ಇನ್ನೊಂದಿಷ್ಟು ವಿಚಿತ್ರಾನ್ನ! ಮತ್ತೊಂದಿಷ್ಟು ವಿಚಿತ್ರಾನ್ನ!!

ಪುಸ್ತಕ ಪ್ರೇಮಿಗಳು ಇನ್ನಷ್ಟು ಬಾಯಿ ಚಪ್ಪರಿಸಲು ಪೂರಕವಾಗುವಂತೆ, ಈ ಭಾನುವಾರ(ಆಗಸ್ಟ್ 12) ಶ್ರೀವತ್ಸ ಜೋಶಿ ಅವರ ಅವಳಿ ಪುಸ್ತಕಗಳು ಬಿಡುಗಡೆಗೆ ಸಿದ್ಧವಾಗಿವೆ. ಅವರಇನ್ನೊಂದಿಷ್ಟು ವಿಚಿತ್ರಾನ್ನ ಮತ್ತು ಮತ್ತೊಂದಿಷ್ಟು ವಿಚಿತ್ರಾನ್ನಕೃತಿಗಳ ಲೋಕಾರ್ಪಣೆ ಸಮಾರಂಭ, ಭಾನುವಾರ ಬೆಳಗ್ಗೆ 10 ಗಂಟೆಗೆ ಆರಂಭವಾಗಲಿದೆ. ಸ್ಥಳ : ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್, ಬಸವನಗುಡಿ, ಬೆಂಗಳೂರು.
ಅಕ್ಷರಗಳ ಮುಖಾಂತರ ಕಚಗುಳಿಯಿಡುವ ಹನಿಗವನಗಳ ಮಂಡಿ ಎಚ್.ಡುಂಡಿರಾಜ್ ಪುಸ್ತಕಗಳ ಬಿಡುಗಡೆ ಮಾಡುವರು. ನಂತರ ಜೋಶಿ ಬಗ್ಗೆ ಮತ್ತು ವಿಚಿತ್ರಾನ್ನದ ರುಚಿ ಹೇಗಿದೆ ಎಂಬ ಬಗ್ಗೆ ಮಾತನಾಡಲಿದ್ದಾರೆ.
ಪತ್ರಿಕೋದ್ಯಮದಲ್ಲಿ ಕಳೆದುಹೋಗದೇ, ಅಂಕಣದ ಮೇಲೆ ಅಂಕಣ ಬರೆಯುತ್ತಿರುವ ವಿಜಯ ಕರ್ನಾಟಕ ಸಂಪಾದಕ ವಿಶ್ವೇಶ್ವರ ಭಟ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ರಾಜ್ಯ ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಪಾತ್ರರಾದ ಅಮೆರಿಕನ್ನಡಿಗ ವಲ್ಲೀಶ ಶಾಸ್ತ್ರಿ ಇನ್ನೊಬ್ಬ ಮುಖ್ಯ ಅತಿಥಿ.
ಮೈಸೂರಿನ ಗೀತಾ ಬುಕ್ ಹೌಸ್, ವಿಚಿತ್ರಾನ್ನ ರುಚಿ ಹೆಚ್ಚುವಂತೆ ಅಂದವಾಗಿ ಮುದ್ರಿಸಿದೆ. ಅ.ರಾ.ಮಿತ್ರ,2005ರಲ್ಲಿ ಶ್ರೀವತ್ಸ ಜೋಶಿ ಅವರ ವಿಚಿತ್ರಾನ್ನ ಪುಸ್ತಕವನ್ನು ಬಿಡುಗಡೆ ಮಾಡಿ, ಇನ್ನಷ್ಟು ವಿಚಿತ್ರಾನ್ನ ಬೇಕೆಂದು ಅಪ್ಪಣೆ ಮಾಡಿದ್ದರು. ಬಡಿಸುವುದರಲ್ಲಿ ಜೋಶಿ ಉದಾರತೆ ತೋರಿಸಿದ್ದಾರೆ. ಹೀಗಾಗಿ ಏಕಕಾಲದಲ್ಲಿ ಎರಡು ಪುಸ್ತಕಗಳು ಸಿದ್ಧಗೊಂಡಿವೆ.
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದು, ಅಂಕಣ ಬರಹಗಳಿಗೆ ಒಂದು ಘನತೆ ತಂದುಕೊಟ್ಟವರು ಹಾ.ಮ.ನಾಯಕ್. ಈಗಂತೂ ಪತ್ರಿಕೆಗಳ ತುಂಬ ಅಂಕಣಗಳದೇ, ದರ್ಬಾರು. ಅಂತರ್ಜಾಲದಲ್ಲಿ ಅಂಕಣ ಬರಹಗಳ ಸುಗ್ಗಿ ವಿರಳವಾಗಿದ್ದ ಕಾಲದಲ್ಲೇ, ಇಂತಹ ಪ್ರಯೋಗಕ್ಕೆ ಮುಂದಾಗಿದ್ದು ದಟ್ಸ್ ಕನ್ನಡ. ನಿರಂತರವಾಗಿ ವಿಚಿತ್ರಾನ್ನಪ್ರಕಟವಾಗಿದೆ. 250ವಾರಗಳನ್ನು ದಾಟಿ ಮುನ್ನುಗ್ಗುತ್ತಿರುವುದೇ, ಅಂಕಣದ ಜನಪ್ರಿಯತೆಗೆ ನಿದರ್ಶನ.
ಕರ್ನಾಟಕದಲ್ಲಿ ಮುಂಗಾರು ಮಳೆ ಸುರಿಯುತ್ತಿದೆ.. ಚಳಿಗಾಲಕ್ಕೆ ಮೊದಲೇ ಹಾಳು ಚಳಿ ಮೈಕೊರೆಯುತ್ತಿದೆ. ಈ ಹೊತ್ತಿನಲ್ಲಿ ಬಿಸಿಬಿಸಿ ವಿಚಿತ್ರಾನ್ನ ಸಿದ್ಧಗೊಂಡಿದೆ.ಗುಡ್! ಬನ್ನಿ ಸಮಾರಂಭಕ್ಕೆ.. ಅಕ್ಷರ ಮೋಹಿತರಿಗೆ, ಸಮಾರಂಭಕ್ಕೆ ವಿಶೇಷ ಆಹ್ವಾನ .(ದಟ್ಸ್ ಕನ್ನಡ ವಾರ್ತೆ)
-
Kannada: ನಮ್ಮ ರಕ್ತವೇ ಕನ್ನಡ, ಅದನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ -
Love Mocktail 3 Row: ಕೃತಿಚೌರ್ಯ ವಿವಾದದ ನಡುವೆ ಸತ್ಯ ಮತ್ತು ನೈತಿಕತೆ ಚರ್ಚೆ: ಮಧು ವೈ.ಎನ್ ಬರಹ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ












Click it and Unblock the Notifications