ಪ್ರತಿಯೊಬ್ಬ ಕನ್ನಡಿಗನು ನೋಡಲೇಬೇಕಾದ ಮದುವೆಯ ಕರೆಯೋಲೆ
ಮದುವೆಗೆ ಮಮತೆಯ ಕರೆಯೋಲೆ ಎಂಬ ಮಾತು ಬಹಳ ಹಿಂದಿನಿಂದಲೂ ಚಾಲ್ತಿಯಲ್ಲಿದೆ. ಮದುವೆಯ ಕರೆಯೋಲೆ ಅಥವಾ ಲಗ್ನಪತ್ರಿಕೆ ಹೇಗಿರಬೇಕು? ಎಂದು ಪ್ರಶ್ನೆ ಮಾಡಿದರೆ, ಮಹೂರ್ತ, ಸ್ಥಳ, ದಿನಾಂಕ, ಜಾಗ, ಹೆಸರು ಹೀಗೆ ಎಲ್ಲವನ್ನು ಒಳಗೊಂಡಿರಬೇಕು ಎಂಬ ಉತ್ತರ ನೀಡಬಹುದು.
ಆದರೆ ಇಲ್ಲೊಬ್ಬರು ಮದುವೆಯ ಕರೆಯೋಲೆಯಲ್ಲಿ ನಾಡು-ನುಡಿಯ ಪ್ರೇಮ ಮೆರೆದಿದ್ದಾರೆ. ಬೆಂಗಳೂರು ಮಹಾನಗರ ಪಾಲಿಕೆಯ ಕಾಮಗಾರಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾದ ಜಗದೀಶ ರೆಡ್ಡಿ ತಮ್ಮ ಪುತ್ರ ಜೆ . ರಾಘವೇಂದ್ರ ಅವರ ಮದುವೆಯ ಕರೆಯೋಲೆಯಲ್ಲಿ ಕನ್ನಡದ ಕಂಪು ಪಸರಿಸಿದ್ದಾರೆ.
ಎಲ್ಲ ಲಗ್ನಪತ್ರಿಕೆಗಳಂತೆ ಇಲ್ಲ ರಾಘವೇಂದ್ರ ಅವರ ಮದುವೆಯ ಕರೆಯೋಲೆ. ಸರ್ವಜ್ಞ, ಡಿ ವಿ ಗುಂಡಪ್ಪ, ಕುವೆಂಪು, ದರಾ ಬೇಂದ್ರೆ, ಸಿದ್ದಯ್ಯ ಪುರಾಣಿಕ್ ಅವರ ಕವನದ ಸಾಲುಗಳು ಕನ್ನಡದ ನಾಡು ನುಡಿಯ ಪ್ರೀತಿಯನ್ನು ಜಾಗೃತ ಮಾಡುತ್ತವೆ.[ಡಿವಿಜಿ ಮಂಕುತಿಮ್ಮನ ಕಗ್ಗಕ್ಕೆ ಸರಳ ಕನ್ನಡದ ಸ್ಪರ್ಶ]

ಮದುವೆಯ ಕರೆಯೋಲೆ ಮೇಲಿನ ಆಯ್ದ ಸಾಲುಗಳನ್ನು ನಾವು ನೋಡಿಕೊಂಡು ಬರೋಣ
ಬೆಚ್ಚನಾ ಮನೆಯಿರಲು
ವೆಚ್ಚಕ್ಕೆ ಹೊನ್ನಿರಲು
ಇಚ್ಛೆಯನರಿತು ನಡೆವ ಸತಿಯಿರಲು
ಸ್ವರ್ಗಕ್ಕೆ ಕಿಚ್ಚು ಹಚ್ಚೆಂದ ಸರ್ವಜ್ಞ
-------------------
ಹುಲ್ಲಾಗು ಬೆಟ್ಟದಡಿ, ಮನೆಗೆ ಮಲ್ಲಿಗೆಯಾಗು
ಕಲ್ಲಾಗು ಕಷ್ಟಗಳ ಮಳೆ ವಿಧಿ ಸುರಿಯೇ
ಬೆಲ್ಲ ಸಕ್ಕರೆಯಾಗು ದೀನ ದುರ್ಬಲರಿಗೆ
ಎಲ್ಲರೊಳಗೊಂದಾಗು ಮಂಕುತಿಮ್ಮ-ಡಿವಿಜಿ[ಮದುವೆ ಕರೆಯೋಲೆಯಲ್ಲಿ ನೀರಾವರಿ ಜಾಗೃತಿ]
------------------------

ತನುವು ನಿನ್ನದು ಮನವು ನಿನ್ನದು
ಎನ್ನ ಜೀವನ ಧನವು ನಿನ್ನದು-ಕುವೆಂಪು
--------------------------
ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು
ಬಳಸಿಕೊಂಡೆವದನೆ ನಾವು ಅದಕು ಇದಕು ಎದಕು-ದರಾ ಬೇಂದ್ರೆ
--------------
ಏನಾದರು ಆಗು, ಮೊದಲು ಮಾನವನಾಗು-ಸಿದ್ದಯ್ಯ ಪುರಾಣಿಕ್
-------------
ಮೇಲಿನ ಸಾಲುಗಳು ಇಡೀ ಜೀವನದ ಸಾರವನ್ನು, ಮಧುವೆಯ ಬಾಂಧವ್ಯವನ್ನು, ಕಷ್ಟ ಸುಖಗಳ ಅರಿವನ್ನು, ಮಾನವತೆ ತತ್ವವನ್ನು ಸಾರುತ್ತವೆ. ಕುವೆಂಪುರವರ ವಿಶ್ವಮಾನವ ತತ್ವಕ್ಕೆ ತಕ್ಕುದಾದ ಸಾಲುಗಳ ಮೂಲಕ ಮದುವೆಯ ಕರೆಯೋಲೆ ನೀಡಿದ್ದು ಪ್ರತಿಯೊಬ್ಬ ಕನ್ನಡಿಗನ ಹೆಮ್ಮೆಯನ್ನು ಮತ್ತಷ್ಟು ಹೆಚ್ಚಿಸಿದೆ.
-
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Amulya: ಕಿರುತೆರೆಗೆ ಮರಳಿದ 'ಕಮಲಿ' ಖ್ಯಾತಿಯ ಅಮೂಲ್ಯ: 'ಮಹಾಲಕ್ಷ್ಮಿ ಮದುವೆ' ಮೂಲಕ ಹೊಸ ಪಯಣ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್












Click it and Unblock the Notifications