ಜು.27ರಂದು ಅಮೆರಿಕನ್ನಡತಿಯರ ಎರಡು ಪುಸ್ತಕ ಬಿಡುಗಡೆ

ಜುಲೈ ತಿಂಗಳ ಕೊನೆಯ ಭಾನುವಾರ (27ನೇ ತಾರೀಖು) ಬೆಳಗ್ಗೆ 10 ಗಂಟೆಗೆ ಬನಶಂಕರಿ ಎರಡನೇ ಹಂತದಲ್ಲಿರುವ ಸುಚಿತ್ರ ಫಿಲ್ಮ್ ಸೊಸೈಟಿಯ ಸಭಾಂಗಣದಲ್ಲಿ ಈ ಇಬ್ಬರ ಕೃತಿಗಳು ಬಿಡುಗಡೆಯಾಗಲಿವೆ. ಇವೆರಡರಲ್ಲಿ ತ್ರಿವೇಣಿ ಶ್ರೀನಿವಾಸ್ ಅವರ ಕೃತಿ ಅಮೆರಿಕದಲ್ಲಿ ಈಗಾಗಲೇ ಬಿಡುಗಡೆಯಾಗಿ ಜನಪ್ರಿಯತೆಯನ್ನು ಗಳಿಸಿದೆ.
"ತುಳಸಿಯಮ್ಮ" ಖ್ಯಾತಿಯ ತ್ರಿವೇಣಿ ಶ್ರೀನಿವಾಸರಾವ್ "ತುಳಸಿವನ"ದ ಘಮಲು ಕರ್ನಾಟಕದಾದ್ಯಂತ ಹಬ್ಬಿಸುವ ಹಂಬಲ ಹೊತ್ತಿದ್ದಾರೆ. ಅವರ ಈ ಪುಸ್ತಕದಲ್ಲಿನ ಅನೇಕ ಪ್ರಬಂಧಗಳು ದಟ್ಸ್ಕನ್ನಡ ಅಂತರ್ಜಾಲ ತಾಣದಲ್ಲಿ ಪ್ರಕಟವಾಗಿವೆ. ಮತ್ತೊಬ್ಬರು "ಸುಪ್ತದೀಪ್ತಿ" ಕಾವ್ಯನಾಮದ ಜ್ಯೋತಿ ಮಹಾದೇವ್ ತನ್ನ "ಭಾವಬಿಂಬ" ಕವನಸಂಕಲನಕ್ಕೆ ಕನ್ನಡಿ ಹಿಡಿಯಲಿದ್ದಾರೆ.
ನೀವೆಲ್ಲ ಅಲ್ಲಿಗೆ ಬರಬೇಕು- ಇವರಿಬ್ಬರ ಬೆನ್ನು ತಟ್ಟಲು, ಕೈ ಕುಲುಕಲು, ನೆತ್ತಿ ಸವರಿ ಹರಸಲು. ಒಂದೇ ವೇದಿಕೆಯಲ್ಲಿ ಇಬ್ಬರು ಸಾಹಿತ್ಯ ಸೋದರಿಯರ ಕಲ್ಪನೆಯ ನೌಕೆಗಳು ಓದುಗಭಿಯಾನ ಹೊರಡಲಿವೆ..
ಅಂದು ಇನ್ನೂ ಯಾರ್ಯಾರಿರುತ್ತಾರೆ? ಆ ವಿವರಗಳಿಗೆ ನಿಮ್ಮ ಕೌತುಕದ ಮರಿ ಗರಿಗೆದರಿ ಕಾದಿರಲಿ. ನೀವೂ ಬನ್ನಿ ನಿಮ್ಮ ಗೆಳೆಯರನ್ನೂ ಕರೆತನ್ನಿ.
ಮತ್ತೊಮ್ಮೆ ಪುಸ್ತಕಗಳು ಬಿಡುಗಡೆಯಾಗುವ ಸ್ಥಳ ಮತ್ತು ಸಮಯವನ್ನು ನಿಮ್ಮ ಡೈರಿಯಲ್ಲಿ ಗುರುತುಹಾಕಿಕೊಳ್ಳಿ.
ಸ್ಥಳ : ಸುಚಿತ್ರ ಫಿಲ್ಮ್ ಸೊಸೈಟಿ, 36, 9ನೇ ಮುಖ್ಯಬೀದಿ ಬಿ.ವಿ.ಕಾರಂತ ರಸ್ತೆ, ಬನಶಂಕರಿ ಎರಡನೇ ಹಂತ, ಬೆಂಗಳೂರು - 560 070.
ದಿನಾಂಕ : 27ನೇ ಜುಲೈ 2008 (ಭಾನುವಾರ)
ಸಮಯ : ಬೆಳಿಗ್ಗೆ 10 ಗಂಟೆಗೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications