ಚಂದ್ರಯಾನ ಪುಸ್ತಕ ಬಿಡುಗಡೆ ಮಾಡಿದ ಕಲಾಂ

ಕಾನ್ಸಾಂಟಿನ್ ಕಿವುಡನಾಗಿದ್ದ. ಆದರೆ ಅಧ್ಯಯನದಲ್ಲಿ ಅತೀವ ಆಸಕ್ತಿ ಹೊಂದಿದ್ದ. ತನ್ನ ಅಧ್ಯಯನದಿಂದ ವಿವಿಧ ಸಮೀಕರಣಗಳನ್ನು ರಚಿಸಿದ್ದ. ಆ ಮೂಲಕ ಚಂದ್ರನ ಮೇಲೆ ಮನುಷ್ಯ ಹೋಗಬಹುದು ಎಂದು ತಿಳಿಸಿದ್ದ. ಇಂದು ಆತನ ಊಹೆ ನಿಜವಾಗಿದೆ. ನಾವು ಚಂದ್ರನ ಮೇಲೆ ಹೊಗಿ ಬಂದಿದ್ದೇವೆ. ಹೀಗಾಗಿ ಚಂದ್ರಯಾನದ ಕಲ್ಪನೆಯ ಜನಕ ಕಾನ್ಸಾಂಟಿನ್ ಎಂದರು.
ಪುಸ್ತಕ ಬಿಡುಗಡೆ ಮಾಡಿದ ನಂತರ ಪ್ರಥಮ ಪ್ರತಿಯನ್ನು 'ದಿ ವೀಕ್' ನ ಸ್ಥಾನಿಕ ಸಂಪಾದಕರಾದ ಕೆಎಸ್ ಸಚ್ಚಿದಾನಂದ ಮೂರ್ತಿ ಅವರಿಗೆ ನೀಡಿದರು. ನಂತರ ಪುಸ್ತಕದಲ್ಲಿನ ವಿವಿಧ ಅಧ್ಯಾಯಗಳ ಬಗ್ಗೆ ಮಾಹಿತಿ ಪಡೆದರು. ಚಂದ್ರಯಾನ ಉಡ್ಡಯನದ ನಂತರ ಅಮೇರಿಕಾದ ನಾಸಾ, ಒಬಾಮಾ ನೀಡಿದ್ದ ಪ್ರತಿಕ್ರಿಯೆ ಹಾಗೂ ಆ ಬಗ್ಗೆ ಮಾಧವನ್ ನಾಯರ್ ನೀಡಿದ್ದ ವಿವರಣೆ ಇರುವ ಅಧ್ಯಾಯವನ್ನು ಲೇಖಕ ಶಿವಪ್ರಸಾದ್ ಅವರಿಂದ ಓದಿಸಿ, ವಿವರಣೆ ಪಡೆದರು.
ನಂತರ ಮತ್ತೋರ್ವ ವಿಜಯ ಕರ್ನಾಟಕ ನವದೆಹಲಿ ಪ್ರತಿನಿಧಿ ವಿನಾಯಕ್ ಭಟ್ ಬರೆದಿದ್ದ ದಿ ಗ್ರೇಟ್ ಮೂನ್ ಹೋಕ್ಸ್-1835 ಅಧ್ಯಾಯದ ಬಗ್ಗೆಯೂ ವಿವರಣೆ ಪಡೆದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿನಾಯಕ್ ಭಟ್ ಅವರಿಗೆ ಅವರ ಲೇಖನದಲ್ಲಿದ್ದ ಫೋಟೋ ತೋರಿಸಿ, ಈ ಬಗ್ಗೆ ವಿವರಣೆ ಕೇಳಿ ಆನಂದಿಸಿದರು.
'ಚಂದ್ರಯಾನ ಪುಸ್ತಕ ಬರೆಯಲು ಒಂದು ವರ್ಷ ತೆಗೆದುಕೊಂಡಿದ್ದೀರಿ. ಐತಿಹಾಸಿಕ ಯೋಜನೆಯಾದ ಚಂದ್ರಯಾನ ಕುರಿತ ಸಮಗ್ರ ವಿವರ ಇರುವ ಪುಸ್ತಕವನ್ನು ಹೊರ ತಂದಿರುವುದು ಉತ್ತಮ ಪ್ರಯತ್ನ' ಎಂದು ಶ್ಲಾಘಿಸಿದರು.
ಈ ಸಂದರ್ಭದಲ್ಲಿ 'ಪ್ರಜಾವಾಣಿ' ವಿಶೇಷ ಪ್ರತಿನಿಧಿ ದಿನೇಶ್ ಅಮಿನ್ ಮಟ್ಟು, 'ಡೆಕ್ಕನ್ ಹೆರಾಲ್ಡ್' ಸ್ಥಾನಿಕ ಸಂಪಾದಕ ಬಿ.ಎಸ್. ಅರುಣ್, ಕರ್ನಾಟಕ ವಾರ್ತಾ ಕೇಂದ್ರದ ಸಹಾಯಕ ನಿರ್ದೇಶಕ ವೀರಣ್ಣ ಕಮ್ಮಾರ, 'ಸುವರ್ಣ ಚಾನೆಲ್ 'ವರದಿಗಾರ ಪ್ರಶಾಂತ್ ನಾತೂ ಉಪಸ್ಥಿತರಿದ್ದರು. 'ಚಂದ್ರಯಾನ' ಪುಸ್ತಕಕ್ಕೆ ಆಕರ್ಷಕವಾಗಿ ಮುಖಪುಟ ವಿನ್ಯಾಸವನ್ನು 'ದ ಸಂಡೆ ಇಂಡಿಯನ್' ಪತ್ರಿಕೆಯ ವಿನ್ಯಾಸಗಾರ ವೀರೇಶ್ ಹೊಗೆಸೊಪ್ಪಿನವರ್ ಅವರು ಮಾಡಿದ್ದಾರೆ. ಪುಸ್ತಕದ ಬಿಡಿ ಪ್ರತಿ ಬೆಲೆ 120 ರು ಗಳಾಗಿವೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications