Get Updates
Get notified of breaking news, exclusive insights, and must-see stories!

ಸಾಹಿತ್ಯ ಲೋಕದ ಅಗಾಧ ಪ್ರತಿಭೆ ನಾ. ಡಿಸೋಜಾ ಕೊಡುಗೆಗಳು

ನಾ. ಡಿಸೋಜಾರವರ ಸಾಹಿತ್ಯ ಸೃಷ್ಟಿಯ ಹರವು ಅಗಾಧವಾದದ್ದು. ಈ ಮೊದಲೇ ಹೇಳಿದಂತೆ ಕಾದಂಬರಿ, ಸಣ್ಣ ಕಥೆ, ನಾಟಕ, ಮಕ್ಕಳ ಸಾಹಿತ್ಯ ಇಂತಹಾ ನಾನಾ ಪ್ರಕಾರಗಳಲ್ಲಿ ಸಾಹಿತ್ಯ ಕೃಷಿ ಮಾಡಿದ 'ಅಕ್ಷರ ಕೃಷಿಕ' ಈ ಡಿಸೋಜಾ. ಡಿಸೋಜಾರ ಮೊದಲ ಕಾದಂಬರಿ'ಬಂಜೆ ಬೆಂಕಿ'ಯು ಪ್ರಕಟವಾದುದು 1964ರಲ್ಲಿ. 'ಮುಳುಗಡೆ', 'ದ್ವೀಪ', 'ತಿರುಗೋಡಿನ ರೈತ ಮಕ್ಕಳು', 'ಒಡ್ಡು', 'ಒಂದು ಜಲಪಾತದ ಸುತ್ತ', 'ಕೆಂಪು ತ್ರಿಕೋನ', 'ಪ್ರೀತಿ ಎಂಬ ಚುಂಬಕ', 'ಪ್ರಜ್ಞಾಬಲಿ', 'ದೇವರಿಗೇ ದಿಕ್ಕು', 'ಇಕ್ಕೇರಿಯಲ್ಲಿ ಕ್ರಾಂತಿ', 'ಮುಖವಾಡ' ಇದೇ ಮೊದಲಾದ ನಲವತ್ತು ಕಾದಂಬರಿಗಳನ್ನು ಬರೆದಿರುವ ನಾ. ಡಿಸೋಜಾ 'ನೆಲೆ', 'ತಿಂಗಳ ಪೂಜೆಗೆ ಬಂದ ಮಗ', 'ದೇವರ ಶಿಲುಬೆ ಮನೆಗೆ ಬಂದದ್ದು', 'ಬಣ್ಣ; , 'ಪಿಟೀಲು', 'ಕೊನೆ', 'ಸಮಾಧಿ' ಇಂತಹಾ ಕಾದಂಬರಿಗಳಲ್ಲಿ ಕ್ರೈಸ್ತ ಸಮಾಜದಲ್ಲಿರುವ ಅಂಧಶ್ರದ್ದೆಗಳ ಕುರಿತು ತೋರಿಸಿ ಕೊಟ್ಟಿದ್ದಾರಲ್ಲದೆ ಅವುಗಳು ಪಡೆದುಕೊಳ್ಲಬೇಕಾದ ಚಲನಾಶೀಲತೆಯ ಕುರಿತೂ ಚರ್ಚಿಸಿದ್ದಾರೆ.

