ್ನೊಂದಿಲ್ಲ. ರೀಮೇಕ್ ಅಥವಾ ಡಬ್ಬಿಂಗ್ ಮಾಡುವುದೆಂದರೆ, ಒಂದು ಸಂಸ್ಕೃತಿಯನ್ನು ಕೊಂದಂತೆ ಎಂದು ಪ್ರತಿಪಾದಿಸಿದ ಅವರು, 'ಕನ್ನಡ ಸಿನಿಮಾವೆಂದರೆ ಕನ್ನಡ ಸಂಸ್ಕೃತಿ ಜತೆಗಿರುವ ಮಾಧ್ಯಮ. ಡಬ್ಬಿಂಗ್ನಿಂದ ಇದು ಹಾಳಾಗುವ ಅಪಾಯವಿದೆ. ಇದರ ವಿರುದ್ಧ ಪ್ರತಿಯೊಬ್ಬರು ಧ್ವನಿ ಎತ್ತಬೇಕು' ಎಂದು ಕರೆ ಕೊಟ್ಟರು.
'ಹಾಕಿದ ಬಂಡವಾಳ ವಾಪಸ್ ಬರಬೇಕು ಎಂದು ಮಾತನಾಡುವವನು ಜವಳಿ ಉದ್ಯಮಕ್ಕೆ ಹೋಗಲಿ, ಸಿಮೆಂಟ್, ಇಟ್ಟಿಗೆ ಇತರೆ ಉದ್ಯಮ, ವ್ಯವಹಾರಕ್ಕೆ ಹೋಗಲಿ. ನಿರ್ಮಾಪಕರು ಎಂಬ ಬಂಡವಾಳಶಾಹಿಗಳು ಸಿನಿಮಾದಿಂದ ದೂರವಿರಲಿ. ಸಿನಿಮಾ ಜವಳಿ ತರಹದ ಉದ್ಯಮವಲ್ಲ. ಅದೊಂದು ಕಲೆ ಮತ್ತು ಸಂಸ್ಕೃತಿಯ ಕ್ಷೇತ್ರ. ಇದನ್ನು ಉಳಿಸಬೇಕಿದೆ. ಇದಕ್ಕೆ ವ್ಯವಹಾರ ಬೆರೆಸಿದರೆ ಸಂಸ್ಕೃತಿ ಮತ್ತು ಕಲೆ ಹಾಳಾಗುತ್ತದೆ' ಎಂದರು.
'ಕನ್ನಡ ಚಿತ್ರರಂಗ ಬಂಡವಾಳಶಾಹಿಗಳ ಕಪಿಮುಷ್ಟಿಯಲ್ಲ, ರಾಕ್ಷಸಮುಷ್ಟಿಯಲ್ಲಿ ನಲುಗುತ್ತಿದೆ. ಇದನ್ನು ವಿರೋಧಿಸುವ ನಿಟ್ಟಿನಲ್ಲಿ ಕೆಲಸಗಳಾಗಬೇಕು. ನಮ್ಮ ಸಂಸ್ಕೃತಿಯನ್ನು ಬಿಂಬಿಸುವಂತಹ ಸಿನಿಮಾಗಳು ಕನ್ನಡದಲ್ಲಿ ತಯಾರಾಗಬೇಕು. ಮುಖ್ಯವಾಹಿನಿಯ ಚಿತ್ರಗಳ ಜತೆಗೆ ಗಂಭೀರ ಚಿತ್ರಗಳ ನಿರ್ಮಾಣವೂ ಆಗಬೇಕು. ಒಳ್ಳೆಯ ಕಲಾತ್ಮಕ ಚಿತ್ರಗಳು ಹೆಚ್ಚು ನಿರ್ಮಾಣವಾಗಬೇಕು' ಎಂದು ಭೈರಪ್ಪ ಹೇಳಿದರು.
ಚಿತ್ರ ಸಮೂಹ ಏರ್ಪಡಿಸಿದ್ದ ಸಮಾರಂಭದಲ್ಲಿ ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ ವಿಜೇತ ನಿರ್ಮಾಪಕ ಮತ್ತು ನಿರ್ದೇಶಕರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ನಿರ್ದೇಶಕ ಗಿರೀಶ್ ಕಾಸರವಳ್ಳಿ, ಪಿ. ಶೇಷಾದ್ರಿ, ಬಿ. ಸುರೇಶ್ ಮೊದಲಾದವರು ಉಪಸ್ಥಿತರಿದ್ದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications