ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉದಯೋನ್ಮುಖ ಕತೆಗಾರ ಅಲಕ ತೀರ್ಥಹಳ್ಳಿಗೆ ‘ಛಂದ’ ಪ್ರಶಸ್ತಿ

By Staff
|
Google Oneindia Kannada News

ಬೆಂಗಳೂರು : ಪ್ರಸಕ್ತ ಸಾಲಿನ ಛಂದ ಪುಸ್ತಕ ಸಂಸ್ಥೆಯ ಬಹುಮಾನ ಅಲಕ ತೀರ್ಥಹಳ್ಳಿ ಅವರಿಗೆ ಸಂದಿದೆ.

ಹೊಸ ಕತೆಗಾರರಿಗೆ ಛಂದ ಪ್ರತಿವರ್ಷ ಬಹುಮಾನದ ಮೂಲಕ ಪ್ರೋತ್ಸಾಹವನ್ನು ನೀಡುತ್ತಾ ಬಂದಿದೆ. ಈ ಸಾಲಿನಲ್ಲಿ ಅಲಕ ತೀರ್ಥಹಳ್ಳಿ ಅವರ ಹಸ್ತಪ್ರತಿ ಪ್ರಶಸ್ತಿಗೆ ಪಾತ್ರವಾಗಿದೆ. ಸಂಸ್ಥೆಯೇ ಪುಸ್ತಕವನ್ನು ಪ್ರಕಟಿಸಿ ಎರಡು ಸಾವಿರ ರೂ.ಗಳ ಬಹುಮಾನ ಮತ್ತು ಪ್ರಶಸ್ತಿಯನ್ನು ನೀಡಲಿದೆ.

ಜನವರಿ 29ರಂದು ಬೆಂಗಳೂರಿನಲ್ಲಿ ಬಹುಮಾನ ಪ್ರದಾನ ಸಮಾರಂಭ ನಡೆಯಲಿದೆ ಎಂದು ಛಂದ ಪುಸ್ತಕದ ವಸುಧೇಂದ್ರ ದಟ್ಸ್‌ಕನ್ನಡಕ್ಕೆ ತಿಳಿಸಿದ್ದಾರೆ.

ಈ ಸ್ಪರ್ಧೆಯಲ್ಲಿ 50 ಕತೆಗಾರರು ಭಾಗವಹಿಸಿದ್ದರು. ತೀರ್ಪುಗಾರರಾಗಿ ಕೇಶವ ಮಳಗಿ ಮತ್ತು ಸುಮಂಗಲಾ ಅವರು ಕಾರ್ಯ ನಿರ್ವಹಿಸಿದ್ದಾರೆ.

(ಇನ್ಫೋ ವಾರ್ತೆ)

ಮುಖಪುಟ / ಸಾಹಿತ್ಯ-ಸಂಸ್ಕೃತಿ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X