ಮಕ್ಕಳ ಸಾಹಿತ್ಯ ಕ್ಷೇತ್ರಕ್ಕೆ ಗಮನಾರ್ಹ ಕೊಡುಗೆ ಸಲ್ಲಿಸಿರುವ ಡಿಸೋಜಾರವರು ಮಕ್ಕಳಿಗಾಗಿ ಮಿನಿ ಕಾದಂಬರಿ, ನಾಟಕ, ಸಣ್ಣ ಕಥೆ, ಜೀವನಚರಿತ್ರೆಗಳನ್ನು ಬರೆದಿದ್ದಾರೆ. ಬಾಲಗಂಧರ್ವ, ಕದಂಬ ಮಯೂರಶರ್ಮ, ಸದಾಶಿವ ಬ್ರಹ್ಮೇಂದ್ರ, ಬಿಹಾರಿ ದಾಸ್ ಇದೇ ಮೊದಲಾದ ಐತಿಹಾಸಿಕ ವ್ಯಕ್ತಿಗಳ ಜೀವನ ಚರಿತ್ರೆಯನ್ನು ಮಕ್ಕಳ ಕಣ್ಣಿಗೆ ಕಟ್ಟುವಂತೆ ಕಟ್ಟಿಕೊಟ್ಟಿರುವ ಗರಿಮೆ ನಾ. ಡಿಸೋಜಾರವರದು. 'ದೇವರಿಗೆ ದಿಕ್ಕು', 'ತಬ್ಬಲಿ', 'ಕೃಷ್ಣನ ಕೊಡುಗೆ', 'ಹಕ್ಕಿಗಳಿಗೆ ಬಂತು ಬಣ್ಣ', ಇದೇ ಮುಂತಾದ ಮಕ್ಕಳ ನಾಟಕಗಳನ್ನು ರಚಿಸಿರುವ ಡಿಸೋಜಾರವರು 'ಗೇರುಸೊಪ್ಪೆ', 'ಪಾರಿವಾಳ ದ್ವೀಪ', 'ಮತ್ತೆ ಹೇಳಿದ ಅಜ್ಜಿ ಕಥೆಗಳು', 'ಹಿತೋಪದೇಶದ ಕಥೆಗಳು', 'ಗುರುದೇವರ ಕಥೆಗಳು' ಇಂತಹಾ ಮಿನಿ ಕಾದಂಬರಿ, ಸಣ್ಣ ಕಥೆಗಳನ್ನು ಮಕ್ಕಳಿಗಾಗಿ ಸೃಷ್ಟಿಸಿದ್ದಾರೆ. ಡಿಸೋಜಾರವರು ಸ್ವತಃ ಪ್ರಕೃತಿ ಪ್ರೇಮಿಯಾಗಿದ್ದರಿಂದ ಇವರ ಎಲ್ಲಾ ಕಾದಂಬರಿ, ನಾಟಕ, ಕಥೆಗಳಲ್ಲಿ ಕಾಡಿನ ಸೌಂದರ್ಯ, ಅಲ್ಲಿನ ಖಗ-ಮೃಗಗಳ ಝೇಂಕಾರ, ಬೆಟ್ಟ-ಗುಡ್ದಗಳ ರಮಣೀಯತೆ ಕಣ್ಣಿಗೆ ಕಟ್ಟುವಂತೆ ಚಿತ್ರಿತವಾಗಿರುತ್ತವೆ.

Article about Na D'Souza

ತಮ್ಮ ಮನೆ ಮಾತು ಕೊಂಕಣಿಯಾದರೂ ಕನ್ನಡಾಂಬೆಯ ಸೇವೆ ಮಾಡಿದ ಈ ಅಪರೂಪದ ಸಾಹಿತಿಗೆ ಅವರ ಸಾಹಿತ್ಯ ಪ್ರತಿಭೆಯನ್ನು ಮೆಚ್ಚಿ ಸಾಕಷ್ಟು ಪ್ರಶಸ್ತಿಗಳು ಲಭಿಸಿವೆ. ಅವುಗಳಲ್ಲಿ ಮುಖ್ಯವಾಗಿ 1988ರಲ್ಲಿ 'ಬೆಳಕಿನೊಡನೆ ಬಂತು ನೆನಪು' ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಪುರಸ್ಕಾರ, 1990ರಲ್ಲಿ 'ಕಾಡಿನ ಬೆಂಕಿ' ಕಾದಂಬರಿಯು ಚಲನಚಿತ್ರವಾಗಿ ರಜತ ಕಮಲ ಪುರಸ್ಕಾರಕ್ಕೆ ಭಾಜನವಾಯಿತು. ಮುಂದೆ 2008ರಲ್ಲಿ ಗಿರಿಶ್ ಕಾಸರವಳ್ಳಿ ನಿರ್ದೇಶನದಲ್ಲಿ 'ದ್ವೀಪ'ಕಾದಂಬರಿಯು ಚಲನಚಿತ್ರವಾಗಿ ಸ್ವರ್ಣ ಕಮಲ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

ಇದಲ್ಲದೆ 1993ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, 1998ರಲ್ಲಿ ರಾಜ್ಯೋತ್ಸವ ಪ್ರಶಸ್ತಿ, ನಿರಂಜನ ಸಾಹಿತ್ಯ ಪ್ರಶಸ್ತಿ, 2007ರಲ್ಲಿ ಕುವೆಂಪು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಗಳು ನಾ. ಡಿಸೋಜಾರ ಸಾಹಿತ್ಯ ಸೇವೆಗಾಗಿ ಒಲಿದು ಬಂದ ಗೌರವ ಪುರಸ್ಕಾರಗಳು. 'ಮುಳುಗಡೆಯ ಊರಿಗೆ ಬಂದವರು' ಕೃತಿಗಾಗಿ ಬಾಲ ಸಾಹಿತ್ಯಕ್ಕಾಗಿ ಕೊಡಮಾಡುವ ಕೇಂದ್ರ ಸಾಹಿತ್ಯ ಅಕಾಡಮಿ ಪುರಸ್ಕಾರಕ್ಕೂ ಡಿಸೋಜಾರವರು ಭಾಜನರಾಗಿದ್ದಾರೆ.

ಇನ್ನು 'ಬಳುವಳಿ', 'ಬೆಟ್ಟದ ಪುರದ ದಿಟ್ಟ ಮಕ್ಕಳು', 'ಆಂತರ್ಯ' ಕಾದಂಬರಿಗಳು ಚಲನಚಿತ್ರಗಳಾಗಿ ಜನ ಮನ್ನಣೆಯನ್ನು ಗಳಿಸಿದ್ದರೆ 'ಮುಳುಗಡೆ', 'ಕೊಳಗ', 'ಒಳಿತನ್ನು ಮಾಡಲು ಬಂದವರು', 'ಪರಾರಿಯಾಗುವ ಹುಡುಗ', 'ಬಣ್ಣ' ಇದೇ ಮೊದಲಾದ ಕಾದಂಬರಿಗಳು ವಿವಿಧ ವಿಶ್ವವಿದ್ಯಾನಿಲಯಗಳ ಪದವಿ ವಿಭಾಗದ ಪಠ್ಯಗಳಾಗಿ ಆಯ್ಕೆಗೊಂಡಿವೆ. ಅಲ್ಲದೆ ನಾ. ಡಿಸೋಜಾರ ಕಥೆ, ಕಾದಂಬರಿಗಳು ಕೊಂಕಣಿ, ಮಲಯಾಳಂ, ಹಿಂದಿ, ಇಂಗ್ಲೀಷ್, ಸಂಸ್ಕೃತ, ತೆಲುಗು ಭಾಷೆಗಳಿಗೆ ಅನುವಾದಗೊಂಡು ಅಲ್ಲಿನ ಓದುಗರಿಂದಲೂ ಸಾಕಷ್ಟು ಮೆಚ್ಚುಗೆ ಗಳಿಸಿದೆ.

ಇಂತಹಾ ಕನ್ನಡದ ಸೇವಾಕರ್ತನಿಗೆ ಈ ಬಾರಿ ಮಡಿಕೇರಿಯಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನ ಒಲಿದಿರುವುದು ನಿಜಕ್ಕೂ ನಮಗೆಲ್ಲರಿಗೂ ಅತ್ಯಂತ ಸಂತೋಷದ ಸಂಗತಿ. "ಹದಿನೈದು ದಿನಕ್ಕೊಂದು ಭಾಷೆ ಸಾಯುತ್ತಿದೆ!" ಎನ್ನುವ ವಿಶ್ವಸಂಸ್ಥೆಯ ವರದಿ ಹಿನ್ನೆಲೆಯಲ್ಲಿ ಕನ್ನಡವೂ ಅಳಿಯುವ ಭಾಷೆ ಆಗಬಾರದೆಂದರೆ ಇಂತಹಾ ಸಮ್ಮೇಳನಗಳ ಅವಶ್ಯಕತೆ ತುಂಬಾ ಇದೆ." ಎಂದು ಖಚಿತವಾಗಿ ನಂಬಿರುವ ಡಿಸೋಜಾರವರಿಗೆ ಒಲಿದ ಅಧ್ಯಕ್ಷಗಿರಿಗಾಗಿ ಅವರನ್ನು ಇನ್ನೊಮ್ಮೆ ಅಭಿನಂದಿಸುತ್ತಾ.....

ನನ್ನೆಲ್ಲಾ ಆತ್ಮೀಯ ಸ್ನೇಹಿತರಿಗೆ ಇದೋ ನನ್ನ ಆಹ್ವಾನ,
ಬನ್ನಿ ಮಡಿಕೇರಿಗೆ....
ಕನ್ನಡಮ್ಮನ ಜಾತ್ರೆಗೆ....
ನಾವು- ನೀವೆಲ್ಲರೂ ಕೂಡಿ ಕನ್ನಡದ ಹಿರಿಮೆಯನ್ನು ಜಗದಗಲ ಸಾರೋಣ....
ಕನ್ನಡ ತೇರನು ಎಳೆಯೋಣಾ...

ನಮಸ್ಕಾರ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+