ಪ್ರತಿಯೊಬ್ಬ ಕನ್ನಡಿಗನು ನೋಡಲೇಬೇಕಾದ ಮದುವೆಯ ಕರೆಯೋಲೆ
ಮದುವೆಗೆ ಮಮತೆಯ ಕರೆಯೋಲೆ ಎಂಬ ಮಾತು ಬಹಳ ಹಿಂದಿನಿಂದಲೂ ಚಾಲ್ತಿಯಲ್ಲಿದೆ. ಮದುವೆಯ ಕರೆಯೋಲೆ ಅಥವಾ ಲಗ್ನಪತ್ರಿಕೆ ಹೇಗಿರಬೇಕು? ಎಂದು ಪ್ರಶ್ನೆ ಮಾಡಿದರೆ, ಮಹೂರ್ತ, ಸ್ಥಳ, ದಿನಾಂಕ, ಜಾಗ, ಹೆಸರು ಹೀಗೆ ಎಲ್ಲವನ್ನು ಒಳಗೊಂಡಿರಬೇಕು ಎಂಬ ಉತ್ತರ ನೀಡಬಹುದು.
ಆದರೆ ಇಲ್ಲೊಬ್ಬರು ಮದುವೆಯ ಕರೆಯೋಲೆಯಲ್ಲಿ ನಾಡು-ನುಡಿಯ ಪ್ರೇಮ ಮೆರೆದಿದ್ದಾರೆ. ಬೆಂಗಳೂರು ಮಹಾನಗರ ಪಾಲಿಕೆಯ ಕಾಮಗಾರಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾದ ಜಗದೀಶ ರೆಡ್ಡಿ ತಮ್ಮ ಪುತ್ರ ಜೆ . ರಾಘವೇಂದ್ರ ಅವರ ಮದುವೆಯ ಕರೆಯೋಲೆಯಲ್ಲಿ ಕನ್ನಡದ ಕಂಪು ಪಸರಿಸಿದ್ದಾರೆ.
ಎಲ್ಲ ಲಗ್ನಪತ್ರಿಕೆಗಳಂತೆ ಇಲ್ಲ ರಾಘವೇಂದ್ರ ಅವರ ಮದುವೆಯ ಕರೆಯೋಲೆ. ಸರ್ವಜ್ಞ, ಡಿ ವಿ ಗುಂಡಪ್ಪ, ಕುವೆಂಪು, ದರಾ ಬೇಂದ್ರೆ, ಸಿದ್ದಯ್ಯ ಪುರಾಣಿಕ್ ಅವರ ಕವನದ ಸಾಲುಗಳು ಕನ್ನಡದ ನಾಡು ನುಡಿಯ ಪ್ರೀತಿಯನ್ನು ಜಾಗೃತ ಮಾಡುತ್ತವೆ.[ಡಿವಿಜಿ ಮಂಕುತಿಮ್ಮನ ಕಗ್ಗಕ್ಕೆ ಸರಳ ಕನ್ನಡದ ಸ್ಪರ್ಶ]

ಮದುವೆಯ ಕರೆಯೋಲೆ ಮೇಲಿನ ಆಯ್ದ ಸಾಲುಗಳನ್ನು ನಾವು ನೋಡಿಕೊಂಡು ಬರೋಣ
ಬೆಚ್ಚನಾ ಮನೆಯಿರಲು
ವೆಚ್ಚಕ್ಕೆ ಹೊನ್ನಿರಲು
ಇಚ್ಛೆಯನರಿತು ನಡೆವ ಸತಿಯಿರಲು
ಸ್ವರ್ಗಕ್ಕೆ ಕಿಚ್ಚು ಹಚ್ಚೆಂದ ಸರ್ವಜ್ಞ
-------------------
ಹುಲ್ಲಾಗು ಬೆಟ್ಟದಡಿ, ಮನೆಗೆ ಮಲ್ಲಿಗೆಯಾಗು
ಕಲ್ಲಾಗು ಕಷ್ಟಗಳ ಮಳೆ ವಿಧಿ ಸುರಿಯೇ
ಬೆಲ್ಲ ಸಕ್ಕರೆಯಾಗು ದೀನ ದುರ್ಬಲರಿಗೆ
ಎಲ್ಲರೊಳಗೊಂದಾಗು ಮಂಕುತಿಮ್ಮ-ಡಿವಿಜಿ[ಮದುವೆ ಕರೆಯೋಲೆಯಲ್ಲಿ ನೀರಾವರಿ ಜಾಗೃತಿ]
------------------------

ತನುವು ನಿನ್ನದು ಮನವು ನಿನ್ನದು
ಎನ್ನ ಜೀವನ ಧನವು ನಿನ್ನದು-ಕುವೆಂಪು
--------------------------
ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು
ಬಳಸಿಕೊಂಡೆವದನೆ ನಾವು ಅದಕು ಇದಕು ಎದಕು-ದರಾ ಬೇಂದ್ರೆ
--------------
ಏನಾದರು ಆಗು, ಮೊದಲು ಮಾನವನಾಗು-ಸಿದ್ದಯ್ಯ ಪುರಾಣಿಕ್
-------------
ಮೇಲಿನ ಸಾಲುಗಳು ಇಡೀ ಜೀವನದ ಸಾರವನ್ನು, ಮಧುವೆಯ ಬಾಂಧವ್ಯವನ್ನು, ಕಷ್ಟ ಸುಖಗಳ ಅರಿವನ್ನು, ಮಾನವತೆ ತತ್ವವನ್ನು ಸಾರುತ್ತವೆ. ಕುವೆಂಪುರವರ ವಿಶ್ವಮಾನವ ತತ್ವಕ್ಕೆ ತಕ್ಕುದಾದ ಸಾಲುಗಳ ಮೂಲಕ ಮದುವೆಯ ಕರೆಯೋಲೆ ನೀಡಿದ್ದು ಪ್ರತಿಯೊಬ್ಬ ಕನ್ನಡಿಗನ ಹೆಮ್ಮೆಯನ್ನು ಮತ್ತಷ್ಟು ಹೆಚ್ಚಿಸಿದೆ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ












Click it and Unblock the Notifications