ಚಂದ್ರಯಾನ ಪುಸ್ತಕ ಬಿಡುಗಡೆ ಮಾಡಿದ ಕಲಾಂ

ಕಾನ್ಸಾಂಟಿನ್ ಕಿವುಡನಾಗಿದ್ದ. ಆದರೆ ಅಧ್ಯಯನದಲ್ಲಿ ಅತೀವ ಆಸಕ್ತಿ ಹೊಂದಿದ್ದ. ತನ್ನ ಅಧ್ಯಯನದಿಂದ ವಿವಿಧ ಸಮೀಕರಣಗಳನ್ನು ರಚಿಸಿದ್ದ. ಆ ಮೂಲಕ ಚಂದ್ರನ ಮೇಲೆ ಮನುಷ್ಯ ಹೋಗಬಹುದು ಎಂದು ತಿಳಿಸಿದ್ದ. ಇಂದು ಆತನ ಊಹೆ ನಿಜವಾಗಿದೆ. ನಾವು ಚಂದ್ರನ ಮೇಲೆ ಹೊಗಿ ಬಂದಿದ್ದೇವೆ. ಹೀಗಾಗಿ ಚಂದ್ರಯಾನದ ಕಲ್ಪನೆಯ ಜನಕ ಕಾನ್ಸಾಂಟಿನ್ ಎಂದರು.
ಪುಸ್ತಕ ಬಿಡುಗಡೆ ಮಾಡಿದ ನಂತರ ಪ್ರಥಮ ಪ್ರತಿಯನ್ನು 'ದಿ ವೀಕ್' ನ ಸ್ಥಾನಿಕ ಸಂಪಾದಕರಾದ ಕೆಎಸ್ ಸಚ್ಚಿದಾನಂದ ಮೂರ್ತಿ ಅವರಿಗೆ ನೀಡಿದರು. ನಂತರ ಪುಸ್ತಕದಲ್ಲಿನ ವಿವಿಧ ಅಧ್ಯಾಯಗಳ ಬಗ್ಗೆ ಮಾಹಿತಿ ಪಡೆದರು. ಚಂದ್ರಯಾನ ಉಡ್ಡಯನದ ನಂತರ ಅಮೇರಿಕಾದ ನಾಸಾ, ಒಬಾಮಾ ನೀಡಿದ್ದ ಪ್ರತಿಕ್ರಿಯೆ ಹಾಗೂ ಆ ಬಗ್ಗೆ ಮಾಧವನ್ ನಾಯರ್ ನೀಡಿದ್ದ ವಿವರಣೆ ಇರುವ ಅಧ್ಯಾಯವನ್ನು ಲೇಖಕ ಶಿವಪ್ರಸಾದ್ ಅವರಿಂದ ಓದಿಸಿ, ವಿವರಣೆ ಪಡೆದರು.
ನಂತರ ಮತ್ತೋರ್ವ ವಿಜಯ ಕರ್ನಾಟಕ ನವದೆಹಲಿ ಪ್ರತಿನಿಧಿ ವಿನಾಯಕ್ ಭಟ್ ಬರೆದಿದ್ದ ದಿ ಗ್ರೇಟ್ ಮೂನ್ ಹೋಕ್ಸ್-1835 ಅಧ್ಯಾಯದ ಬಗ್ಗೆಯೂ ವಿವರಣೆ ಪಡೆದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿನಾಯಕ್ ಭಟ್ ಅವರಿಗೆ ಅವರ ಲೇಖನದಲ್ಲಿದ್ದ ಫೋಟೋ ತೋರಿಸಿ, ಈ ಬಗ್ಗೆ ವಿವರಣೆ ಕೇಳಿ ಆನಂದಿಸಿದರು.
'ಚಂದ್ರಯಾನ ಪುಸ್ತಕ ಬರೆಯಲು ಒಂದು ವರ್ಷ ತೆಗೆದುಕೊಂಡಿದ್ದೀರಿ. ಐತಿಹಾಸಿಕ ಯೋಜನೆಯಾದ ಚಂದ್ರಯಾನ ಕುರಿತ ಸಮಗ್ರ ವಿವರ ಇರುವ ಪುಸ್ತಕವನ್ನು ಹೊರ ತಂದಿರುವುದು ಉತ್ತಮ ಪ್ರಯತ್ನ' ಎಂದು ಶ್ಲಾಘಿಸಿದರು.
ಈ ಸಂದರ್ಭದಲ್ಲಿ 'ಪ್ರಜಾವಾಣಿ' ವಿಶೇಷ ಪ್ರತಿನಿಧಿ ದಿನೇಶ್ ಅಮಿನ್ ಮಟ್ಟು, 'ಡೆಕ್ಕನ್ ಹೆರಾಲ್ಡ್' ಸ್ಥಾನಿಕ ಸಂಪಾದಕ ಬಿ.ಎಸ್. ಅರುಣ್, ಕರ್ನಾಟಕ ವಾರ್ತಾ ಕೇಂದ್ರದ ಸಹಾಯಕ ನಿರ್ದೇಶಕ ವೀರಣ್ಣ ಕಮ್ಮಾರ, 'ಸುವರ್ಣ ಚಾನೆಲ್ 'ವರದಿಗಾರ ಪ್ರಶಾಂತ್ ನಾತೂ ಉಪಸ್ಥಿತರಿದ್ದರು. 'ಚಂದ್ರಯಾನ' ಪುಸ್ತಕಕ್ಕೆ ಆಕರ್ಷಕವಾಗಿ ಮುಖಪುಟ ವಿನ್ಯಾಸವನ್ನು 'ದ ಸಂಡೆ ಇಂಡಿಯನ್' ಪತ್ರಿಕೆಯ ವಿನ್ಯಾಸಗಾರ ವೀರೇಶ್ ಹೊಗೆಸೊಪ್ಪಿನವರ್ ಅವರು ಮಾಡಿದ್ದಾರೆ. ಪುಸ್ತಕದ ಬಿಡಿ ಪ್ರತಿ ಬೆಲೆ 120 ರು ಗಳಾಗಿವೆ.
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications